ಚಿನ್ನ ಕದ್ದವನನ್ನು 24 ಗಂಟೆಯಲ್ಲಿ ಬಂಧಿಸಿದ ಬೆಂಗಳೂರು ಪೊಲೀಸರು!

ಚಿನ್ನ ಕದ್ದ ಕಳ್ಳನನ್ನು ಕೇವಲ 24 ಗಂಟೆಯಲ್ಲಿ ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ಪೊಲೀಸರ ಕಾರ್ಯಕ್ಕೆ ಇದೀಗ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹಾಗಾದರೆ ಬೆಂಗಳೂರು ಪೊಲೀಸರ ಕಾರ್ಯಾಚರಣೆ ಹೇಗಿತ್ತು? ಇಲ್ಲಿದೆ ಈ ಬಗ್ಗೆ ಸಂಪೂರ್ಣ ಮಾಹಿತಿ.

ಚಿನ್ನ ಕದ್ದವನನ್ನು 24 ಗಂಟೆಯಲ್ಲಿ ಬಂಧಿಸಿದ ಬೆಂಗಳೂರು ಪೊಲೀಸರು!
Linkup
ಬೆಂಗಳೂರು: ಕಾರಿನ ಬಾಗಿಲು ತೆರೆದು ಚಿನ್ನಾಭರಣ ಕಳವು ಮಾಡಿದ್ದವನನ್ನು ಪ್ರಕರಣ ದಾಖಲಾದ 24 ಗಂಟೆಯೊಳಗೆ ಚಂದ್ರಲೇಔಟ್‌ ಠಾಣೆ ಬಂಧಿಸಿದ್ದಾರೆ. ನಯಾಜ್‌ ಪಾಷಾ ಬಂಧಿತ. ಆರೋಪಿಯಿಂದ 4.65 ಲಕ್ಷ ರೂ. ಮೌಲ್ಯದ 103 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು. ದೂರುದಾರರು ತಮ್ಮ ಮಾಂಗಲ್ಯ ಸರ ಹಾಗೂ ಎರಡು ಚಿನ್ನದ ಬಳೆಗಳನ್ನು ದೇವಸ್ಥಾನದಲ್ಲಿ ಪೂಜೆ ಮಾಡಿಸಿ, ಬಳಿಕ ಒಂದು ಪ್ಯಾಕೆಟ್‌ನಲ್ಲಿ ಹಾಕಿ ಕಾರಿನ ಹಿಂಭಾಗದ ಸೀಟ್‌ ಮೇಲೆ ಇಟ್ಟಿದ್ದರು. ಮನೆಯ ಬಳಿ ಬಂದಾಗ ಕಾರು ಲಾಕ್‌ ಮಾಡುವುದನ್ನು ಮರೆತು ಮನೆಯೊಳಗೆ ಹೋಗಿದ್ದಾರೆ. ಕೂಡಲೇ ವಾಪಸ್‌ ಬಂದು ನೋಡುವ ವೇಳೆಗೆ ಕಾರಿನ ಬಾಗಿಲು ತೆರೆದು ಚಿನ್ನಾಭರಣ ಕಳವು ಮಾಡಿರುವುದು ತಿಳಿದಿದೆ. ತಕ್ಷಣ ಚಂದ್ರಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆಗಿಳಿದ ಪೊಲೀಸರು, ಸಿಸಿ ಕ್ಯಾಮೆರಾ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ವ್ಯಾಪಾರಿ ಮೇ ಲೆ ಹಲ್ಲೆ ನಡೆಸಿ 5.5 ಕೆಜಿ ಚಿನ್ನದ ಗಟ್ಟಿ ಕದ್ದ ಖದೀಮರು! ಬೆಂಗಳೂರು: ಚಿನ್ನದ ಗಟ್ಟಿ ಕೊಂಡೊಯ್ಯುತ್ತಿದ್ದ ಚಿನ್ನದ ವ್ಯಾಪಾರಿ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳು, ಬರೋಬ್ಬರಿ 2.5 ಕೋಟಿ ರೂ. ಮೌಲ್ಯದ 5.5 ಕೆಜಿ ಚಿನ್ನದ ಗಟ್ಟಿಯನ್ನು ಕದ್ದೊಯ್ದಿರುವ ಘಟನೆ ಹಲಸೂರು ಗೇಟ್‌ ಠಾಣೆ ವ್ಯಾಪ್ತಿಯ ನಗರ್ತಪೇಟೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಈ ಸಂಬಂಧ ನಗರ್ತಪೇಟೆ ನಿವಾಸಿ ಸಿದ್ದೇಶ್ವರ್‌ ಹರಿಭಾ ಶಿಂಧೆ(32) ನೀಡಿದ ದೂರಿನ ಮೇರೆಗೆ ಹಲಸೂರು ಗೇಟ್‌ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ನಗರ್ತಪೇಟೆಯಲ್ಲಿ ಆರು ವರ್ಷಗಳಿಂದ ಸಂಸ್ಕಾರ್‌ ಎಂಟರ್‌ಪ್ರೈಸಸ್‌ ಎಂಬ ಚಿನ್ನದ ಅಂಗಡಿ ಇಟ್ಟುಕೊಂಡಿರುವ ಸಿದ್ದೇಶ್ವರ್‌ ಶಿಂಧೆ, ಗುರುವಾರ ರಾತ್ರಿ 8.30ರ ಸುಮಾರಿಗೆ ಸ್ನೇಹಿತ ಸೂರಜ್‌ ಶ್ರೀಕಾಂತ್‌ ಜಾದವ್‌ ಜತೆ ದ್ವಿಚಕ್ರ ವಾಹನದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್‌ ಸರ್ಕಲ್‌ಗೆ ಬಂದು ಮಾರಕಾಸ್ತ್ರಗಳನ್ನು ತೋರಿಸಿ ಶಿಂಧೆ ಅವಧಿರನ್ನು ಅಡ್ಡಗಟ್ಟಿದ್ದಾರೆ. ಬಳಿಕ ಹಲ್ಲೆ ನಡೆಸಿ, ಚಿನ್ನದ ಗಟ್ಟಿ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಶಿಂಧೆ ದೂರಿನಲ್ಲಿ ಆರೋಪಿಸಿದ್ದಾರೆ. ದೂರುದಾರನ ಮೇಲೆ ಅನುಮಾನ? ಸಿದ್ದೇಶ್ವರ್‌ ಹರಿಭಾ ಶಿಂಧೆ ಅಟ್ಟಿಕಾ ಗೋಲ್ಡ್‌ನಲ್ಲಿ ಚಿನ್ನದ ಗಟ್ಟಿ ಖರೀದಿ ಮಾಡಿರುವುದಾಗಿ ಹೇಳಿದ್ದಾರೆ. ಆದರೆ, ಅಲ್ಲಿ ವಿಚಾರಿಸಿದರೆ ಯಾರು ಖರೀದಿಸಿಲ್ಲ ಎಂದಿದ್ದಾರೆ. ಮತ್ತೊಂದೆಡೆ ಸಾಲದ ರೂಪದಲ್ಲಿ ತಂದಿದ್ದೇನೆ. ಭಾನುವಾರ ಹಣ ಕೊಡುತ್ತೇನೆ ಎಂದು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಇದು ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ ಎಲ್ಲ ಆಯಾಮದಲ್ಲಿಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.