ಕೊರೊನಾ ಚಿಕಿತ್ಸಾ ವಿಧಾನದ ಬಗ್ಗೆ ನಟ ಜಗ್ಗೇಶ್ ಆತಂಕ! ಸಿಎಂಗೆ 'ನವರಸ ನಾಯಕ' ಮಾಡಿದ ಮನವಿ ಏನು?

ರಾಜ್ಯದಲ್ಲಿ ಸದ್ಯ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಸಾವಿರಾರು ಸೋಂಕಿತರು ಚಿಕಿತ್ಸೆಗಾಗಿ ಕಷ್ಟ ಪಡುತ್ತಿದ್ದಾರೆ. ಇದೀಗ ಕೊರೊನಾ ಚಿಕಿತ್ಸೆ ಕುರಿತು ನಟ ಜಗ್ಗೇಶ್‌ ಟ್ವೀಟ್ ಮಾಡಿದ್ದಾರೆ. ಜೊತೆಗೆ ಸಿಎಂಗೆ ಒಂದು ಮನವಿಯನ್ನೂ ಮಾಡಿದ್ದಾರೆ.

ಕೊರೊನಾ ಚಿಕಿತ್ಸಾ ವಿಧಾನದ ಬಗ್ಗೆ ನಟ ಜಗ್ಗೇಶ್ ಆತಂಕ! ಸಿಎಂಗೆ 'ನವರಸ ನಾಯಕ' ಮಾಡಿದ ಮನವಿ ಏನು?
Linkup
ರಾಜ್ಯಾದ್ಯಂತ ಕೊರೊನಾ ರಣಕೇಕೆ ಮುಂದುವರಿದಿದೆ. ಮಂಗಳವಾರ (ಏ.27) ರಾತ್ರಿಯಿಂದ 14 ದಿನಗಳ ರಾಜ್ಯದಲ್ಲಿ ಕಠಿಣ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಜೊತೆಗೆ ಕೊರೊನಾ ಸೋಂಕಿತರ ಸಮಸ್ಯೆಗಳು ತೀವ್ರಗೊಳ್ಳುತ್ತಿವೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಈ ಬಾರಿ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯೂ ಜಾಸ್ತಿ ಇದೆ. ಈ ಮಧ್ಯೆ ನಟ ಅವರು ರಾಜ್ಯ ಸರ್ಕಾರಕ್ಕೆ ಒಂದು ಮನವಿ ಮಾಡಿಕೊಂಡಿದ್ದಾರೆ. ಮನೆಯವರಿಗೆ ದೂರದಿಂದ ನೋಡಲು ಅವಕಾಶ ನೀಡಿ 'ಮಾನ್ಯ ಮುಖ್ಯ ಮಂತ್ರಿಗಳ ಗಮನಕ್ಕೆ, ಸಾರ್ ಯಾವ ಕೊರೋನ ರೋಗಿ ಅಡ್ಮಿಟ್ ಆದ ಎರಡ್ಮೂರು ದಿನಕ್ಕೆ ಸಾವು ಸಂಭವಿಸುತ್ತಿದೆ (ಸ್ವಂತ ಅನುಭವ). ಯಾವ ಚಿಕಿತ್ಸೆ ನೀಡುತ್ತಾರೆ ಎಂದು ಹೊರಗಿರುವ ಬಂಧುಗಳಿಗೆ ತಿಳಿಯದು! ಸಾವಾಗಿದೆ ಎಂದು ತಿಳಿಸುತ್ತಾರೆ, ಮುಖಸಹಿತ ನೋಡಲಾಗದು. ಬೆರಳೆಣಿಕೆಯ ಕೆಲ ಸಿಬ್ಬಂದಿ ಹೊರತುಪಡಿಸಿ, ವಿಷಯ ತಿಳಿಯಲು ತಜ್ಞರು ವೈಯಕ್ತಿಕವಾಗಿ ಸಿಗುವುದಿಲ್ಲ. ಪ್ರತಿ ರೋಗಿಯ ಮನೆಯವರಿಗೆ ದೂರದಿಂದ ನೋಡಲು ಅವಕಾಶ (ಸುರಕ್ಷಿತ ಕ್ರಮಗಳನ್ನು ಪಾಲಿಸಿ) ನೀಡಬೇಕು. ಇಲ್ಲದಿದ್ದರೆ ಒಳಗೆ ನಡೆಯುವ ವಿಷಯ ಹೊರಗೆ ಅರಿವಾಗುತ್ತಿಲ್ಲಾ' ಎಂದು ಜಗ್ಗೇಶ್‌ ಟ್ವೀಟ್ ಮಾಡಿದ್ದಾರೆ. ಪ್ರತಿ ಕೋವಿಡ್ ರೋಗಿಗೆ treatment protocol ಇರುತ್ತದೆ 1)chest ct scan 2)infection monitor stages 3)beginning and after infection 4)inform each stage ಇದು ಯಾವುದು ಇಲ್ಲದೆ ಆಸ್ಪತ್ರೆಗೆ ದಾಖಲು ಮಾಡಿಕೊಂಡು, ನಂತರ ಯಾವ ವಿಷಯ ಹೊರಗೆ ತಿಳಿಸದೆ ರೋಗಿಯ ಸಾವಿನ ಜೊತೆ ಮನೆಯವರು ಸಾಯುವಂತೆ ಟೆನ್ಷನ್! ಒಳ ಅರಿವಿರದವರು ಸರ್ಕಾರದ ಕಾರ್ಯ ಶ್ರಮ ದೂಷಣೆ ಮಾಡಿ ಸತ್ಯ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ದಯಮಾಡಿ ರೋಗಿ ಮಾನಿಟರ್, ಡಾಕ್ಟರ್ ಹಾಗು ಬಂಧುಗಳಿಗೆ ತಿಳಿಯುವಂತೆ ಪಾರದರ್ಶಕ ವ್ಯವಸ್ಥೆ ಆಗಲಿ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಲ್ಲಿ ಜಗ್ಗೇಶ್ ಮನವಿ ಮಾಡಿಕೊಂಡಿದ್ದಾರೆ. ಜಗ್ಗೇಶ್ ಸಹೋದರ, ನಟ ಕೋಮಲ್‌ಗೂ ಕೊರೊನಾ! ಈ ಬಗ್ಗೆಯೂ ಜಗ್ಗೇಶ್‌ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಕೋಮಲ್‌ಗೂ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿಗೆ ಒಳಗಾಗಿರುವ ಕೋಮಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಸೋಂಕಿನಿಂದ ಗಂಭೀರವಾಗಿದ್ದ ಕೋಮಲ್ ಆರೋಗ್ಯ ಸ್ಥಿತಿ ಇದೀಗ ಸುಧಾರಿಸಿದೆ. ಕೋಮಲ್ ಆರೋಗ್ಯ ಸ್ಥಿತಿ ಸೀರಿಯಸ್ ಆಗಿರುವ ವಿಚಾರವನ್ನು ನಟ ಜಗ್ಗೇಶ್ ಇಷ್ಟು ದಿನ ಬಹಿರಂಗ ಪಡಿಸಿರಲಿಲ್ಲ. ಈಗ ಕೋಮಲ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಜಗ್ಗೇಶ್ ಮಾಹಿತಿ ಹಂಚಿಕೊಂಡಿದ್ದು, ಸಾವಿನ ದವಡೆಯಿಂದ ಕೋಮಲ್‌ರನ್ನು ಪಾರು ಮಾಡಿದ ರಾಯರಿಗೆ ಅವರು ನಮಸ್ಕರಿಸಿದ್ದಾರೆ.