ರಾಜ್ಯದಲ್ಲಿ ಜೂನ್ 7ರವರೆಗೂ ಲಾಕ್‌ಡೌನ್ ವಿಸ್ತರಣೆ: ರೂಲ್ಸ್‌ ಬ್ರೇಕ್ ಮಾಡದಂತೆ ಸಿಎಂ ಕಟ್ಟಪ್ಪಣೆ

ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆ ನಂತರವೂ ಜನರು ಓಡಾಡುತ್ತಿದ್ದಾರೆ. ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಈ ವಿಚಾರವಾಗಿ​​​​ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ

ರಾಜ್ಯದಲ್ಲಿ ಜೂನ್ 7ರವರೆಗೂ ಲಾಕ್‌ಡೌನ್ ವಿಸ್ತರಣೆ: ರೂಲ್ಸ್‌ ಬ್ರೇಕ್ ಮಾಡದಂತೆ ಸಿಎಂ ಕಟ್ಟಪ್ಪಣೆ
Linkup
: ರಾಜ್ಯದಲ್ಲಿ ಮತ್ತೆ ವಿಸ್ತರಣೆಯಾಗಿದೆ. 2ನೇ ಹಂತದ ಲಾಕ್‌ಡೌನ್ 14 ದಿನಗಳ ಕಾಲ ಮುಂದುವರೆಯಲಿದೆ. ಜೂನ್ 7 ಬೆಳಗ್ಗೆ 6 ಗಂಟೆವರೆಗೆ ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ ಆಗಿದೆ. ಇದೀಗ ಜಾರಿಯಲ್ಲಿ ಇರುವ ಲಾಕ್‌ಡೌನ್ ನಿಯಮಗಳೇ ಜೂನ್ 7ರವರೆಗೂ ಮುಂದುವರೆಯಲಿದೆ. ಜನಸಾಮಾನ್ಯರು ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೂ ಮಾತ್ರ ಅಗತ್ಯವಸ್ತುಗಳನ್ನು ಖರೀದಿ ಮಾಡಬಹುದಾಗಿದೆ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಅವರು, ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆ ನಂತರವೂ ಜನರು ಓಡಾಡುತ್ತಿದ್ದಾರೆ. ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಈ ವಿಚಾರವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಮೊದಲಿನಂತೆಯೇ ಮುಂದುವರೆದಿರುವ ಕಾರಣ, ಬಿಗಿಯಾದ ಕ್ರಮ ಅನಿವಾರ್ಯ ಎಂದ ಬಿಎಸ್‌ವೈ, ಜನರು ಹೆಚ್ಚಿನ ನಿಗಾ ವಹಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ವಿಪತ್ತು ನಿರ್ವಹಣಾ ಸಮಿತಿ ಶಿಫಾರಸ್ಸಿನಂತೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ ಯಡಿಯೂರಪ್ಪ, ಹಳ್ಳಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬಗ್ಗೆ ಸಭೆಯಲ್ಲಿ ಆತಂಕ ವ್ಯಕ್ತವಾಗಿದೆ ಎಂದು ತಿಳಿಸಿದರು. ಲಾಕ್‌ಡೌನ್ ತೆರವು ಮಾಡಿದ್ರೆ ನಗರದಲ್ಲಿ ಸೋಂಕು ಹೆಚ್ಚಳವಾಗುವ ಆತಂಕ ವ್ಯಕ್ತಪಡಿಸಿದ ಬಿಎಸ್‌ವೈ, ಹಳ್ಳಿಗಳಲ್ಲಿ ಸೋಂಕು ಕಡಿಮೆಯಾಗುವವರೆಗೂ ಲಾಕ್‌ಡೌನ್ ಮುಂದುವರೆಯಲಿದೆ ಎಂದು ತಿಳಿಸಿದರು.