Kadalekai Parishe: ಕಡಲೆಕಾಯಿ ಪರಿಷೆಗೆ ಬಿಬಿಎಂಪಿ ಗ್ರೀನ್‌ ಸಿಗ್ನಲ್‌..! ನ.29ರಿಂದ 3 ದಿನ ಉತ್ಸವ

ಈ ಬಾರಿಯ ಬಸವನಗುಡಿ ಕಡಲೆಕಾಯಿ ಪರಿಷೆಗೆ ಬಿಬಿಎಂಪಿ ಅನುಮತಿ ನೀಡಿದೆ. ಬೆಂಗಳೂರಿನ ಬಸವನಗುಡಿ ದೊಡ್ಡ ಗಣೇಶ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಕೊನೆಯ ಸೋಮವಾರದಿಂದ ಮೂರು ದಿನ ಕಡಲೆಕಾಯಿ ಪರಿಷೆ ನಡೆಯುತ್ತದೆ. ಈ ವೇಳೆ ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಬಿಬಿಎಂಪಿ ಸೂಚನೆ ನೀಡಿದೆ.

Kadalekai Parishe: ಕಡಲೆಕಾಯಿ ಪರಿಷೆಗೆ ಬಿಬಿಎಂಪಿ ಗ್ರೀನ್‌ ಸಿಗ್ನಲ್‌..! ನ.29ರಿಂದ 3 ದಿನ ಉತ್ಸವ
Linkup
ನಗರದ ಬಸವನಗುಡಿಯ ದೊಡ್ಡ ಗಣಪತಿ ದೇವಾಲಯದ ಆವರಣದಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಸಮ್ಮತಿ ಸೂಚಿಸಿದೆ. ಕಾರ್ತಿಕ ಮಾಸದ ಕೊನೆಯ ಸೋಮವಾರದಿಂದ (ನವೆಂಬರ್‌ 29) ಮೂರು ದಿನಗಳ ಕಾಲ ಪರಿಷೆ ನಡೆಯಲಿದೆ. ಕೋವಿಡ್‌ ಸೋಂಕಿತ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಕಳೆದ ವರ್ಷ ಪರಿಷೆಗೆ ಅನುಮತಿ ನೀಡಿರಲಿಲ್ಲ. ಈ ಸಲ ಅನುಮತಿ ನೀಡಲಾಗಿದ್ದು, ಕಾರ್ತಿಕ ಮಾಸದ ಕೊನೆಯ ಸೋಮವಾರ ವಿಶೇಷ ಪೂಜಾ ಕಾರ್ಯಕ್ರಮಗಳೊಂದಿಗೆ ಪರಿಷೆ ಆರಂಭವಾಗಲಿದೆ. ಧಾರ್ಮಿಕ ದತ್ತಿ ಇಲಾಖೆ ಮತ್ತು ಬಿಬಿಎಂಪಿ ಕಡಲೆಕಾಯಿ ಪರಿಷೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ತಹಬದಿಗೆ ಬಂದಿದ್ದು, ಈ ಬಾರಿ ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆಯು ಕಳೆಗಟ್ಟಲಿದೆ. ಹಲವು ವರ್ಷಗಳ ಇತಿಹಾಸ ಹೊಂದಿರುವ ಕಡಲೆಕಾಯಿ ಪರಿಷೆಯಲ್ಲಿ ಲಕ್ಷಾಂತರ ಮಂದಿ ಸೇರಲಿದ್ದಾರೆ. ತಮಿಳುನಾಡು, ಕೋಲಾರ ಸೇರಿ ಇತರೆ ಭಾಗಗಳಿಂದ ಆಗಮಿಸುವ ವ್ಯಾಪಾರಿಗಳು ನಾಲ್ಕೈದು ದಿನಗಳ ಕಾಲ ಬೀಡುಬಿಟ್ಟು, ನಾನಾ ತಳಿಯ ಕಡಲೆಕಾಯಿ ಮಾರಾಟ ಮಾಡಲಿದ್ದಾರೆ. ಬೆಂಗಳೂರಿನಲ್ಲಿ ಪ್ರತಿ ವರ್ಷವೂ ಸಾಂಪ್ರದಾಯಿಕವಾಗಿ ನಡೆಯುತ್ತಿದ್ದು, ಇದಕ್ಕೆ ಈ ಸಲ ಯಾವುದೇ ನಿರ್ಬಂಧ ಹೇರಿಲ್ಲ. ಕಾರ್ತಿಕ ಮಾಸದ ಕೊನೆಯ ಸೋಮವಾರದಿಂದ ಪರಿಷೆ ನಡೆಯಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ತಿಳಿಸಿದರು. ಸಾಲು-ಸಾಲು ಅಂಗಡಿಗಳು..!ಕಡಲೆಕಾಯಿ ಪರಿಷೆ ನಗರದ ದೊಡ್ಡ ಜಾತ್ರೆಯಾಗಿದೆ. ಈ ಸಮಯದಲ್ಲಿ ಜನರು ಕಡಲೆ ಬೀಜಗಳನ್ನು ರೈತರಿಂದ ನೇರವಾಗಿ ಮಾರುಕಟ್ಟೆ ದರಕ್ಕಿಂತ ಅಗ್ಗದಲ್ಲಿ ಖರೀದಿಸುತ್ತಾರೆ. ಪರಿಷೆಯ ಸಂದರ್ಭದಲ್ಲಿ ದೊಡ್ಡ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆಯುತ್ತವೆ. ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ಬೀದಿಯ ಎರಡೂ ಬದಿ ನೂರಾರು ಅಂಗಡಿಗಳು ತೆರೆದಿರುತ್ತವೆ. ಬಸವನಗುಡಿ ಮತ್ತು ಸುತ್ತಮುತ್ತಲಿನ ಜನರು ಕಡಲೆಕಾಯಿ ಪರಿಷೆಗಾಗಿ ಆಗಮಿಸುತ್ತಾರೆ. ಪರಿಷೆ ಇತಿಹಾಸ..!ಬೆಂಗಳೂರು ನಗರ ಇಷ್ಟು ದೊಡ್ಡದಾಗಿ ಬೆಳೆದು ಮಹಾನಗರವಾಗುವ ಮೊದಲು ಬಸವನಗುಡಿಯ ಪಕ್ಕದ ಹಳ್ಳಿಗಳಲ್ಲಿ ಪ್ರತಿ ವರ್ಷ ಶೇಂಗಾ ಬೆಳೆಯುತ್ತಿದ್ದರು. ಆದರೆ, ಶೇಂಗಾ ಕಟಾವಿಗೆ ಸಿದ್ಧವಾಗುವಾಗ ಬೆಳೆಯನ್ನು ಬಸವವೊಂದು ನಾಶಪಡಿಸುತ್ತಿತ್ತು. ರೈತರು ಒಂದು ದಿನ ಕಾದು ಬೆಳೆಯನ್ನು ರಕ್ಷಿಸಿಕೊಳ್ಳಲು ಬಸವನಿಗೆ ಹೊಡೆಯಲು ಮುಂದಾಗುತ್ತಾರೆ. ಆಗ ಅದು ಕಲ್ಲಾಗಿ ಹೋಯಿತು ಎಂದು ಇತಿಹಾಸ ಹೇಳುತ್ತದೆ. ಅಂದಿನಿಂದ ರೈತರು ತಮ್ಮ ಮೊದಲ ಬೆಳೆಯನ್ನು ಬಸವನಿಗೆ ಅರ್ಪಿಸಿ ಪ್ರಾರ್ಥನೆ ಸಲ್ಲಿಸುತ್ತಾರೆ.