ಕಟ್ಟುನಿಟ್ಟಾಗಿ ಲಾಕ್‌ಡೌನ್ ಮಾಡಿದ್ರೆ ಜೂನ್‌ ಅಂತ್ಯಕ್ಕೆ ಕೊರೊನಾ ನಿಯಂತ್ರಣ: ಡಾ. ಸುದರ್ಶನ್‌

'ಕೋವಿಡ್‌ನಿಂದ ಮೃತರಾಗುತ್ತಿರುವವರ ಸಂಖ್ಯೆ ನಿರೀಕ್ಷಿತ ಮಟ್ಟಕ್ಕೆ ಕಡಿಮೆಯಾಗಿಲ್ಲ. ಸೋಂಕಿತರು ತಡವಾಗಿ ಆಸ್ಪತ್ರೆಗೆ ಬರುವುದರಿಂದ ಚೇತರಿಕೆ ಸಾಧ್ಯತೆ ಕಡಿಮೆ' - ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ಎಂ. ಕೆ. ಸುದರ್ಶನ್‌​​

ಕಟ್ಟುನಿಟ್ಟಾಗಿ ಲಾಕ್‌ಡೌನ್ ಮಾಡಿದ್ರೆ ಜೂನ್‌ ಅಂತ್ಯಕ್ಕೆ ಕೊರೊನಾ ನಿಯಂತ್ರಣ: ಡಾ. ಸುದರ್ಶನ್‌
Linkup
: ರಾಜ್ಯದಲ್ಲಿ ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಪಾಲಿಸಿದ್ದೇ ಆದರೆ ಜೂನ್‌ ಅಂತ್ಯದ ವೇಳೆಗೆ ಕೋವಿಡ್‌ ನಿಯಂತ್ರಣಕ್ಕೆ ಬರಲಿದೆ ಎಂದು ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ಎಂ. ಕೆ. ಸುದರ್ಶನ್‌ ಹೇಳಿದ್ದಾರೆ. 'ಕೊರೋನಾ ಸೋಂಕಿತ ನಿಕಟವರ್ತಿಗಳ, ಪ್ರತಿ ಮನೆ ಮನೆಗಳಲ್ಲಿ ಸೋಂಕಿತರನ್ನು ಹುಡುಕಿ ಪರೀಕ್ಷೆ ನಡೆಸುತ್ತಿರುವುದರಿಂದ ಕೊರೊನಾ ಸೋಂಕು ಇತ್ತೀಚೆಗೆ ಇಳಿಮುಖವಾಗುತ್ತಿದೆ' ಎಂದು ಅವರು ಪ್ರತಿಪಾದಿಸಿದ್ದಾರೆ. 'ಲಾಕ್‌ಡೌನ್‌ ಇರುವ ಹಿನ್ನೆಲೆಯಲ್ಲಿ ಸಾಮಾನ್ಯ ದಿನಗಳ ರೀತಿಯಲ್ಲಿ ಪರೀಕ್ಷೆ ಮಾಡಲು ಸಾಧ್ಯವಿಲ್ಲ. ಹೆಚ್ಚು ಕೇಂದ್ರೀಕೃತ ಪರೀಕ್ಷೆ ಮಾಡಲಾಗುತ್ತಿದೆ. ಸೋಂಕಿತರನ್ನು ಹೋಂ ಐಸೊಲೇಷನ್‌, ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲಿಸುವ ಕೆಲಸ ಮಾಡಬೇಕು. ಪರೀಕ್ಷೆ ಹೆಚ್ಚಿಸಿ ಬೇಗನೆ ಫಲಿತಾಂಶ ನೀಡುವ ವ್ಯವಸ್ಥೆಯಾಗಬೇಕು' ಎಂದು ಅವರು ಹೇಳಿದ್ದಾರೆ. 'ಕೋವಿಡ್‌ನಿಂದ ಮೃತರಾಗುತ್ತಿರುವವರ ಸಂಖ್ಯೆ ನಿರೀಕ್ಷಿತ ಮಟ್ಟಕ್ಕೆ ಕಡಿಮೆಯಾಗಿಲ್ಲ. ಸೋಂಕಿತರು ತಡವಾಗಿ ಆಸ್ಪತ್ರೆಗೆ ಬರುವುದರಿಂದ ಚೇತರಿಕೆ ಸಾಧ್ಯತೆ ಕಡಿಮೆ. ತಡವಾಗಿ ಆಸ್ಪತ್ರೆಗೆ ಹೋಗಿ ದಾಖಲಾದರೆ ಸೋಂಕಿತರು ಬದುಕುಳಿಯುವ ಸಾಧ್ಯತೆ ಕಡಿಮೆ' ಎಂದು ಅವರು ಹೇಳಿದ್ದಾರೆ. 'ಲಸಿಕೆ ಲಭ್ಯತೆ ಮೇಲೆ ಅವಲಂಬಿತವಾಗಿದೆ. ಸರಕಾರ ಸಿದ್ಧವಿದ್ದರೂ ಲಸಿಕೆ ಲಭ್ಯತೆ ಇಲ್ಲದ ಕಾರಣ ಎಲ್ಲರಿಗೂ ಲಸಿಕೆ ಹಾಕಲು ಸಾಧ್ಯವಾಗುತ್ತಿಲ್ಲ. ಸರಕಾರ ಸಾಧ್ಯವಾದ ಪ್ರಯತ್ನ ಮಾಡುತ್ತಿದೆ. ಜಾಗತಿಕ ಟೆಂಡರ್‌ ಕರೆಯಲಾಗಿದೆ. ಖರೀದಿ ಮತ್ತು ಪಾವತಿ ಪ್ರಕ್ರಿಯೆಗಳನ್ನು ಮಾಡಲಾಗಿದೆ' ಎಂದು ಅವರು ಹೇಳಿದ್ದಾರೆ.