ಅಧಿಕಾರಿಗಳಲ್ಲಿಯೂ ಕೃಷಿ ಆಸಕ್ತಿ ಶ್ಲಾಘನೀಯ: ಸಚಿವ ಪಾಟೀಲ್‌

ಬಹುತೇಕ ಕೆಎಎಸ್ ಅಧಿಕಾರಿಗಳೆಲ್ಲ ನಮ್ಮ ಮಣ್ಣಿನ ಮಕ್ಕಳೇ. ಅಧಿಕಾರಿಗಳಲ್ಲಿಯೂ ಕೃಷಿ ಅದರಲ್ಲಿಯೂ ಸಿರಿಧಾನ್ಯ ಸಾವಯವ ಬಗ್ಗೆ ಆಸಕ್ತಿ ಬಂದಿರುವುದು ಸಂತಸದ ವಿಚಾರ‌. ಸಿರಿಧಾನ್ಯದ ಸಿರಿತನ ಹೆಚ್ಚುತ್ತಿದೆ. ಸಿರಿಧಾನ್ಯ ಬಳಕೆ ಆರೋಗ್ಯಕ್ಕೆ ಆಹಾರದ ಸಿದ್ಧ ಔಷಧಿಯಾಗಿದೆ

ಅಧಿಕಾರಿಗಳಲ್ಲಿಯೂ ಕೃಷಿ ಆಸಕ್ತಿ ಶ್ಲಾಘನೀಯ: ಸಚಿವ ಪಾಟೀಲ್‌
Linkup
ಬೆಂಗಳೂರು: ಅಧಿಕಾರಿಗಳಲ್ಲಿಯೂ ಕೃಷಿ ಬಗ್ಗೆ ಆಸಕ್ತಿ ರೈತೋಪಯೋಗಿ ಭಾವನೆಯಿರುವುದು ಹೆಮ್ಮೆಯ ವಿಷಯವೆಂದು ಬಿ.ಸಿ.ಪಾಟೀಲ್ ಶ್ಲಾಘಿಸಿದ್ದಾರೆ. ಕೆಎಎಸ್ ಅಧಿಕಾರಿಗಳ ಸಂಘದಿಂದ ಕೃಷಿ ಇಲಾಖೆ, ಕೃಷಿಕ ಸಮಾಜದ ಸಹಯೋಗದಲ್ಲಿ ಡಿ.5ರವರೆಗೆ ಹಮ್ಮಿಕೊಂಡಿರುವ "ಸಾವಯವ ಮತ್ತು ಸಿರಿಧಾನ್ಯ" ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಬಹುತೇಕ ಕೆಎಎಸ್ ಅಧಿಕಾರಿಗಳೆಲ್ಲ ನಮ್ಮ ಮಣ್ಣಿನ ಮಕ್ಕಳೇ. ಅಧಿಕಾರಿಗಳಲ್ಲಿಯೂ ಕೃಷಿ ಅದರಲ್ಲಿಯೂ ಸಿರಿಧಾನ್ಯ ಸಾವಯವ ಬಗ್ಗೆ ಆಸಕ್ತಿ ಬಂದಿರುವುದು ಸಂತಸದ ವಿಚಾರ‌. ಸಿರಿಧಾನ್ಯದ ಸಿರಿತನ ಹೆಚ್ಚುತ್ತಿದೆ. ಸಿರಿಧಾನ್ಯ ಬಳಕೆ ಆರೋಗ್ಯಕ್ಕೆ ಆಹಾರದ ಸಿದ್ಧ ಔಷಧಿಯಾಗಿದೆ ಎಂದು ತಿಳಿಸಿದರು. ಸಾವಯವ ಬಿಟ್ಟು ಹೆಚ್ಚು ರಾಸಾಯನಿಕ ವಸ್ತು ಬಳಕೆಯಿಂದ ರೈತರು ಹೆಚ್ಚು ಆರೋಗ್ಯಕ್ಕೆ ಖರ್ಚು ಮಾಡುವಂತಹ ಸ್ಥಿತಿ ಉದ್ಭವಿಸಿದೆ. ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹತ್ವ ಸಿಗುತ್ತಿದ್ದು, ಸರಕಾರ ಕೂಡ ಈ ಜನರ ಆರೋಗ್ಯದ ಹಿತದೃಷ್ಟಿಯಿಂದ ಬಹುಪಯೋಗಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದರು. ಕೃಷಿ ಖುಷಿಯಾಗಬೇಕು.