ಜನ್ಮ ಕೊಟ್ಟವರನ್ನೇ ಸಾಯಿಸುವ ಸಂಸ್ಕೃತಿ ಸಿದ್ದರಾಮಯ್ಯರದ್ದು; ಛಲವಾದಿ ನಾರಾಯಣ ಸ್ವಾಮಿ ಕಿಡಿ

ಡಾ.ಹೆಚ್.ಸಿ.ಮಹಾದೇವಪ್ಪ ಸಿದ್ದರಾಮಯ್ಯರ ಕಂಕುಳ ಕೂಸು. ಆರ್.ಧ್ರುವನಾರಾಯಣ ಈಗ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ಸುದ್ದಿಗೋಷ್ಠಿ ಮಾಡಿದರೆ ಡಿ.ಕೆ.ಶಿವಕುಮಾರ್ ಬೈಯ್ಯುತ್ತಾರೆ. ಸುದ್ದಿಗೋಷ್ಠಿ ಮಾಡದಿದ್ದರೆ ಸಿದ್ದರಾಮಯ್ಯ ಬೈಯ್ಯುತ್ತಾರೆ. ದ್ವೇಷದ ರಾಜಕಾರಣ ಮಾಡೋದರಲ್ಲಿ ಅವರದ್ದು ಎತ್ತಿದ ಕೈ ಎಂದು ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ.

ಜನ್ಮ ಕೊಟ್ಟವರನ್ನೇ ಸಾಯಿಸುವ ಸಂಸ್ಕೃತಿ ಸಿದ್ದರಾಮಯ್ಯರದ್ದು; ಛಲವಾದಿ ನಾರಾಯಣ ಸ್ವಾಮಿ ಕಿಡಿ
Linkup
ಬೆಂಗಳೂರು: ಮಾಜಿ ಸಿಎಂ ಮನಸ್ಸಿನಲ್ಲಿ ದಲಿತ ವಿರೋಧಿ. ಬಾಯಲ್ಲಿ ಮಾತ್ರ ದಲಿತ ಪ್ರೇಮ ಇದೆ ಎಂದು ಎಸ್‌ಸಿ ಮೋರ್ಚಾ ಅಧ್ಯಕ್ಷ ಆರೋಪಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಲದಲ್ಲಿ ಅತಿ ಹೆಚ್ಚು ಮತಾಂತರವಾಗಿದೆ. ಸಿದ್ದರಾಮಯ್ಯ ಕಾಲದಲ್ಲಿ ದಲಿತರು ಮತಾಂತರವಾಗಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದರು. ಸೋನಿಯಾ ಗಾಂಧಿ ಮೆಚ್ಚಿಸುವುದಕ್ಕೆ ಈ ಕೆಲಸ ಮಾಡಿದ್ದಾರೆ. ಜನ್ಮ ಕೊಟ್ಟವರನ್ನೇ ಸಾಯಿಸುವ ಸಂಸ್ಕೃತಿ ಸಿದ್ದರಾಮಯ್ಯರದ್ದು. ಚೇಳು ಮರಿಗಳಿಗೆ ಜನ್ಮ ಕೊಟ್ಟರೆ ಚೇಳೇ ಸತ್ತು ಹೋಗುತ್ತದೆ. ಯಾಕಂದ್ರೆ ಮರಿಗಳು ಚೇಳಿನ ಹೊಟ್ಟೆ ಸೀಳಿ ಹೊರಬರುತ್ತವೆ. ಅಂತಹ ಸಂಸ್ಕೃತಿ ವಿಪಕ್ಷ ನಾಯಕ ಸಿದ್ದರಾಮಯ್ಯರದ್ದು. ಹೆಸರು ನಮ್ಮದು, ಬಸಿರು ನಿಮ್ಮದಾ? 