ನಮ್ಮ ಮೆಟ್ರೋ ಮಾರ್ಗ ಇನ್ನಷ್ಟು ವಿಸ್ತಾರ; ಮೂರನೇ ಹಂತದ ಯೋಜನೆಗೆ ಅಂತಿಮ ರೂಪ!

42 ಕಿ.ಮೀ. ವಿಸ್ತೀರ್ಣದ ಈ ಯೋಜನೆ ಎರಡು ಕಾರಿಡಾರ್‌ಗಳನ್ನು ಒಳಗೊಂಡಿದೆ. ಜೆ.ಪಿ.ನಗರದಿಂದ ಹೆಬ್ಬಾಳದವದರೆಗಿನ 31 ಕಿ.ಮೀ. ಹಾಗೂ ಹೊಸಹಳ್ಳಿ ಟೋಲ್‌ನಿಂದ ಕಡಬಗವರೆಗಿನ 11 ಕಿ.ಮೀ. ಈ ಯೋಜನೆಯ ವ್ಯಾಪ್ತಿಗೆ ಬರುತ್ತದೆ. ಒಟ್ಟು 31 ನಿಲ್ದಾಣಗಳು ಈ ಮಾರ್ಗದಲ್ಲಿ ತಲೆಯೆತ್ತಲಿವೆ.

ನಮ್ಮ ಮೆಟ್ರೋ ಮಾರ್ಗ ಇನ್ನಷ್ಟು ವಿಸ್ತಾರ; ಮೂರನೇ ಹಂತದ ಯೋಜನೆಗೆ ಅಂತಿಮ ರೂಪ!
Linkup
: ಇನ್ನಷ್ಟು ವಿಸ್ತಾರವಾಗಲಿದೆ. ಮೂರನೇ ಹಂತದ ಯೋಜನೆಯನ್ನು ಅಂತಿಮಗೊಳಿಸಲಾಗಿದ್ದು, 2027-28ರ ವೇಳೆಗೆ ಸೇವೆಗೆ ಸಿದ್ಧವಾಗಲಿದೆ. 42 ಕಿ.ಮೀ. ವಿಸ್ತೀರ್ಣದ ಈ ಎರಡು ಕಾರಿಡಾರ್‌ಗಳನ್ನು ಒಳಗೊಂಡಿದೆ. ಜೆ.ಪಿ.ನಗರದಿಂದ ಹೆಬ್ಬಾಳದವದರೆಗಿನ 31 ಕಿ.ಮೀ. ಹಾಗೂ ಹೊಸಹಳ್ಳಿ ಟೋಲ್‌ನಿಂದ ಕಡಬಗವರೆಗಿನ 11 ಕಿ.ಮೀ. ಈ ಯೋಜನೆಯ ವ್ಯಾಪ್ತಿಗೆ ಬರುತ್ತದೆ. ಒಟ್ಟು 31 ನಿಲ್ದಾಣಗಳು ಈ ಮಾರ್ಗದಲ್ಲಿ ತಲೆಯೆತ್ತಲಿವೆ. ಇದರಲ್ಲಿ 22 ನಿಲ್ದಾಣಗಳು ಕಾರಿಡಾರ್‌ 1ರಲ್ಲಿ ಹಾಗೂ ಉಳಿದ 9 ಕಾರಿಡಾರ್‌ ಎರಡರಲ್ಲಿ ತಲೆಯೆತ್ತಲಿವೆ. ಈ ಯೋಜನೆ ಉಪನಗರ ರೈಲು, ಬಸ್‌ ಡಿಪೋಗಳು ಸೇರಿದಂತೆ 9 ಕಡೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಸೋಮನಹಳ್ಳಿ ಕ್ರಾಸ್‌ ಇಂಟರ್‌ಚೇಂಜ್‌ ನಿಲ್ದಾಣವಾಗಿ ಕಾರ್ಯನಿರ್ವಹಿಸಲಿದೆ. ಹೆಬ್ಬಾಳದಲ್ಲಿ ಕೊನೆಗೊಳ್ಳುವ ಮೊದಲ ಕಾರಿಡಾರ್‌ ಏರ್‌ಪೋರ್ಟ್‌ ಲೈನ್‌ನ ಹಂತ- 2 ಮಾರ್ಗದೊಂದಿಗೆ ಸಂಪರ್ಕ ಬೆಸೆಯಲಿದೆ. ಇದು ಕೆಆರ್‌ಪುರಂನಿಂದ ಹೆಬ್ಬಾಳ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗಲಿದೆ. ಜೆ.ಪಿ.