ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್ ರಸ್ತೆ ನಿರ್ವಹಣೆ ಹೆಸರಿನಲ್ಲಿ ಕೋಟ್ಯಂತರ ಲೂಟಿ: ಕಾಂಗ್ರೆಸ್ ಆರೋಪ

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 12 ಅಧಿಕ ಸಂಚಾರ ಸಾಂದ್ರತೆ ಇರುವ ಕಾರಿಡಾರ್ ರಸ್ತೆಗಳ ಅಭಿವೃದ್ಧಿ ಮತ್ತು ನಿರ್ವಹಣೆ ಕಾಮಗಾರಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್ ರಸ್ತೆ ನಿರ್ವಹಣೆ ಹೆಸರಿನಲ್ಲಿ ಕೋಟ್ಯಂತರ ಲೂಟಿ: ಕಾಂಗ್ರೆಸ್ ಆರೋಪ
Linkup
ಬೆಂಗಳೂರು: ಮಹಾನಗರ ಪಾಲಿಕೆ () ವ್ಯಾಪ್ತಿಯಲ್ಲಿ 12 ಅಧಿಕ ಸಂಚಾರ ಸಾಂದ್ರತೆ ಇರುವ ಕಾರಿಡಾರ್ ರಸ್ತೆಗಳ ಅಭಿವೃದ್ಧಿ ಮತ್ತು ನಿರ್ವಹಣೆ ಕಾಮಗಾರಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಕಾಂಗ್ರೆಸ್ ಮೇಯರ್‌ಗಳ ಜೊತೆಗೆ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ , ವ್ಯಾಪ್ತಿಯ ಕಾರಿಡಾರ್ ನಡೆಸಲು 335 ಕೋಟಿ ವೆಚ್ಚ ಆದರೆ ರಸ್ತೆ ನಿರ್ವಹಣೆಗೆ ವಾರ್ಷಿಕವಾಗಿ 150 ಕೋಟಿಯಂತೆ ಒಟ್ಟು ಐದು ವರ್ಷಕ್ಕೆ 785.31 ಕೋಟಿ ಸುರಿಯಲಾಗುತ್ತಿದೆ. ಇದರ ಹಿಂದೆ ಅವ್ಯವಹಾರ ಇದೆ ಎಂದು ಆರೋಪಿಸಿದರು. ದೇಶದ ಎಲ್ಲೆಡೆ ನಿರ್ಮಿಸಿರುವ ರಸ್ತೆಗಳಿಗೆ ಎರಡು ವರ್ಷಗಳ ದೋಷ ಬಾಧ್ಯತಾ ಅವಧಿ ಕಡ್ಡಾಯವಾಗಿರುತ್ತದೆ. ನಿಯಮಾನುಸಾರ ಈ ನಿರ್ವಹಣೆಯನ್ನು ಗುತ್ತಿಗೆದಾರರು ಮಾಡಬೇಕು. ಹೀಗಿದ್ದರೂ 335 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ರಸ್ತೆಗಳಿಗೆ ಎರಡು ವರ್ಷ 291.35 ಕೋಟಿ ನೀಡಿ ನಿರ್ವಹಣೆ ಮಾಡುವುದರ ಹಿಂದೆ ಯಾರಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಇದೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಜೊತೆಗೆ ಕಾಮಗಾರಿಯನ್ನು ಬಿಬಿಎಂಪಿಯಿಂದ ಕಿತ್ತು ಕೆಆರ್‌ಡಿಸಿಎಲ್‌ಗೆ ನೀಡಿರುವ ಹಿಂದೆ ಅಕ್ರಮ ಇದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಿಬಿಎಂಪಿಗೆ ರಸ್ತೆ ನಿರ್ವಹಣೆಗೆ ಒಂದು ರೂಪಾಯಿ ನೀಡದ ರಾಜ್ಯ ಸರ್ಕಾರ KRDCLಗೆ ಪ್ರತಿ ವರ್ಷ 150 ಕೋಟಿ ರೂ ನೀಡಿರುವುದು ಏಕೆ? ಎಂದು ಪ್ರಶ್ನಿಸಿದೆ. ಈ 335 ಕೋಟಿ ಮೊತ್ತವನ್ನು ರಸ್ತೆ ಗುಂಡಿ ಮುಚ್ಚಲು ಬಳಸಬೇಕು ಎಂದು ರಾಮಲಿಂಗಾ ರೆಡ್ಡಿ ಒತ್ತಾಯಿಸಿದ್ದಾರೆ. ವಾರ್ಡ್ ವಿಂಗಡಣೆ ಅವೈಜ್ಞಾನಿಕ ಬಿಬಿಎಂಪಿ ಪ್ರತ್ಯೇಕ ಕಾಯಿದೆ ಅಡಿ ಪಾಲಿಕೆ ವಾರ್ಡ್‌ಗಳ ಗರಿಷ್ಠ ಮಿತಿಯನ್ನು 243 ಕ್ಕೆ ಏರಿಕೆ ಮಾಡಲಾಗಿದೆ. ಈ ಉದ್ದೇಶಕ್ಕಾಗಿ ವಾರ್ಡ್‌ಗಳ ಪುನರ್ ವಿಂಗಡಣೆ ಆಯೋಗ ರಚಿಸಲಾಗಿದೆ.‌ ಆದರೂ ವಾರ್ಡ್‌ವಾರು ಪುನರ್ ವಿಂಗಡಣೆಯನ್ನು ಅವೈಜ್ಞಾನಿಕವಾಗಿ ಮತ್ತು ಬಿಜೆಪಿ ಪಕ್ಷದ ಅನುಕೂಲಕ್ಕೆ ತಕ್ಕಂತೆ ಮಾಡಲಾಗುತ್ತಿದೆ ಎಂದು ರಾಮಲಿಂಗಾ ರೆಡ್ಡಿ () ಆರೋಪಿಸಿದರು. ಬೆಂಗಳೂರಿನ ಕುರಿತಾಗಿ ಸಿಎಂ ಗಮನ ಹರಿಸುತ್ತಿಲ್ಲಬೆಂಗಳೂರು ಉಸ್ತುವಾರಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಇದೆ. ಆದರೂ ಅವರು ಇಲ್ಲಿಯವರೆಗೆ ಕೇವಲ ಎರಡು ಬಾರಿ ನಗರ ಪ್ರದಕ್ಷಿಣೆ ನಡೆಸಿದ್ದಾರೆ.‌ ಅದೂ ಕೂಡಾ ಕೆಲವೇ ಸಮಯ ಸುತ್ತಾಟ ನಡೆಸಿ ಹೋಗಿದ್ದಾರೆ.‌ ಅವರು ಹೆಚ್ಚಿನ ಸಮಯವನ್ನು ‌ಬೆಂಗಳೂರಿಗೆ ನೀಡಬೇಕು ಎಂದು ಆಗ್ರಹಿಸಿದರು. ಇದು ಸಾಧ್ಯವಾಗದೆ ಇದ್ದರೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಿ ಎಂದು ಒತ್ತಾಯಿಸಿದರು.