ಕಣಿವೆಯಲ್ಲಿ ಉಗ್ರರ ಅಟ್ಟಹಾಸ: ಗುಂಡಿನ ದಾಳಿಗೆ ಓರ್ವ ಕಾಶ್ಮೀರಿ ಪಂಡಿತ ಸೇರಿ ಇಬ್ಬರ ಬಲಿ!

ಕಣಿವೆಯಲ್ಲಿ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದ್ದು, ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ ಸೇರಿ ಇಬ್ಬರು ಬಲಿಯಾಗಿದ್ದಾರೆ. ಮತ್ತೊಂದು ಘಟನೆಯಲ್ಲಿ ಬೀದಿಬದಿ ವ್ಯಾಪರಸ್ಥನೋರ್ವನ್ನು ಉಗ್ರರು ಕೊಂದು ಹಾಕಿದ್ದಾರೆ.

ಕಣಿವೆಯಲ್ಲಿ ಉಗ್ರರ ಅಟ್ಟಹಾಸ: ಗುಂಡಿನ ದಾಳಿಗೆ ಓರ್ವ ಕಾಶ್ಮೀರಿ ಪಂಡಿತ ಸೇರಿ ಇಬ್ಬರ ಬಲಿ!
Linkup
ಶ್ರೀನಗರ: ಕಣಿವೆಯಲ್ಲಿ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದ್ದು, ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ ಸೇರಿ ಇಬ್ಬರು ಬಲಿಯಾಗಿದ್ದಾರೆ. ಇಲ್ಲಿನ ಇಕ್ಬಾಲ್ ಪಾರ್ಕ್ ಬಳಿಯಿರುವ ಬಿಂದ್ರೂ ಮೆಡಿಕೆಟ್ ಮಾಲೀಕ ಮಾಖನ್ ಲಾಲ್ ಎಂಬುವವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮಾಖನ್ ಲಾಲ್ ಕೊನೆಯುಸಿರೆಳೆದಿದ್ದಾರೆ. ಮಾಖನ್ ಲಾಲ್ ಜೊತೆ ಮತ್ತೋರ್ವ ವ್ಯಕ್ತಿಗೂ ಗುಂಡೇಟು ತಗುಲಿದ್ದು, ಆತ ಕೂಡ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ ಎಂದ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಏಕಾಏಕಿ ಗುಂಡಿನ ಮಳೆಗರೆದ ಉಗ್ರರು, ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನು ನಗರದ ಹೊರವಲಯದಲ್ಲಿರುವ ಮದಿನ್ ಸಾಹಿಬ್ ಬಳಿಯೂ ಬೀದಿಬದಿ ವ್ಯಾಪಾರಸ್ಥನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಉಗ್ರರ ಗುಂಡೇಟಿನಿಂದ ಆತ ಸ್ಥಳದಲ್ಲೇ ಅಸುನೀಗಿದ್ದಾನೆ. ಶ್ರೀನಗರದಲ್ಲಿ ಒಂದೇ ದಿನ ಎರಡು ಕಡೆ ನಾಗರಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇನ್ನು ಪೊಲೀಸರು ಸ್ಥಳವನ್ನು ಸುತ್ತುವರೆದಿದ್ದು, ಪರಾರಿಯಾಗಿರುವ ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಉಗ್ರರ ಈ ಅಟ್ಟಹಾಸದಿಂದ ಜನತೆಯಲ್ಲಿ ಆಕ್ರೋಶ ಮಡುಗಟ್ಟಿದ್ದು, ಇಬ್ಬರು ಮುಗ್ಧ ನಾಗರಿಕರನ್ನು ಬಲಿ ಪಡೆದ ಉಗ್ರರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿದ್ದಾರೆ. ಕಣಿವೆಯಲ್ಲಿ ಉಗ್ರ ಚಟುವಟಿಕೆಗಳು ಹತೋಟಿಗೆ ಬಂದಿದ್ದರೂ, ಮರೆಯಾಗಿ ಬಂದು ನಾಗರಿಕರ ಮೇಲೆ ದಾಳಿ ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಉಗ್ರರ ಮೇಲೆ ಪೊಲೀಸರು ಹಾಗೂ ಸೇನೆ ತೀವ್ರ ನಿಗಾ ಇರಿಸಿದ್ದು, ಬಾಲ ಬಿಚ್ಚಲು ಯತ್ನಿಸುವ ಉಗ್ರರನ್ನು ಹೆಡೆಮುರಿ ಕಟ್ಟಲಾಗುತ್ತಿದೆ.