ನಗರದ ನಿಲ್ದಾಣವು ಹಸಿರು ಮಾರ್ಗದ ಜೆಪಿನಗರ ನಿಲ್ದಾಣ, ಕಾಮಾಕ್ಯ ಮೆಟ್ರೊ ನಿಲ್ದಾಣ ಹಾಗೂ ನೇರಳೆ ಮಾರ್ಗದ ಮೈಸೂರು ರಸ್ತೆ ನಿಲ್ದಾಣ, ಸುಮನಹಳ್ಳಿ ಕ್ರಾಸ್‌ ಎರಡೂ ಹೊಸ ಕಾರಿಡಾರ್‌ಗಳಿಗೆ ಸಂಪರ್ಕ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಹಸಿರು ಮಾರ್ಗದ ಪೀಣ್ಯ, ಲೊಟ್ಟೆಗೊಲ್ಲಹಳ್ಳಿ ಉದ್ದೇಶಿತ ಉಪನಗರ ರೈಲು ಕಾರಿಡಾರ್‌ಗೆ ಸಂಪರ್ಕ ಕಲ್ಪಿಸುತ್ತದೆ. ಮುಂಬರುವ ಉಪನಗರ ರೈಲು ನಿಲ್ದಾಣದೊಂದಿಗೆ ಹೆಬ್ಬಾಳ, ರೈಲು ನಿಲ್ದಾಣ, ಬಿಎಂಟಿಸಿ ಡಿಪೋವನ್ನು ಸಂಪರ್ಕಿಸುತ್ತದೆ. ಕಾರಿಡಾರ್‌-1ರಲ್ಲಿ ಬರುವ ನಿಲ್ದಾಣಗಳು ಜೆಪಿನಗರ 4ನೇ ಹಂತ, ಜೆಪಿನಗರ 5ನೇ ಹಂತ, ಜೆಪಿ ನಗರ, ಕದಿರೇನಹಳ್ಳಿ, ಕಾಮಾಕ್ಯ ಬಸ್‌ ನಿಲ್ದಾಣ, ಹೊಸಕೆರೆಹಳ್ಳಿ ಕ್ರಾಸ್‌, ಪಿಇಎಸ್‌ ಕಾಲೇಜು, ಮೈಸೂರು ರಸ್ತೆ ನಾಗರಬಾವಿ ವೃತ್ತ, ವಿನಾಯಕ ಲೇಔಟ್‌, ಅಂಬೇಡ್ಕರ್‌ ಇನ್‌ಸ್ಟಿಟ್ಯೂಟ್‌ ಆಫ್‌ ಎಂಜಿನಿಯರಿಂಗ್‌, ಬಿಡಿಎ ಕಾಂಪ್ಲೆಕ್ಸ್‌, ಸುಮನಹಳ್ಳಿ ಕ್ರಾಸ್‌, ಚೌಡೇಶ್ವರಿನಗರ, ಫ್ರೀಡಂ ಫೈಟರ್‌ಕ್ರಾಸ್‌, ಕಂಠೀರವ ಸ್ಟೇಡಿಯಂ, ಪೀಣ್ಯ, ಬಾಹುಬಲಿ ನಗರ, ಬಿಇಎಲ್‌ ವೃತ್ತ, ಪಟೇಲಪ್ಪ ಲೇಔಟ್‌, ಹೆಬ್ಬಾಳ, ಕೆಂಪಾಪುರ ನಿಲ್ದಾಣಗಳಿರಲಿವೆ. ಕಾರಿಡಾರ್‌-2ರಲ್ಲಿ ಬರುವ ನಿಲ್ದಾಣಗಳು ಹೊಸಹಳ್ಳಿ, ಕೆಎಚ್‌ಬಿ ಕಾಲೊನಿ, ವಿನಾಯಕನಗರ, ಸುಮನಹಳ್ಳಿ ಕ್ರಾಸ್‌, ಸುಂಕದಕಟ್ಟೆ, ಹೇರೋಹಳ್ಳಿ, ಬ್ಯಾಡರಹಳ್ಳಿ, ಫಾರೆಸ್ಟ್‌ ಗೇಟ್‌, ಕಡಬಗೆರೆ ನಿಲ್ದಾಣಗಳು ಇರಲಿವೆ. ಇನ್ನಷ್ಟು ಭೂಸ್ವಾಧೀನ ಬೈಯಪ್ಪನಹಳ್ಳಿ- ವೈಟ್‌ಫೀಲ್ಡ್‌ವರೆಗೆ 15.05.ಕಿ.ಮೀ. ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ 1,77,694.12 ಚ.ಮೀ. ವಿಸ್ತೀರ್ಣದ ಪ್ರದೇಶವು ವಯಾಡಕ್ಟ್ ಮತ್ತು ನಿಲ್ದಾಣಗಳಿಗೆ ಅಗತ್ಯವಾಗಿ ಬೇಕಾದ ಜಾಗದಲ್ಲಿ 1,73,786.88 ಚ.ಮೀ. ಪ್ರದೇಶವನ್ನು ಎಂಜಿನಿಯರಿಂಗ್‌ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ಕಾಡುಗೋಡಿ ಡಿಪೋಗೆ ಬೇಕಾದ 45 ಎಕರೆ ಅರಣ್ಯ ಭೂಮಿಯನ್ನು ಸಹ ಸ್ವಾಧೀನಪಡಿಸಿಕೊಂಡು ಹಸ್ತಾಂತರಿಸಲಾಗಿದೆ. ಹಾಗೆಯೇ, ನಾಗಸಂದ್ರದಿಂದ ಬಿಐಇಸಿವರೆಗೆ 3 ಕಿ.