ಬೆಂಗಳೂರು: ಕಳ್ಳನನ್ನು ಎರಡು ಕಿಮೀ ಬೆನ್ನಟ್ಟಿ ಹಿಡಿದ ಆಟೋ ಚಾಲಕ

ಗ್ಯಾಸ್‌ ಸಿಲಿಂಡರ್‌ ಪೂರೈಕೆ ಮಾಡುವ ಆಟೋ ಚಾಲಕ ರುದ್ರೇಶ್‌ ಎಂಬವರು ಖದೀಮ ಕೇಶವಮೂರ್ತಿಯನ್ನು ಸುಮಾರು 2 ಕಿಲೋ ಮೀಟರ್‌ ಹಿಂಬಾಲಿಸಿ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ರುದ್ರೇಶ್‌ಗೆ ನಗರ ಪೊಲೀಸ್‌ ಆಯುಕ್ತರು ಸೂಕ್ತ ಬಹುಮಾನ ಘೋಷಿಸಿದ್ದಾರೆ.

ಬೆಂಗಳೂರು: ಕಳ್ಳನನ್ನು ಎರಡು ಕಿಮೀ ಬೆನ್ನಟ್ಟಿ ಹಿಡಿದ ಆಟೋ ಚಾಲಕ
Linkup
ಬೆಂಗಳೂರು: ಮಹಿಳೆಯೊಬ್ಬರ ಸರಗಳವು ಮಾಡಿ ಪರಾರಿಯಾಗುತ್ತಿದ್ದ ಆರೋಪಿಯೊಬ್ಬನನ್ನು ಸಿನಿಮಿಯ ಶೈಲಿಯಲ್ಲಿಆಟೋ ಚಾಲಕರೊಬ್ಬರು ಸುಮಾರು ಎರಡು ಕಿಲೋ ಮೀಟರ್‌ ಹಿಂಬಾಲಿಸಿ ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಾಬಸಪೇಟೆ ನಿವಾಸಿ ಕೇಶವಮೂರ್ತಿ(31) ಬಂಧಿತ ಆರೋಪಿ. ಆರೋಪಿಯಿಂದ 40 ಸಾವಿರ ರೂ. ಮೌಲ್ಯದ 9.5 ಗ್ರಾಂ ಚಿನ್ನದ ಸರ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದರು. ಕಸ್ತೂರಿನಗರ ಕಟ್ಟಡ ಕುಸಿತ ಪ್ರಕರಣ: 15 ಮಂದಿ ಜೀವ ಉಳಿಸಿದ ಭದ್ರತಾ ಸಿಬ್ಬಂದಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ ಮಾಡುವ ಆಟೋ ಚಾಲಕ ರುದ್ರೇಶ್‌ ಎಂಬವರು ಕೇಶವಮೂರ್ತಿಯನ್ನು ಸುಮಾರು 2 ಕಿಲೋ ಮೀಟರ್‌ ಹಿಂಬಾಲಿಸಿ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಚಿಕ್ಕಬಾಣವಾರ ನಿವಾಸಿ ಪುಷ್ಪ(32) ಎಂಬವರು ಪಕ್ಕದ ಮನೆಯ ಮಹಿಳೆಯೊಬ್ಬರ ಜತೆ ತಮ್ಮ ಒಂದು ವರ್ಷದ ಮಗು ಕರೆದುಕೊಂಡು ಸಮೀಪದಲ್ಲಿರುವ ದುರ್ಗಾಪರಮೇಶ್ವರಿ ದೇವಾಲಯಕ್ಕೆ ನಡೆದುಕೊಂಡು ಹೋಗಿದ್ದರು. ಇವರು ವಾಪಸ್‌ ಬರುವ ವೇಳೆ ಹಿಂದಿನಿಂದ ಬಂದ ಆರೋಪಿ, ಪುಷ್ಪ ಅವರ ಚಿನ್ನದ ಸರ ಕಸಿದುಕೊಂಡಿದ್ದಾನೆ. ಆ ವೇಳೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಆರೋಪಿ, ಮಗುವಿನ ಸಮೇತ ಮಹಿಳೆಯನ್ನು ತಳ್ಳಿ ಸರ ಕಿತ್ತುಕೊಂಡು ಹೋಗಿದ್ದಾನೆ. ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಅಲ್ಲೇ ಇದ್ದ ಗ್ಯಾಸ್‌ ಸಿಲಿಂಡರ್‌ ಪೂರೈಕೆ ಮಾಡುವ ಆಟೋ ಚಾಲಕ ರುದ್ರೇಶ್‌ ಅವರು ಆರೋಪಿಯನ್ನು ಸುಮಾರು ಎರಡು ಕಿ.ಮೀಟರ್‌ ಹಿಂಬಾಲಿಸಿದ್ದಾರೆ. ಆಗ ಆರೋಪಿ ಬಡಿಗೆಯಿಂದ ರುದ್ರೇಶ್‌ ಮೇಲೆ ಹಲ್ಲೆನಡೆಸಿದ್ದಾನೆ. ಆದರೂ ಬಿಡದ ರುದ್ರೇಶ್‌ ಆರೋಪಿಯನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿ ಪಿಯುಸಿ ವ್ಯಾಸಂಗ ಮಾಡಿದ್ದು, ನರ್ಸಿಂಗ್‌ ಹೋಮ್‌ವೊಂದರಲ್ಲಿ ಹೋಮ್‌ ನರ್ಸಿಂಗ್‌ ಕೆಲಸ ಮಾಡುತ್ತಿದ್ದ. ಒಂದು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದ. ಯಾವುದೇ ಕೆಲಸವಿಲ್ಲದೆ, ಜೀವನ ನಿರ್ವಹಣೆಗಾಗಿ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ಹೇಳಿದರು. ಬಹುಮಾನ ಧೈರ್ಯ ಸಾಹಸ, ಸಮಯ ಪ್ರಜ್ಞೆ ಹಾಗೂ ಸಂಯಮ ಪ್ರದರ್ಶಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಆಟೋ ಚಾಲಕ ರುದ್ರೇಶ್‌ಗೆ ನಗರ ಆಯುಕ್ತರು ಮತ್ತು ಉತ್ತರ ವಿಭಾಗ ಉಪ ಪೊಲೀಸ್‌ ಆಯುಕ್ತರು ಸೂಕ್ತ ಬಹುಮಾನ ಘೋಷಿಸಿದ್ದಾರೆ.