ಗಿರೀಶ್‌ ಕಾಸರವಳ್ಳಿ ನಿರ್ದೇಶನದ 'ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಹಲವು ವರ್ಷಗಳ ಬಳಿಕ ನಿರ್ದೇಶನ ಮಾಡಿರುವ 'ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ' ಸಿನಿಮಾವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಳ್ಳುತ್ತಿದೆ.

ಗಿರೀಶ್‌ ಕಾಸರವಳ್ಳಿ ನಿರ್ದೇಶನದ 'ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Linkup
ಹಲವು ವರ್ಷಗಳ ಬ್ರೇಕ್ ನಂತರ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಅವರು ಮತ್ತೆ ಡೈರೆಕ್ಷನ್‌ಗೆ ಮರಳಿದ್ದಾರೆ. ಈ ಹಿಂದೆ 'ಕೂರ್ಮಾವತಾರ' ಸಿನಿಮಾ ಮಾಡಿದ್ದ ಅವರು, ಈಗ '' ಸಿನಿಮಾವನ್ನು ಮುಗಿಸಿದ್ದು, ಬಿಡುಗಡೆಗೂ ಮೊದಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿದೆ. ಈ ಹಿಂದೆ ಏಷ್ಯಾಟಿಕಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸ್ಪರ್ಧಾತ್ಮಕ ವಿಭಾಗದಲ್ಲಿ ತೀರ್ಪುಗಾರರ ವಿಶೇಷ ಪ್ರಶಸ್ತಿಗೆ ಭಾಜನವಾಗಿದ್ದ ಈ ಸಿನಿಮಾವು ಈಗ ಸ್ಪೇನ್ ದೇಶದ ಮ್ಯಾಡ್ರಿಡ್ ನಗರದಲ್ಲಿ ನಡೆಯುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲೂ ಪ್ರಶಸ್ತಿ ಪಡೆದುಕೊಂಡಿದೆ. ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ ಉಡುಪಿಯ ಬಾಲನಟ ದೃಶಾ ಕೊಡಗು ಅವರಿಗೆ ಮ್ಯಾಡ್ರಿಡ್ ಚಿತ್ರೋತ್ಸವದಲ್ಲಿ ಶ್ರೇಷ್ಠ ಬಾಲನಟ ಪ್ರಶಸ್ತಿ ದೊರಕಿದೆ. ಖ್ಯಾತ ರಂಗ ನಿರ್ದೇಶಕ, ಚಿತ್ರ ನಿರ್ದೇಶಕ, ಕಲಾ ನಿರ್ದೇಶಕ ಹಾಗೂ ಚಿತ್ರಕಲಾವಿದ ಬಾಸುಮ ಕೊಡಗು ಅವರ ಮಗನಾದ ದೃಶಾ, ಕಟ್ಪಾಡಿಯ ಎಸ್.ವಿ.ಎಸ್. ಇಂಗ್ಲೀಷ್ ಮಾಧ್ಯಮ ಶಾಲೆಯಲ್ಲಿ ಎಸ್ಎಸ್ಎಲ್‌ಸಿ ಓದುತ್ತಿದ್ದು, ಅನೇಕ ಕಿರು ಚಿತ್ರಗಳಲ್ಲಿ, ರಂಗ ನಾಟಕಗಳಲ್ಲಿ ಅಭಿನಯಿಸಿದ್ದಾನೆ. ಸಂಗೀತ ಮತ್ತು ಸಾಹಿತ್ಯದಲ್ಲೂ ಆಸಕ್ತಿ ಇರುವ ದೃಶಾ, ಕಲಾವಿದರ ಕುಟುಂಬದ ಕುಡಿಯಾಗಿದ್ದಾನೆ. ಇನ್ನು, ಕಳೆದ ತಿಂಗಳು ಜರ್ಮನಿಯ ಸ್ಟುಟ್ ಗಾರ್ಟ್ ಚಿತ್ರೋತ್ಸವದಲ್ಲಿ 'ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ' ಚಿತ್ರಕ್ಕೆ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಸಿಕ್ಕಿತ್ತು. ಇನ್ನು, 'ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ' ಚಿತ್ರವು ಅಯ್ಕೆಯಾದ ನಾಲ್ಕು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮೂರರಲ್ಲಿ ಪ್ರಶಸ್ತಿ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಗಿರೀಶ ಕಾಸರವಳ್ಳಿ ನಿರ್ದೇಶನದ ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಎಸ್.ವಿ. ಶಿವಕುಮಾರ್ ಅವರು ತಮ್ಮ ಸಂಗಮ ಫಿಲಂಸ್ ಲಾಂಚನದಲ್ಲಿ ನಿರ್ಮಿಸಿದ್ದಾರೆ. ಕವಿ, ಸಾಹಿತಿ, ಗೀತೆ ರಚನೆಕಾರರಾದ ಜಯಂತ ಕಾಯ್ಕಿಣಿ ಅವರ 'ಹಾಲಿನ ಮೀಸೆ' ಕಥೆಯನ್ನಾಧರಿಸಿ, ಈ ಸಿನಿಮಾ ಮಾಡಲಾಗಿದೆ. ಸಮಕಾಲೀನ ಭಾರತದ ಬಹು ಮುಖ್ಯ ಸಮಸ್ಯೆಗಳಲ್ಲೊಂದಾದ ಐಡೆಂಟಿಟಿಯ ಪ್ರಶ್ನೆ ಚಿತ್ರದ ಹೂರಣವಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. 'ದ್ವೀಪ' ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಹೆಚ್.ಎಂ.ರಾಮಚಂದ್ರ ಹಾಲ್ಕೆರೆ ಅವರ ಛಾಯಾಗ್ರಹಣ ಇರುವ ಈ ಚಿತ್ರಕ್ಕೆ ಎಸ್.ಆರ್. ರಾಮಕೃಷ್ಣ ಅವರ ಸಂಗೀತ ನಿರ್ದೇಶನವಿದೆ. ಎಸ್. ಗುಣಶೇಖರನ್ ಅವರ ಸಂಕಲನ ಇದ್ದು, ಅಪೂರ್ವ ಕಾಸರವಳ್ಳಿ ಜಂಟಿ ನಿರ್ದೇಶನ ಸಹ ಚಿತ್ರಕ್ಕಿದೆ. ಅನನ್ಯಾ ಕಾಸರವಳ್ಳಿ ಅವರ ವ ಸ್ತ್ರವಿನ್ಯಾಸ, ಸಾವಂತ್, ಕಿರಣ್ ಕುಮಾರ್ ಹಾಗೂ ಯಶವಂತ ಯಾದವ್ ಅವರ ಸಹ ನಿರ್ದೇಶನ ಇದೆ. ಬಾಸುಮ ಕೊಡಗು ಅವರ ಕಲಾನಿರ್ದೇಶನ ಮಾಡಿದ್ದಾರೆ. ದೃಶಾ ಕೊಡಗು, ಆರಾಧ್ಯ, ಪ್ರವರ್ಥ ರಾಜು ಮತ್ತು ನಲ್ಮೆ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಉಳಿದಂತೆ, ಪವಿತ್ರ, ಮಾಲತೇಶ್. ಕೆ.ಜಿ. ಕೃಷ್ಣಮೂರ್ತಿ, ಚೆಸ್ವಾ, ರಶ್ಮಿ, ಬಿ.ಎಂ. ವೆಂಕಟೇಶ್, ಪುಷ್ಪಾ ರಾಘವೇಂದ್ರ, ಸುಜಾತ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಇದು ಗಿರೀಶ್ ಕಾಸರವಳ್ಳಿ ಅವರ 15ನೇ ಸಿನಿಮಾವಾಗಿದೆ.