ಮೀ. ವ್ಯಾಪ್ತಿಗೆ ಬೇಕಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಎಂಜಿನಿಯರಿಂಗ್‌ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ಕೊತ್ತನೂರು ಡಿಪೋಗೆ ಅಗತ್ಯವಿರುವ 32.6 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಎಂಜಿನಿಯರಿಂಗ್‌ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ಜಿಂದಾಲ್‌ ಮತ್ತು ಪ್ರೆಸ್ಟೀಜ್‌ ಲೇಔಟ್‌ ಮೂಲಕ ಅಂಚೆಪಾಳ್ಯ ಮತ್ತು ಇತರ ಹಳ್ಳಿಗಳಿಂದ ಚಿಕ್ಕಬಿದರಕಲ್ಲು ಮೆಟ್ರೊ ನಿಲ್ದಾಣಕ್ಕೆ ರಸ್ತೆ ಸಂಪರ್ಕವನ್ನು ಒದಗಿಸಲು 1885.11 ಚ.ಮೀ. ಹೆಚ್ಚುವರಿ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು, ನ್ಯಾಯಾಲಯವು ರದ್ದುಗೊಳಿಸಿದೆ. ಹೀಗಾಗಿ, ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಬಿಎಂಆರ್‌ಸಿಎಲ್‌ ಮುಂದಾಗುತ್ತಿದೆ. ಇನ್ನು ಪಾಟರಿ ಟೌನ್‌ ನಿಲ್ದಾಣಕ್ಕೆ ಬೇಕಾಗಿರುವ ಹೆಚ್ಚುವರಿ 222.90 ಚ.ಮೀ. ವಿಸ್ತೀರ್ಣಕ್ಕೆ ಹಾಗೂ ರಾಷ್ಟ್ರೀಯ ಮಿಲಿಟರಿ ಸ್ಕೂಲ್‌ ನಿಲ್ದಾಣಕ್ಕಾಗಿ ಅವಶ್ಯಕತೆ ಇರುವ 883.00 ಚ.ಮೀ. ವಿಸ್ತೀರ್ಣಕ್ಕೆ ಅಂತಿಮ ಅಧಿಸೂಚನೆಯ ಪ್ರಸ್ತಾವನೆಯನ್ನು ವಿಶೇಷ ಭೂಸ್ವಾಧೀನಾಧಿಕಾರಿಯವರಿಗೆ ಕಳುಹಿಸಲಾಗಿದೆ. ಪರಿಹಾರ ಹಸ್ತಾಂತರ ಡೈರಿ ವೃತ್ತದಿಂದ ನಾಗವಾರದವರೆಗಿನ ಸುರಂಗಮಾರ್ಗಕ್ಕೆ ಭೂಸ್ವಾಧೀನಪಡಿಸಿಕೊಂಡ ಹಿನ್ನೆಲೆಯಲ್ಲಿ ಪರಿಹಾರಧನ ವಿತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಹಂತ- 2ರಲ್ಲಿ 6487.74 ಕೋಟಿ ರೂ., ಹಂತ- 2ಎ 398.48 ಕೋಟಿ ರೂ. ಹಾಗೂ ಹಂತ-2ಬಿಯಲ್ಲಿ ಒಟ್ಟು 3116 ಸ್ವತ್ತುಗಳಿಗೆ 1381.71 ಕೋಟಿ ಭೂ ಪರಿಹಾರವನ್ನು ಪಾವತಿಸಲಾಗಿದೆ. ಇಲ್ಲಿಯವರೆಗೆ ಪುನರ್ವಸತಿ ಸೌಲಭ್ಯಗಳ ಕುರಿತು 755 ಭೂಮಾಲೀಕರಿಗೆ ಹಾಗೂ 2338 ಅನುಭವದಾರರಿಗೆ ಒಟ್ಟು 84.08 ಕೋಟಿ ರೂ. ಪಾವತಿ ಮಾಡಲಾಗಿದೆ.