Omicron: ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಏರ್‌ಪೋರ್ಟ್‌, ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಸುಧಾಕರ್

ಓಮಿಕ್ರಾನ್ ಕೋವಿಡ್ ತಳಿಯು ವಿವಿಧ ದೇಶಗಳಲ್ಲಿ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಜ್ಯದ ಗಡಿ ಜಿಲ್ಲೆಗಳಲ್ಲಿ ತೀವ್ರ ಎಚ್ಚರಿಕೆ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ.

Omicron: ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಏರ್‌ಪೋರ್ಟ್‌, ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಸುಧಾಕರ್
Linkup
ಬೆಂಗಳೂರು: ಆತಂಕದ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಬಗ್ಗೆ ಮಂಗಳವಾರ ನಡೆಯಲಿರುವ ತಜ್ಞರ ಸಭೆಯಲ್ಲೂ ಚರ್ಚೆ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ. ಕೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಓಮಿಕ್ರಾನ್ ಎಂಬ ಹೊಸ ಪ್ರಭೇದದ ಸೋಂಕಿನ ಬಗ್ಗೆ ಡಿಸೆಂಬರ್ 1ನೇ ತಾರೀಕಿನ ಬಳಿಕ ವರದಿ ಸಿಗಲಿದೆ. ಹಾಗಿದ್ದರೂ ಗಡಿಗಳಲ್ಲಿ, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು. ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಕೋವಿಡ್ ಕಂಡು ಬಂದಿದ್ದು ಈ ಪೈಕಿ 63 ವರ್ಷದ ಓರ್ವ ವ್ಯಕ್ತಿಯಲ್ಲಿ ಡೆಲ್ಟಾಗಿಂತ ಭಿನ್ನ ಸ್ವರೂಪದ ವೈರಸ್ ಪತ್ತೆಯಾಗಿದೆ. ಇದರ ಮಾದರಿಯನ್ನು ಐಸಿಎಂಆರ್‌ಗೆ ಕಳಿಸಿಕೊಡಲಾಗಿದ್ದು ಇನ್ನೂ ವರದಿ ಕೈಸೇರಿಲ್ಲ, ಇನ್ನೆರಡು ದಿನಗಳಲ್ಲಿ ವರದಿ ಸಿಗಲಿದೆ ಎಂದರು. ಕೊರೊನಾ ವೈರಸ್‌ನ ಓಮಿಕ್ರಾನ್ ತಳಿ ಕುರಿತಾದ ಆತಂಕದ ಹಿನ್ನೆಲೆಯಲ್ಲಿ ಸರ್ಕಾರದ ಮುಂದೆ ಪ್ರಸ್ತಾವವೇ ಇಲ್ಲ. ಸದ್ಯ ಯಾವುದೇ ಚಟುವಟಿಕೆ ಮೇಲೆ ನಿರ್ಬಂಧ ಇಲ್ಲ. ಶಾಲೆ- ಕಾಲೇಜು ಕೈಗಾರಿಕೆಯ ಮೇಲೆ ನಿರ್ಬಂಧ ಹೇರುವ ಆಲೋಚನೆ ಸರ್ಕಾರದ ಮುಂದೆ ಇಲ್ಲ. ಯಾವುದೇ ಚಟುವಟಿಕೆಯ ಮೇಲೆ ಕ್ರಮ ನಿಯಂತ್ರಣ ಹಾಕುವ ಯಾವುದೇ ಪ್ರಸ್ತಾವವೂ ಸರ್ಕಾರದ ಮುಂದೆ ಇಲ್ಲ ಎಂಬುವುದನ್ನು ಸ್ಪಷ್ಟಪಡಿಸಿದ್ದಾರೆ. ಇನ್ನು ಸಭೆಯಲ್ಲಿ ಹೊಸ ತಳಿಯ ಆತಂಕದ ಹಿನ್ನೆಲೆಯಲ್ಲಿ ಕ್ವಾರಂಟೈನ್ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿಸಿದರು. 3ನೇ ಡೋಸ್ ನೀಡುವ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಐಸಿಎಂಆರ್ ನಿರ್ಧಾರ ಮಾಡುತ್ತದೆ. ಅವರೇ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಲಾಕ್‌ಡೌನ್ ಮಾಡುವ ಉದ್ದೇಶ ಇಲ್ಲ. ಸರ್ಕಾರ ಘೋಷಣೆ ಮಾಡುವವರೆಗೂ ಲಾಕ್‌ಡೌನ್ ಮಾಡುವುದಿಲ್ಲ. ಲಾಕ್‌ಡೌನ್ ಬಗ್ಗೆ ಜನರನ್ನು ತಪ್ಪುದಾರಿಗೆ ಎಳೆಯಬಾರದು. ಲಾಕ್‌ಡೌನ್ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವರು ಸೋಮವಾರ ಎಚ್ಚರಿಕೆ ನೀಡಿದ್ದರು. ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣು 12 ದೇಶಗಳಲ್ಲಿ ಪತ್ತೆಯಾಗಿದೆ. ರಾಜ್ಯದಲ್ಲಿ ವಿಮಾನ ನಿಲ್ದಾಣ ಸೇರಿದಂತೆ ವಿವಿಧೆಡೆ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಕಳೆದ 12-13 ದಿನಗಳಲ್ಲಿ ನಿರ್ದಿಷ್ಟ ದೇಶಗಳಿಂದ ಬಂದವರ ಮೇಲೆ ನಿಗಾ ಇರಿಸಿ, ಅವರ ಸಂಪರ್ಕಿತರ ಪತ್ತೆ ಹಚ್ಚಲಾಗುತ್ತಿದೆ. ಹೊಸ ವೈರಾಣು ಕುರಿತು ಜನರು ಅನಗತ್ಯವಾಗಿ ಆತಂಕಗೊಳ್ಳುವ ಅಗತ್ಯವಿಲ್ಲ. ಆದರೆ ಈ ಮೊದಲಿನಂತೆಯೇ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಸುಧಾಕರ್ ತಿಳಿಸಿದ್ದರು.