ಕರ್ತವ್ಯನಿರತ ಬೆಂಗಳೂರು ಪೊಲೀಸರಿಗೆ ಹೊಡೆದ ಸಹೋದರರ ಬಂಧನ : ಗಲಾಟೆಗೆ ಕಾರಣವೇನು?

ಕರ್ತವ್ಯನಿರತ ಪಿಎಸ್‌ಐ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳ ಮೇಲೆ ಹಲ್ಲೆ ನಡೆಸಿದ ಸಹೋದರರನ್ನು ಯಲಹಂಕ ನ್ಯೂ ಟೌನ್‌ ಪೊಲೀಸರು ಬಂಧಿಸಿದ್ದಾರೆ. ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನ ತೆಗೆಯುವ ವಿಚಾರವಾಗಿ ಪೊಲೀಸ್‌ ಹಾಗೂ ಸಹೋದರರ ನಡುವೆ ಗಲಾಟೆ ನಡೆದಿತ್ತು. ಇದೀಗ ಪೊಲೀಸರ ವಿರುದ್ಧ ಆರೋಪಗಳು ಕೇಳಿಬರುತ್ತಿವೆ.

ಕರ್ತವ್ಯನಿರತ ಬೆಂಗಳೂರು ಪೊಲೀಸರಿಗೆ ಹೊಡೆದ ಸಹೋದರರ ಬಂಧನ : ಗಲಾಟೆಗೆ ಕಾರಣವೇನು?
Linkup
: ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನ ತೆಗೆಯುವ ವಿಚಾರವಾಗಿ ಕರ್ತವ್ಯನಿರತ ಪಿಎಸ್‌ಐ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳ ಮೇಲೆ ನಡೆಸಿದ ಸಹೋದರರನ್ನು ಯಲಹಂಕ ನ್ಯೂ ಟೌನ್‌ ಬಂಧಿಸಿದ್ದಾರೆ. ಯಲಹಂಕ ನ್ಯೂ ಟೌನ್‌ ನಿವಾಸಿಗಳಾದ ಮನೋಜ್‌(27), ಧೀರಜ್‌(29) ಬಂಧಿತ ಸಹೋದರರು. ಯಲಹಂಕ ಬಳಿಯ ಚಿಕ್ಕಬೆಟ್ಟಹಳ್ಳಿ ಬಳಿ ಕಾಮಗಾರಿ ನಡೆಯುತ್ತಿದ್ದು, ಒಂದೇ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅದೇ ರಸ್ತೆಯಲ್ಲೇ ಯುವಕರು ಬೈಕ್‌ ನಿಲ್ಲಿಸಿದ್ದರು. ಅದೇ ಮಾರ್ಗವಾಗಿ ಹೊಯ್ಸಳ ಗಸ್ತು ವಾಹನ ಬಂದಿತ್ತು. ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್‌ ತೆಗೆಯುವಂತೆ ಸಿಬ್ಬಂದಿ ಹೇಳಿದ್ದರು. ಅಷ್ಟಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಇದರಿಂದ ಆಕ್ರೋಶಗೊಂಡ ಸಹೋದರರು, ಸಬ್‌ ಇನ್‌ಸ್ಪೆಕ್ಟರ್‌ ಶ್ರೀಶೈಲ ಮೇಲೆ ಹಲ್ಲೆನಡೆಸಿದ್ದಾರೆ. ಕೂಡಲೇ ಯಲಹಂಕ ನ್ಯೂ ಟೌನ್‌ ಪೊಲೀಸ್‌ ಠಾಣೆಗೆ ಕರೆ ಮಾಡಿದ ಸಬ್‌ ಇನ್‌ಸ್ಪೆಕ್ಟರ್‌, ಇಬ್ಬರು ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿದ್ದರು. ಆ ವೇಳೆ ಆರೋಪಿಗಳು ಅವರ ಮೇಲೂ ಹಲ್ಲೆನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದರು. ನಂತರ ಹೆಚ್ಚಿನ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಈ ಬಗ್ಗೆ ಯಲಹಂಕ ನ್ಯೂ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು, ಮಂಗಳವಾರ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿ ಮನೋಜ್‌ ಫುಡ್‌ ಡೆಲಿವರಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರೆ, ಧೀರಜ್‌ ಎಂಜಿನಿಯರಿಂಗ್‌ ವ್ಯಾಸಂಗ ಮಾಡಿದ್ದು, ಸಿವಿಲ್‌ ಸವೀರ್ಸ್ ಸ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಅವಾಚ್ಯ ಪದಗಳಿಂದ ನಿಂದಿಸಿದ್ದ ಪೊಲೀಸರು! ಏಕಮುಖ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಹೊಯ್ಸಳ ವಾಹನ ಬಂದಿತ್ತು. ವಾಹನ ಪಾರ್ಕಿಂಗ್‌ ವಿಚಾರವಾಗಿ ಯುವಕರ ಜತೆ ಪೊಲೀಸರೇ ಅನುಚಿತವಾಗಿ ವರ್ತಿಸಿದ್ದರು. ಅವಾಚ್ಯ ಪದಗಳಿಂದ ನಿಂದಿಸಿದ್ದರು. ಅದರಿಂದ ಕೋಪಗೊಂಡ ಯುವಕರು, ತಿರುಗಿ ಬಿದ್ದು ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಪೊಲೀಸ್‌ ಸಿಬ್ಬಂದಿಯೊಬ್ಬರು ಸಮವಸ್ತ್ರ ಸಹ ಧರಿಸಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಘಟನೆ ದೃಶ್ಯವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ''ಪೊಲೀಸರಿಗೆ ಗೌರವದ ಸ್ಥಾನವಿದೆ. ಅವರು ಯಾವತ್ತೂ ಸಂಯಮ ಕಳೆದುಕೊಳ್ಳಬಾರದು. ಜನರಿಗೆ ಗೌರವ ನೀಡಿ ಮಾತನಾಡಬೇಕು. ಬಾಯಿಗೆ ಬಂದಂತೆ ಮಾತನಾಡಿದರೆ, ಸಾರ್ವಜನಿಕರೂ ತಾಳ್ಮೆ ಕಳೆದುಕೊಳ್ಳುತ್ತಾರೆ'' ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.