ಕರ್ನಾಟಕ ಬಂದ್‌ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲವಿಲ್ಲ

ಕೆಲ ಕನ್ನಡಪರ ಸಂಘಟನೆಗಳು ಡಿ.31ರಂದು 'ಕರ್ನಾಟಕ ಬಂದ್‌'ಗೆ ಕರೆ ನೀಡಿವೆ. ಈ ಬಂದ್‌ನಿಂದಾಗಿ ಜನಸಾಮಾನ್ಯರಿಗೆ ಸಮಸ್ಯೆಗಳಾಗುವುದರಿಂದ ಹಾಗೂ ಬಂದ್‌ ಒಂದೇ ಚಳವಳಿಯ ಮಾರ್ಗವಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಭಿಪ್ರಾಯಪಟ್ಟಿದೆ ಎಂದು ನಾರಾಯಣಗೌಡ ತಿಳಿಸಿದ್ದಾರೆ.

ಕರ್ನಾಟಕ ಬಂದ್‌ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲವಿಲ್ಲ
Linkup
ಬೆಂಗಳೂರು: ಕೆಲವು ಕನ್ನಡ ಪರ ಸಂಘಟನೆಗಳು ಡಿಸೆಂಬರ್‌ 31ರಂದು ಕರೆ ನೀಡಿರುವಕರ್ನಾಟಕ ಬಂದ್‌ಗೆ ನಾವು ಬೆಂಬಲ ನೀಡುತ್ತಿಲ್ಲ. ಬಂದ್‌ನಲ್ಲಿ ನಮ್ಮ ಕಾರ್ಯಕರ್ತರು ಯಾರೂ ಪಾಲ್ಗೊಳ್ಳುವುದಿಲ್ಲ ಎಂದು ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ. ಕೆಲ ಕನ್ನಡಪರ ಸಂಘಟನೆಗಳು ಡಿ.31ರಂದು ''ಗೆ ಕರೆ ನೀಡಿವೆ. ಈ ಬಂದ್‌ನಿಂದಾಗಿ ಜನಸಾಮಾನ್ಯರಿಗೆ ಸಮಸ್ಯೆಗಳಾಗುವುದರಿಂದ ಹಾಗೂ ಬಂದ್‌ ಒಂದೇ ಚಳವಳಿಯ ಮಾರ್ಗವಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಮೊದಲಿನಿಂದಲೂ ನಿಲುವು ತಳೆದಿರುವುದರಿಂದ 'ಕರ್ನಾಟಕ ಬಂದ್‌' ನಿಂದ ದೂರ ಉಳಿಯಲು ನಿರ್ಧರಿಸಲಾಗಿದೆ. ಆದರೆ ನಾವು ಬೇರೆ ದಿನ, ಬೇರೆ ರೀತಿ ಪ್ರತಿಭಟನೆ ನಡೆಸುತ್ತೇವೆ ಎಂದು ಟಿ.ಎ. ನಾರಾಯಣಗೌಡ ನಡೆದ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು. ಡಿ.28ರಂದು ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಎಂಇಎಸ್‌ ಮತ್ತು ಶಿವಸೇನೆಯನ್ನು ನಿಷೇಧಿಸುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಮೇಲೆ ಒತ್ತಡ ಹೇರಲು ಡಿ.28ರಂದು ರಾಜ್ಯದ ಎಲ್ಲಾಜಿಲ್ಲೆಗಳಲ್ಲಿಕರವೇ ಜಿಲ್ಲಾಘಟಕಗಳು ಏಕಕಾಲಕ್ಕೆ 'ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ' ಹಾಕಲಿವೆ. ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ನಮ್ಮ ಆಗ್ರಹ ಪತ್ರಗಳನ್ನು ಸಲ್ಲಿಸಲಾಗುವುದು. ಬೆಂಗಳೂರು ನಗರದಲ್ಲಿ ಡಿ.30 ರಂದು ಬಿಬಿಎಂಪಿ ಆವರಣದಿಂದ ರಾಜಭವನದವರೆಗೆ ಬೃಹತ್‌ ಮೆರವಣಿಗೆ ನಡೆಸಿ, ರಾಜಭವನಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಇದರಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಬೆಳಗಾವಿ ಮತ್ತು ಮಹಾರಾಷ್ಟ್ರಗಳಲ್ಲಿ ಕನ್ನಡಿಗರ ಮೇಲೆ ಆಗುತ್ತಿರುವ ದೌರ್ಜನ್ಯ ಮತ್ತು ಕನ್ನಡದ ಆರಾಧ್ಯ ಮಹಾನಾಯಕರಿಗೆ ಅಪಮಾನವೆಸಗುತ್ತಿರುವ ಕುರಿತು ಕೇಂದ್ರ ಸರಕಾರ ಮತ್ತು ಚುನಾವಣಾ ಆಯೋಗದ ಗಮನ ಸೆಳೆದು, ಎಂಇಎಸ್‌ ಮತ್ತು ಶಿವಸೇನೆ ನಿಷೇಧಕ್ಕೆ ಕ್ರಮ ಕೈಗೊಳ್ಳಲು ರಾಜ್ಯಪಾಲರನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು. ಕರ್ನಾಟಕ ಬಂದ್‌ಗೆ ಕೇಬಲ್‌ ಆಪರೇಟರ್‌ ಸಂಘದ ಬೆಂಬಲ ಹಾಸನ, ಬೆಳಗಾವಿ ಸೇರಿದಂತೆ ಕರ್ನಾಟಕದ ಗಡಿ ಭಾಗದಲ್ಲಿಎಂಇಎಸ್‌ ನಡೆಸುತ್ತಿರುವ ಪುಂಡಾಟ ಖಂಡಿಸಿ ಹಾಗೂ ಬೆಳಗಾವಿಯಲ್ಲಿ ಸ್ವತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಭಗ್ನ ಗೊಳಿಸಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಡಿ.31ರ ಕರ್ನಾಟಕ ಬಂದ್‌ಗೆ ಕೇಬಲ್‌ ಆಪರೇಟರ್‌ ಸಂಘ ಬೆಂಬಲ ವ್ಯಕ್ತಪಡಿಸಿದೆ. ಡಿ.31 ರಂದು ನಡೆಯುವ ಬಂದ್‌ ಹಿನ್ನೆಲೆಯಲ್ಲಿ ಹಾಸನದ ಕೇಬಲ್‌ ಆಪರೇಟರ್‌ ಅಸೋಸಿಯೇಷನ್‌ ಬೆಂಬಲ ವ್ಯಕ್ತಪಡಿಸಿದ್ದು ಡಿ. 31 ರಂದು ಬೆಳಗ್ಗೆ 10 ರಿಂದ 11 ಗಂಟೆಯವರೆಗೆ 1 ಗಂಟೆಗಳ ಕಾಲ ಜಿಲ್ಲೆಯ ಕೇಬಲ್‌ ಪ್ರಸಾರ ಸ್ಥಗಿತಗೊಳಿಸಲಾಗಿದೆ. ಖಾಸಗಿ ಹೋಟೆಲ್‌ನಲ್ಲಿ ನಡೆದ ಅಸೋಸಿಯೇಷನ್‌ ಸಭೆಯಲ್ಲಿಈ ನಿರ್ಧಾರ ಕೈಗೊಳ್ಳಲಾಗಿದೆ.