ಕೋರಮಂಗಲದಲ್ಲಿ ಐಶಾರಾಮಿ ಕಾರು ಭೀಕರ ಅಪಘಾತ: ಹೊಸೂರು ಶಾಸಕ ಪ್ರಕಾಶ್ ಪುತ್ರ, ಸೊಸೆ ದುರ್ಮರಣ

ಕೋರಮಂಗಲದಲ್ಲಿ ನಡೆದ ಐಶಾರಾಮಿ ಕಾರು ಭೀಕರ ಅಪಘಾತದಲ್ಲಿ ಹೊಸೂರು ಶಾಸಕ ಪ್ರಕಾಶ್ ಪುತ್ರ ಹಾಗೂ ಸೊಸೆ ಸಾವನಪ್ಪಿದ್ದಾರೆ. ದುರಂತ ಅಂದರೆ ಕೆಲ ತಿಂಗಳ ಹಿಂದೆಯಷ್ಟೇ ಹೊಸೂರು ಶಾಸಕ ವೈ.ಪ್ರಕಾಶ್ ಪತ್ನಿ ಮೃತಪಟ್ಟಿದ್ರು. ಇದೀಗ ಅವರು ತಮ್ಮ ಏಕೈಕ ಮಗನನ್ನ ಕಳೆದುಕೊಂಡಿದ್ದಾರೆ. ಅಪಘಾತದ ಬಗ್ಗೆಗ್ಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೋರಮಂಗಲದಲ್ಲಿ ಐಶಾರಾಮಿ ಕಾರು ಭೀಕರ ಅಪಘಾತ: ಹೊಸೂರು ಶಾಸಕ ಪ್ರಕಾಶ್ ಪುತ್ರ, ಸೊಸೆ ದುರ್ಮರಣ
Linkup
ಬೆಂಗಳೂರು: ನಗರದ ಕೋರಮಂಗಲದಲ್ಲಿ ನಡೆದ ಐಶಾರಾಮಿ ಕಾರು ಭೀಕರ ಅಪಘಾತದಲ್ಲಿ ಹೊಸೂರು ಶಾಸಕ ಪ್ರಕಾಶ್ ಪುತ್ರ ಹಾಗೂ ಸೊಸೆ ಸಾವನಪ್ಪಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹೊಸೂರು ಶಾಸಕ ಪ್ರಕಾಶ್ ಪುತ್ರ ಅರುಣಾಸಾಗರ್ ಹಾಗೂ ಅವರ ಭಾವೀ ಪತ್ನಿ ಬಿಂದು ಮೃತ ದುರ್ದೈವಿಗಳು. ಇನ್ನು ಕೆಲ ತಿಂಗಳ ಹಿಂದೆಯಷ್ಟೇ ಹೊಸೂರು ಶಾಸಕ ವೈ.ಪ್ರಕಾಶ್ ಪತ್ನಿ ಮೃತಪಟ್ಟಿದ್ರು. ಇದೀಗ ಅವರು ತಮ್ಮ ಏಕೈಕ ಮಗನನ್ನ ಕಳೆದುಕೊಂಡಿದ್ದಾರೆ. ಅಲ್ಲದೆಅಪಘಾತದಲ್ಲಿ ಸೊಸೆ ಬಿಂದು(28) ಕೂಡ ಮೃತಪಟ್ಟಿರುವುದು ಇನ್ನಷ್ಟು ನೋವು ಕೊಟ್ಟಿದೆ. ಬಿಂದು, ಕುರಣಾಸಾಗರ್ ಮದುವೆಯಾಗಬೇಕಿದ್ದ ಅತ್ತೆ ಮಗಳಾಗಿದ್ದಾಳೆ. ಮುರುಗೇಶ್‌ಪಾಳ್ಯದ ಕಾವೇರಿನಗರದ ನಿವಾಸಿ ಬಿಂದು. ಚೆನ್ನೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮೃತ ಕರುಣಾಸಾಗರ್ ಜೊತೆ ಮದುವೆ ಮಾಡಲು ನಿರ್ಧಾರಿಸಲಾಗಿತ್ತು. ಬಿಂದು ಒಂದು ತಿಂಗಳಿಂದ ಚೆನ್ನೈನಲ್ಲೇ ವಾಸವಾಗಿದ್ದಳು. ನಿನ್ನೆ ಎಂಟು ಗಂಟೆ ಸುಮಾರಿಗೆ ಬಿಂದು ತನ್ನ ತಂದೆಗೆ ಕರೆ ಮಾಡಿ ಚೆನ್ನೈನಲ್ಲೇ ಇರುವುದಾಗಿ ತಂದೆಗೆ ಮಾಹಿತಿ‌ ನೀಡಿದ್ದರು. ಆದ್ರೆ ಬೆಳಗ್ಗೆ ನ್ಯೂಸ್‌ನಲ್ಲಿ ಮಾಹಿತಿ ತಿಳಿದು ಶವಾಗಾರಕ್ಕೆ ಬಿಂದು ತಂದೆ ಆಗಮಿಸಿದ್ದಾರೆ. ಇನ್ನು ಕರುಣಾಸಾಗರ್ ಮೃತ ದೇಹ ನೋಡಲು ಚಿತಾಗಾರಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ತೆರಳಿದ್ದರು. ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಘಟನೆ ವಿವರ! ಬೆಂಗಳೂರಿನ ಕೋರಮಂಗಲದಲ್ಲಿ ತಡರಾತ್ರಿ ಸುಮಾರು 1:30ರ ವೇಳೆಗೆ ಐಷಾರಾಮಿ ಕಾರೊಂದು ಫುಟ್ಪಾತ್ ಮೇಲಿನ ಕಂಬಕ್ಕೆ ಡಿಕ್ಕಿಯಾಗಿದೆ. KA 03 MY 6666 ಈ ನಂಬರಿನ ಐಷಾರಾಮಿ ಕಾರು ಇದಾಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಮುಂದಿನ ಸೀಟ್‌ ತುಂಬಾ ರಕ್ತದ ಕಲೆಗಳಿದ್ದು ಕಾರಿನ ಎಡಭಾಗದ 2 ಟೈರ್‌ ಸಂಪೂರ್ಣ ಪೀಸ್‌ಪೀಸ್‌ ಆಗಿದೆ. ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ಈ ಅವಘಡ ಸಂಭವಿಸಿತ್ತು. 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಗೆ ದಾಖಲಿಸಿದ ವೇಳೆ ಮೃತಪಟ್ಟಿದ್ದಾರೆ. ಹೊಸೂರು ಮೂಲದ ಕರುಣಾಸಾಗರ್, ಪತ್ನಿ ಬಿಂದು(28), ಕೇರಳ ಮೂಲದ ಅಕ್ಷಯ್ ಗೋಯಲ್, ಇಶಿತಾ(21), ಧನುಷಾ(21), ಹುಬ್ಬಳ್ಳಿಯ ರೋಹಿತ್, ಹರಿಯಾಣ ಮೂಲದ ಉತ್ಸವ್ ಮೃತ ದುರ್ದೈವಿಗಳು. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಚಾರ ವಿಭಾಗದ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ, ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ 7 ಜನರೂ ಮೃತಪಟ್ಟಿದ್ದಾರೆ. 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಗೆ ದಾಖಲಿಸಿದ ವೇಳೆ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಅಪಘಾತಕ್ಕೆ ಅತಿ ವೇಗವೇ ಕಾರಣ. ನಿರ್ಲಕ್ಷ್ಯ, ವೇಗದ ಚಾಲನೆಯಿಂದ ಸಂಭವಿಸಿದೆ. ಫುಟ್‌ಪಾತ್‌ ಹತ್ತಿ 2 ಬೊಲ್ಲಾರ್ಡ್ಸ್‌ಗೆ ಕಾರು ಡಿಕ್ಕಿಯಾಗಿದೆ. ಬಳಿಕ ಪಕ್ಕದ ಕಟ್ಟಡದ ಗೋಡೆಗೂ ಗುದ್ದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಎಲ್ಲಾ ಬೀದಿಗಳಲ್ಲಿ ನಿರ್ಜನವಾಗಿದ್ದ ಕಾರಣ ಚಾಲಕ ವೇಗವಾಗಿ ಓಡಿಸಿದ್ದಾನೆ. ಎಲ್ಲಿಗೆ ಹೋಗ್ತಿದ್ರು, ಎಲ್ಲಿಂದ ಬರ್ತಾ ಇದ್ರು ಎಂಬ ಬಗ್ಗೆ ತನಿಖೆಯಾಗುತ್ತಿದೆ ಎಂದಿದ್ದಾರೆ. ಕಾರಿನ ಮುಂದಿನ ಸೀಟ್‌ನಲ್ಲಿ ಮೂವರು ಕುಳಿತಿದ್ದರು ಹಾಗೂ ಹಿಂಬದಿ ಸೀಟ್‌ನಲ್ಲಿ ನಾಲ್ವರು ಕುಳಿತಿದ್ದರು. ಕಾರಿನಲ್ಲಿದ್ದ 7 ಜನರಲ್ಲಿ ಯಾರೂ ಸೀಟ್ ಬೆಲ್ಟ್ ಹಾಕಿರಲಿಲ್ಲ. ಇದರಿಂದ ಕಾರಿನಲ್ಲಿದ್ದ ಏರ್‌ಬ್ಯಾಗ್ ಸಹ ಓಪನ್ ಆಗಿಲ್ಲ ಎಂದು ರವಿಕಾಂತೇಗೌಡ ತಿಳಿಸಿದ್ದರು.