ಕೊರೊನಾ ಸೋಂಕು ಹೆಚ್ಚಳ: ಏ.30ರವರೆಗೆ ನೈಟ್ ಕರ್ಫ್ಯೂ ಮೊರೆ ಹೋದ ದೆಹಲಿ!

ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಏ.30ರವರೆಗೆ ನೈಟ್ ಕರ್ಫ್ಯೂ ವಿಧಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರ ಆದೇಶ ಹೊರಡಿಸಿದೆ.

ಕೊರೊನಾ ಸೋಂಕು ಹೆಚ್ಚಳ: ಏ.30ರವರೆಗೆ ನೈಟ್ ಕರ್ಫ್ಯೂ ಮೊರೆ ಹೋದ ದೆಹಲಿ!
Linkup
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಏ.30ರವರೆಗೆ ವಿಧಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಅಲೆಯನ್ನು ತಡೆಗಟ್ಟುವ ಉದ್ದೇಶದಿಂದ ನೈಟ್ ಕರ್ಫ್ಯೂ ಆದೇಶ ಜಾರಿ ಮಾಡಲಾಗಿದ್ದು, ಏ.30ರವೆರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ದೆಹಲಿಯಲ್ಲಿ ನಾಲ್ಕನೇ ಅಲೆ ಅಪ್ಪಳಿಸಿದ್ದು, ಇದನ್ನು ಎದುರಿಸಲು ನೈಟ್ ಕರ್ಫ್ಯೂ ಅತ್ಯಂತ ಅವಶ್ಯ ಎಂದು ಅರವಿಂದ್ ಕೇಜ್ರಿವಾಲ್ ಅಭಿಪ್ರಾಯಪಟ್ಟಿದ್ದಾರೆ. ಆದರೆ ಸಂಪೂರ್ಣ ಲಾಕ್‌ಡೌನ್ ಹೇರುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದೂ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ. ನೈಟ್ ಕರ್ಫ್ಯೂ ಸಮಯದಲ್ಲಿ ಅಗತ್ಯ ವಸ್ತುಗಳ ಖರೀದಿ ಹಾಗೂ ಕೊರೊನಾ ಲಸಿಕೆ ಪಡೆಯಲು ತೆರಳುವವರಿಗೆ ವಿಶೇಷ ಇ-ಪಾಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಇ-ಪಾಸ್ ಪಡೆದು ಕರ್ಫ್ಯೂ ಸಂದರ್ಭದಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಬಹುದು ಎಂದು ದೆಹಲಿ ಸರ್ಕಾರ ತಿಳಿಸಿದೆ. ಅದರಂತೆ ಮುದ್ರಣ ಮತ್ತು ದೃಶ್ಯ ಮಾಧ್ಯಮದ ಪತ್ರಕರ್ತರೂ ಕರ್ಫ್ಯೂ ಸಮಯದಲ್ಲಿ ಕರ್ತವ್ಯ ನಿರ್ವಹಿಸಲು ಇ-ಪಾಸ್ ಪಡೆದುಕೊಳ್ಳಬೇಕು ಎಂದು ಕೇಜ್ರಿ ಸರ್ಕಾರ ಸ್ಪಷ್ಟಪಡಿಸಿದೆ. ಅದರಂತೆ ನೈಟ್ ಕರ್ಫ್ಯೂ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳ ವೈಧ್ಯರು ಹಾಗೂ ನರ್ಸ್‌ಗಳು ತಮ್ಮ ಐಟಿ ಕಾರ್ಡ್ ಮೂಲಕ ಸಂಚರಿಸುವ ಅವಕಾಶವನ್ನು ನೀಡಲಾಗಿದೆ. ದೆಹಲಿಯಲ್ಲಿ ನಿನ್ನೆ(ಏ.05-ಸೋಮವಾರ) ಒಟ್ಟು 3,548 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಟ್ಟು 15 ಜನ ಈ ಮಾರಕ ವೈರಾಣುವಿಗೆ ಬಲಿಯಾಗಿದ್ದಾರೆ. ಕೋವಿಡ್ ಅಲೆಯನ್ನು ತಡೆಗಟ್ಟಲೇಬೇಕಿದ್ದು, ಈ ಹಿನ್ನೆಲೆಯಲ್ಲಿ ಹೇರಲಾಗಿರುವ ನೈಟ್ ಕರ್ಫ್ಯೂ ಆದೇಶಕ್ಕೆ ಜನ ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಜನತೆಯಲ್ಲಿ ಮನವಿ ಮಾಡಿದ್ದಾರೆ.