ಇಂದ್ರಜಿತ್ ಲಂಕೇಶ್ ವಿರುದ್ಧ ಪೊಲೀಸರಿಗೆ ದೂರು ನೀಡಿದ ದರ್ಶನ್ ಅಭಿಮಾನಿಗಳು

ದರ್ಶನ್ ಅವರ ತೇಜೋವಧೆ ಮಾಡಲು ಯತ್ನಿಸುತ್ತಿರುವ ಇಂದ್ರಜಿತ್ ಲಂಕೇಶ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ದೊಡ್ಡಬಳ್ಳಾಪುರದ ಪೊಲೀಸರಿಗೆ ಕರುನಾಡ ಕಲಾ ಚಕ್ರವರ್ತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ ದೂರು ನೀಡಿದೆ.

ಇಂದ್ರಜಿತ್ ಲಂಕೇಶ್ ವಿರುದ್ಧ ಪೊಲೀಸರಿಗೆ ದೂರು ನೀಡಿದ ದರ್ಶನ್ ಅಭಿಮಾನಿಗಳು
Linkup
ಚಾಲೆಂಜಿಂಗ್ ಸ್ಟಾರ್ ವಿರುದ್ಧ ಆರೋಪ ಮಾಡಿದ್ದರು. ''ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್‌ನಲ್ಲಿ ಸಪ್ಲೈಯರ್ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ'' ಎಂದು ಮಾಧ್ಯಮಗಳ ಮುಂದೆ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದರು. ಈ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಇಂದ್ರಜಿತ್ ಲಂಕೇಶ್ ವಿರುದ್ಧ 'ದಾಸ' ದರ್ಶನ್ ಅಭಿಮಾನಿಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ದರ್ಶನ್ ಅವರ ತೇಜೋವಧೆ ಮಾಡಲು ಯತ್ನಿಸುತ್ತಿರುವ ಇಂದ್ರಜಿತ್ ಲಂಕೇಶ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ದೊಡ್ಡಬಳ್ಳಾಪುರದ ಪೊಲೀಸರಿಗೆ ಕರುನಾಡ ಕಲಾ ಚಕ್ರವರ್ತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ ದೂರು ನೀಡಿದೆ. ''ಇಂದ್ರಜಿತ್ ಲಂಕೇಶ್‌ರ ಮೊದಲ ಪ್ರೆಸ್ ಹೇಳಿಕೆಯಲ್ಲಿ ನಟ ದರ್ಶನ್ ತೇಜೋವಧೆ ಮಾಡಲೆಂದೇ ಇಲ್ಲಸಲ್ಲದ ಆರೋಪವನ್ನು ಸೃಷ್ಟಿಸಿದ್ದಾರೆ. ದಲಿತ ಸಪ್ಲೈಯರ್‌ಗೆ ಹೊಡೆದರು ಎಂದು ಸುಳ್ಳು ಆರೋಪವನ್ನು ಮಾಡಿ, ಹಿಂದುಳಿದ ಜನಾಂಗದ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ತನ್ನ ವೈಯುಕ್ತಿಕ ದ್ವೇಷಕ್ಕೆ ನಟ ದರ್ಶನ್ ತೂಗುದೀಪ ರವರ ಕೀರ್ತಿಗೆ ಧಕ್ಕೆಯನ್ನು ಉಂಟುಮಾಡಲು ದಲಿತ ಜನಾಂಗದ ಹೆಸರನ್ನು ಬಳಸಿಕೊಂಡಿರುವುದು ಖಂಡನೀಯವಾದುದು'' ''ಈ ಬೆಳವಣಿಗೆಯಿಂದ ಕರ್ನಾಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುವ ಪ್ರಯತ್ನ ಇಂದ್ರಜಿತ್ ಲಂಕೇಶ್ ಮಾಡಿರುತ್ತಾರೆ. ನಟ ದರ್ಶನ್ ಅವರ ತೇಜೋವಧೆ ಮಾಡಲು ಯತ್ನಿಸುತ್ತಿರುವ ಇಂದ್ರಜಿತ್ ಲಂಕೇಶ್ ಅವರ ವಿರುದ್ಧ ಕೂಡಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಿ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮವನ್ನು ಜರುಗಿಸಬೇಕು'' ಎಂದು ದೊಡ್ಡಬಳ್ಳಾಪುರ ಪೊಲೀಸರಿಗೆ ನೀಡಿದ ದೂರಿನಲ್ಲಿ ಕರುನಾಡು ಕಲಾಚಕ್ರವರ್ತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ ಮತ್ತು ಡಿ ಕಂಪನಿ ಉಲ್ಲೇಖಿಸಿದೆ.