ಈ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು ಎಂದರು. ಮೇಳದಲ್ಲಿ ಕೃಷಿ ತೋಟಗಾರಿಕಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿನಿಗಳು ಪ್ರದರ್ಶನಕ್ಕಿಟ್ಟ ಸಾವಯವ ಕೋಕಮ್ ಸೇರಿದಂತೆ ಮತ್ತಿತ್ತರ ಸಿರಿಧಾನ್ಯದ ಖಾದ್ಯಗಳ ಸ್ವಾದಿಸಿ ಪ್ರೋತ್ಸಾಹಿಸಿದರು. ಕ್ಷೇತ್ರಮಟ್ಟದಲ್ಲಿಬೆಳೆ ಹಾನಿ ಸಮೀಕ್ಷೆ ನಡೆಸು­ವಾಗ ರೈತರೊಂದಿಗೆ ಸರಕಾರ ಮತ್ತು ಕೃಷಿ ಇಲಾಖೆಯಿದೆ ಎಂಬ ಭಾವನೆ­ಯನ್ನು ಮೂಡಿಸಿ ರೈತರಲ್ಲಿಆತ್ಮ­ಸ್ಥೈರ್ಯ ಗಟ್ಟಿ­ಗೊಳಿ­­ಸಲು ಅಧಿಕಾ ರಿ­ಗಳು ಮುಂದಾ­ಗ­­ಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಕರೆ ನೀಡಿದರು. ‘ಬೆಳೆ ನಷ್ಟದ ಸಮೀಕ್ಷೆ ನಡೆಸಿದ ದಿನವೇ ಬೆಳೆ ಪರಿಹಾರ ಕುಧಿರಿಧಿತು ಆ್ಯಪ್‌ನಲ್ಲಿ ವಿವರ­ಗಳನ್ನು ನೋಂದಾಯಿಸಬೇಕು. ಜಿಲ್ಲಾಧಿಕಾರಿಗಳ ಜತೆ ಬೆಳೆ ವಿಮಾ ಕಂಪನಿಗಳ ಸಭೆ ನಧಿಡೆಧಿಸಿ, ಬೆಳೆ ವಿಮೆ ನೋಂದಾಯಿಸಿದ ರೈತರಿಗೆ ವಿಮಾ ಕಂಪನಿ ಆದಷ್ಟು ಬೇಗ ಪರಿಹಾರಧನ ಮಂಜೂರು ಮಾಡಿಸುವಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು, ಎಂದು ಸೂಚಿಸಿದರು. ಕಾಳಸಂತೆಯಲ್ಲಿ ಕೃತಕ ಅಭಾವ ಸೃಷ್ಟಿ­ಸುವವರ ಮೇಲೆ ನಿಗಾ ವಹಿಸಿ, ಡಿಎಪಿ ರಸ ಗೊಬ್ಬರಕ್ಕೆ ರೈತರು ಅವಲಂಬಿತರಾಗದೆ ಕಾಂಪ್ಲೆಕ್ಸ್‌ ಗೊಬ್ಬರಕ್ಕೆ ಹೆಚ್ಚಿನ ಆದ್ಯತೆ ನೀಡು ವಂತೆ ಕೃಷಿ ಅಧಿಕಾರಿಗಳು ಜಾಗೃತಿ ಮೂಡಿಸ­ಬೇಕು’’ ಎಂದು ಅವರು ಆದೇಶಿಸಿದ್ದಾರೆ.