ಆಂಧ್ರದಲ್ಲಿ 300ಕ್ಕೂ ಹೆಚ್ಚು ಬೀದಿ ನಾಯಿಗಳ ಮಾರಣಹೋಮ..! ವಿಷವಿಟ್ಟ ಪಂಚಾಯ್ತಿ ಸಿಬ್ಬಂದಿ..

ಗ್ರಾಮದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿತ್ತು. ಗ್ರಾಮಸ್ಥರು ಹಲವು ಬಾರಿ ಪಂಚಾಯಿತಿಗೆ ದೂರು ನೀಡಿದ್ದರು. ಗ್ರಾಮಸ್ಥರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಪಂಚಾಯತ್‌ ಸಿಬ್ಬಂದಿ ಬೀದಿ ನಾಯಿಗೆ ವಿಷವುಣಿಸಿ ಕೊಂದಿದ್ದಾರೆ.

ಆಂಧ್ರದಲ್ಲಿ 300ಕ್ಕೂ ಹೆಚ್ಚು ಬೀದಿ ನಾಯಿಗಳ ಮಾರಣಹೋಮ..! ವಿಷವಿಟ್ಟ ಪಂಚಾಯ್ತಿ ಸಿಬ್ಬಂದಿ..
Linkup
: ಇತ್ತೀಚೆಗಷ್ಟೇ ಹಾಸನ ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಮಂಗಗಳ ಮಾರಣ ಹೋಮವು ಪ್ರಾಣಿಗಳ ಮೇಲಿನ ಹಿಂಸೆಯ ಬಗ್ಗೆ ಚರ್ಚೆ ಹುಟ್ಟು ಹಾಕಿತ್ತು. ಇದರ ಬೆನ್ನಲ್ಲೇ, ಪ್ರದೇಶದ ಗೋದಾವರಿ ಜಿಲ್ಲೆಯ ಗ್ರಾಮವೊಂದರಲ್ಲಿ 300ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ವಿಷವಿಟ್ಟು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಲಿಂಗಪಾಲೆಂ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿತ್ತು. ಗ್ರಾಮಸ್ಥರು ಹಲವು ಬಾರಿ ಪಂಚಾಯಿತಿಗೆ ದೂರು ನೀಡಿದ್ದರು. ಗ್ರಾಮಸ್ಥರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಪಂಚಾಯತ್‌ ಸಿಬ್ಬಂದಿ ಬೀದಿ ನಾಯಿಗೆ ವಿಷವುಣಿಸಿ ಕೊಂದಿದ್ದಾರೆ. ನಾಯಿಗಳನ್ನು ಕೊಂದ ಬಳಿಕ ಹೊಂಡದಲ್ಲಿ ಹೂತು ಹಾಕಿದ್ದಾರೆ ಎಂದು ಪ್ರಾಣಿ ದಯಾ ಸಂಘದ ಲಲಿತಾ ಆರೋಪಿಸಿದ್ದಾರೆ. ಈ ಕುರಿತು ಅವರು ಧರ್ಮಾಜಿಗೂಡೆಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಗ್ರಾಮ ಪಂಚಾಯತ್‌ ಅಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಹಲವು ಸಿಬ್ಬಂದಿಗಳ ವಿರುದ್ಧ ದೂರು ದಾಖಲಾಗಿದೆ. 'ನಾನು ಗ್ರಾಮಕ್ಕೆ ಭೇಟಿ ನೀಡಿದಾಗ 300ಕ್ಕೂ ಹೆಚ್ಚು ಬೀದಿ ನಾಯಿಗಳ ಕಳೇಬರ ಹೂಳಲಾಗಿದೆ ಎಂಬ ಮಾಹಿತಿ ತಿಳಿಯಿತು. ನಾನು ಇದರ ಹಿಂದೆ ಬಿದ್ದು ತನಿಖೆ ಮಾಡಿದಾಗ ಗ್ರಾಮ ಪಂಚಾಯಿತಿಯ ಕೆಲವು ಸದಸ್ಯರು ಕೆಲವು ವ್ಯಕ್ತಿಗಳ ಜತೆ ಕೈ ಜೋಡಿಸಿ ನಾಯಿಗಳನ್ನು ಕೊಂದಿದ್ದಾರೆ ಎಂದು ತಿಳಿದುಬಂದಿತು' ಎಂದು ಲಲಿತಾ ಹೇಳಿದ್ದಾರೆ.