''ಅಜಾಗರೂಕ ಸರ್ಕಾರದಿಂದ ಜನ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ'' - ರಮ್ಯಾ

ಕೋವಿಡ್-19 ಎರಡನೇ ಅಲೆ ಮತ್ತು ಅದನ್ನ ನಿಯಂತ್ರಿಸುವಲ್ಲಿ ಸರ್ಕಾರ ಎಡವಿದೆ ಎಂದು ರಮ್ಯಾ ಅಭಿಪ್ರಾಯ ಪಟ್ಟಿದ್ದಾರೆ. ಅಜಾಗರೂಕ ಸರ್ಕಾರದಿಂದ ಜನ ತಮ್ಮ ಪ್ರೀತಿಪಾತ್ರರನ್ನ ಕಳೆದುಕೊಳ್ಳುತ್ತಿದ್ದಾರೆ ಅಂತ ರಮ್ಯಾ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದಿದ್ದಾರೆ.

''ಅಜಾಗರೂಕ ಸರ್ಕಾರದಿಂದ ಜನ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ'' - ರಮ್ಯಾ
Linkup
ಭಾರತದಲ್ಲಿ ಸೋಂಕಿನ ಎರಡನೇ ಅಲೆಯ ಅಬ್ಬರ ವಿಪರೀತವಾಗಿದೆ. ಹೊಸ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕೊರೊನಾ ವೈರಸ್ ಸೋಂಕಿನಿಂದ ಕೊನೆಯುಸಿರೆಳೆಯುತ್ತಿರುವವರ ಸಂಖ್ಯೆಯೂ ಅಧಿಕವಾಗುತ್ತಿದೆ. ಒಂದ್ಕಡೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ, ಇನ್ನೊಂದ್ಕಡೆ ಆಕ್ಸಿಜನ್‌ಗಾಗಿ ಹಾಹಾಕಾರ ಉಂಟಾಗಿದೆ. ಈ ಪರಿಸ್ಥಿತಿಗೆ ಸರ್ಕಾರವೇ ಕಾರಣ ಎಂದು ನಟಿ, ರಾಜಕಾರಣಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಸಕ್ರಿಯರಾಗಿರುವ ರಮ್ಯಾ ಕೆಲವು ವಿಚಾರಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಎರಡನೇ ಅಲೆ ಮತ್ತು ಅದನ್ನ ನಿಯಂತ್ರಿಸುವಲ್ಲಿ ಸರ್ಕಾರ ಎಡವಿದೆ ಎಂದು ರಮ್ಯಾ ಅಭಿಪ್ರಾಯ ಪಟ್ಟಿದ್ದಾರೆ. ಅಜಾಗರೂಕ ಸರ್ಕಾರದಿಂದ ಜನ ತಮ್ಮ ಪ್ರೀತಿಪಾತ್ರರನ್ನ ಕಳೆದುಕೊಳ್ಳುತ್ತಿದ್ದಾರೆ ಅಂತ ರಮ್ಯಾ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದಿದ್ದಾರೆ. ರಮ್ಯಾ ಇನ್ಸ್ಟಾಗ್ರಾಮ್ ಸ್ಟೋರಿ ''ಕೋವಿಡ್‌ನಿಂದ ಸಂಭವಿಸುತ್ತಿರುವ ಸಾವುಗಳು ಅನಗತ್ಯ. ಇದನ್ನು ತಡೆಯಬಹುದಿತ್ತು. ಜನರು ಪ್ರಾಣ ಕಳೆದುಕೊಳ್ಳುತ್ತಿರಲಿಲ್ಲ. ಅಜಾಗರೂಕತೆ ಮತ್ತು ದುರಹಂಕಾರದ ಮೋದಿಯಿಂದಾಗಿ ಅನೇಕರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಸರ್ಕಾರಕ್ಕೆ ಕೇಳಿಸಿಕೊಳ್ಳುವ ವ್ಯವಧಾನ ಇಲ್ಲ. ಅಧಿಕಾರಕ್ಕಾಗಿ ದುರಾಸೆ ಪಡುತ್ತಿರುವ ಈ ಸರ್ಕಾರಕ್ಕೆ ಯಾವುದೇ ಸಹಾನುಭೂತಿ ಇಲ್ಲ. ಇದನ್ನ ಕ್ಷಮಿಸಲು ಅಸಾಧ್ಯ. ಇಂದು ನಡೆಯುತ್ತಿರುವುದು ನನಗೆ ಆಘಾತ ತಂದಿದೆ ಮತ್ತು ಕೋಪವನ್ನುಂಟು ಮಾಡಿದೆ'' ಎಂದು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ರಮ್ಯಾ ಬರೆದುಕೊಂಡಿದ್ದಾರೆ. ಕೋವಿಡ್ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸದ ಸರ್ಕಾರದ ವಿರುದ್ಧ ರಮ್ಯಾ ಮಾತ್ರ ಅಲ್ಲ, ನಟ ಸಿದ್ಧಾರ್ಥ್, ನಿರ್ಮಾಪಕ ರಾಮ್ ಗೋಪಾಲ್ ವರ್ಮಾ, ಚೇತನ್ ಕುಮಾರ್ ಸೇರಿದಂತೆ ಹಲವರು ಚಾಟಿ ಬೀಸಿದ್ದಾರೆ.