ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ, ನೀರಾವರಿ ಯೋಜನೆಗಳ ಕುರಿತಾಗಿ ಚರ್ಚೆ

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ರಾಜ್ಯದ ನೀರಾವರಿ ಯೋಜನೆ ಕುರಿತಾಗಿ ಚರ್ಚೆ ನಡೆಸಿದರು.

ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ, ನೀರಾವರಿ ಯೋಜನೆಗಳ ಕುರಿತಾಗಿ ಚರ್ಚೆ
Linkup
ಹೊಸದಿಲ್ಲಿ: ನೂತನ ಮುಖ್ಯಮಂತ್ರಿ ಅವರು ನವದೆಹಲಿಯಲ್ಲಿ ಶುಕ್ರವಾರ ಕೇಂದ್ರ ಜಲಶಕ್ತಿ ಸಚಿವ ಅವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ವಿಷಯಗಳ ಕುರಿತು ಚರ್ಚಿಸಿದರು. ಎರಡು ದಿನಗಳ ಕಾಲ ದೆಹಲಿ ಪ್ರವಾಸಲ್ಲಿ ಇರುವ ಅವರು, ರಾಜ್ಯದ ಮೇಕೆದಾಟು, ಮಹದಾಯಿ ಹಾಗೂ ಕೃಷ್ಣಾ ಮೇಲ್ಪಂಡೆ ಯೋಜನೆಗಳಿಗೆ ಉಂಟಾಗಿರುವ ಅಡೆ ತಡೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆಗೆ ಚರ್ಚೆ ನಡೆಸಿದರು. ಮೇಕೆದಾಟು ಅಣೆಕಟ್ಟು ನಿರ್ಮಿಸಲು ಮತ್ತು ಮಹದಾಯಿ,ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ರಾಜಭವನಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ಮುಖಂಡರು ಗುರುವಾರ ಕಾಲ್ನಡಿಗೆಯಲ್ಲಿ ತೆರಳಿ ಮನವಿ ಸಲ್ಲಿಸಿದ್ದರು. ಅಲ್ಲದೆ ಈ ಹೋರಾಟ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರವಾಗಲಿದೆ ಎಂಬ ಎಚ್ಚರಿಕೆಯನ್ನು ನೀಡಿದ್ದರು. ಮೇಕೆದಾಟು ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಜಾರಿಗೆ ತರಲು ಬಿಡುವುದಿಲ್ಲ ಎಂದಿದೆ. ಆದರೆ ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ಮಾಡಿಯೇ ಸಿದ್ಧ ಎಂದು ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾಗಿದ್ದಾಗಲೇ ಹೇಳಿದ್ದರು. ಇದೀಗ ನೂತನ ಸಿಎಂ ಆದ ಬಳಿಕ ಅವರು ದೆಹಲಿಯಲ್ಲಿ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸಂಸದರಾದ ಶಿವಕುಮಾರ್ ಉದಾಸಿ ಮತ್ತು ಡಾ. ಉಮೇಶ್ ಜಾಧವ್, ಮಾಜಿ ಸಚಿವರಾದ ಆರ್. ಅಶೋಕ್, ಉಮೇಶ್ ವಿ. ಕತ್ತಿ ಜೊತೆಗಿದ್ದರು