ಕೊವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ!

ಕೋವಿಡ್‌ನಿಂದ ಮೃತಪಟ್ಟ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕುಟುಂಬದ ಅವಲಂಬಿತರಿಗೆ ಸ್ವಯಂ ಉದ್ಯೋಗ ಸೃಷ್ಟಿಗಾಗಿ ವಿವಿಧ ನಿಗಮಗಳಿಂದ ಸಾಲ ಮತ್ತು ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕೊವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ!
Linkup
ಕಾರವಾರ: ಕೋವಿಡ್‌ನಿಂದ ಮೃತಪಟ್ಟ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕುಟುಂಬದ ಅವಲಂಬಿತರಿಗೆ ಸ್ವಯಂ ಉದ್ಯೋಗ ಸೃಷ್ಟಿಗಾಗಿ ಡಾ.ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮ, ಕರ್ನಾಟಕ ಆದಿಜಾಂಬವ ಅಬಿವೃದ್ದಿ ನಿಗಮ, ಕರ್ನಾಟಕ ತಾಂಡ ಅಭಿವೃದ್ದಿ ನಿಗಮ, ಮತ್ತು ಕರ್ನಾಟಕ ಭೋವಿ ಅಬಿವೃದ್ದಿ ನಿಗಮಗಳಿಂದ ಮತ್ತು ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ, ಕೌಶಲ್ಯಭಿವೃದ್ಧಿ ಸಂಸ್ಥೆಗಳಿಂದ ತರಬೇತಿ ಪಡೆದ ಫಲಾಪೇಕ್ಷಿಗೆ ಸಣ್ಣ ಮತ್ತು ಮಧ್ಯಮ ಉದ್ದಿಮೆ ಹಾಗೂ ಲಾಭದಾಯಕ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ 1ಲಕ್ಷ ರೂ. ಹಾಗೂ ಅವಧಿಸಾಲ 4ಲಕ್ಷ ರೂ. ಸೇರಿದಂತೆ ಒಟ್ಟು 5 ಲಕ್ಷ ರೂ. ಸೌಲಭ್ಯ ನೀಡಲಾಗುತ್ತದೆ. ಹೀಗಾಗಿ ಕೋವಿಡ್‌ನಿಂದ ಮರಣ ಹೊಂದಿದ ಪರಿಶಿಷ್ಟ ಜಾತಿ ಮತ್ತು ಪಂಗಡ ಕುಟುಂಬದ ಅವಲಂಬಿತರು ಜಾತಿ ಪತ್ರ, ಆದಾಯ ಪ್ರಮಾಣ ಪತ್ರ, ರೇಶನ್‌ ಕಾರ್ಡ್‌, ಆಧಾರ ಕಾರ್ಡ್‌ ಬ್ಯಾಂಕ್‌ ಪುಸ್ತಕ, ಫೋಟೊ ಹಾಗೂ ಕೋವಿಡ್‌ನಿಂದ ಮರಣ ಹೊಂದಿರುವ ಮರಣ ಪತ್ರ ಹಾಗೂ ಇತರೆ ದಾಖಲಾತಿಗಳೊಂದಿಗೆ ಜೂನ್‌ 30 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ.ಬಿ.ಆರ್‌. ಅಂಬೇಡ್ಕರ ಅಭಿವೃದ್ದಿ ನಿಗಮ, ತಹಸೀಲ್ದಾರ ಕಚೇರಿ ಹಿಂಭಾಗ, ನೆಲಮಹಡಿ, ಕಾರವಾರ-581301 ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-226903ಗೆ ಸಂಪರ್ಕಿಸಬಹುದು ಎಂದು ಡಾ. ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ದಾಪಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.