80,000 ಕೋಟಿ SCP, TSP ಹಣ ಬಿಡುಗಡೆಗಾಗಿ ಸಿದ್ದರಾಮಯ್ಯ ಲಂಚ ತಿಂದು ಹೊಟ್ಟೆ ತುಂಬಿಸಿಕೊಂಡಿಲ್ವಾ? ಸಿದ್ದರಾಮಯ್ಯ ಬಿಡುಗಡೆ ಮಾಡಿದ ದುಡ್ಡು ಯಾರಿಗೂ ಸಿಕ್ಕಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕಟ್ಟಿದ ಮನೆಯಲ್ಲಿ ಸಿದ್ದರಾಮಯ್ಯ ವಿಷ ಸರ್ಪದಂತೆ ಸೇರಿಕೊಂಡರು ಎಂದು ವ್ಯಂಗ್ಯವಾಡಿದ ನಾರಾಯಣಸ್ವಾಮಿ, ರಾಜ್ಯ ಕಾಂಗ್ರೆಸ್‌ನಲ್ಲಿ ಒಬ್ಬೊಬ್ಬರನ್ನೇ ಮುಗಿಸುತ್ತಾ ಬಂದರು. ಅನ್ನ ಹಳಸಿತ್ತು ನಾಯಿ ಹಸಿದಿತ್ತು ಎಂಬ ಮಾತು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸೂಕ್ತವಾಗಿದೆ. ಡಾ.ಹೆಚ್.ಸಿ.ಮಹಾದೇವಪ್ಪ ಸಿದ್ದರಾಮಯ್ಯರ ಕಂಕುಳ ಕೂಸು. ಆರ್.ಧ್ರುವನಾರಾಯಣ ಈಗ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ಸುದ್ದಿಗೋಷ್ಠಿ ಮಾಡಿದರೆ ಡಿ.ಕೆ.ಶಿವಕುಮಾರ್ ಬೈಯ್ಯುತ್ತಾರೆ. ಸುದ್ದಿಗೋಷ್ಠಿ ಮಾಡದಿದ್ದರೆ ಸಿದ್ದರಾಮಯ್ಯ ಬೈಯ್ಯುತ್ತಾರೆ. ದ್ವೇಷದ ರಾಜಕಾರಣ ಮಾಡೋದರಲ್ಲಿ ಅವರದ್ದು ಎತ್ತಿದ ಕೈ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ಇನ್ನು ಅವರು ಸಿದ್ದರಾಮಯ್ಯ ಅಲ್ಲ, ಸುಳ್ಳುರಾಮಯ್ಯ ಎಂದ ಛಲವಾದಿ, 70 ವರ್ಷ ಕಾಂಗ್ರೆಸ್‌ನವರೇ ದೇಶವನ್ನು ಆಳಿದ್ದಾರೆ. ಆದ್ರೂ ದಲಿತರಿಗೆ ಹೊಟ್ಟೆ ಹಸಿವು ಇದೆ ಅಂತಾಯ್ತಲ್ಲ. ಕಾಂಗ್ರೆಸ್‌ ಪಕ್ಷವನ್ನು ಯಾರೂ ನಂಬಬೇಡಿ. ಅದು ಸುಡುವ ಮನೆ ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್‌ಗೆ ಹೋದರೆ ಆತ್ಮಹತ್ಯೆಗೆ ಸಮ ಎಂದು ಹೇಳಿದ್ರು. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ವಲಸೆ ಗಿರಾಕಿ ಅಲ್ವಾ? ಕಾಂಗ್ರೆಸ್ ಪಕ್ಷದ ಇತಿಹಾಸ ಸಿದ್ದರಾಮಯ್ಯಗೆ ಗೊತ್ತಿದ್ಯಾ? ಜೆಡಿಎಸ್‌ನಲ್ಲಿದ್ದವರು ಹೊಟ್ಟೆಪಾಡಿಗೆ ಕಾಂಗ್ರೆಸ್ ಸೇರಲಿಲ್ವಾ? ಅವರು ಬಂದಮೇಲೆ ದೊಡ್ಡ ದಲಿತ ನಾಯಕರು ಕಾಣೆಯಾದ್ರು. ದಲಿತ ಮುಖಂಡರ ತಲೆ ಮೇಲೆ ಕಾಲಿಟ್ಟು ಮುಗಿಸಿದ್ರು ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂಬ ಬಿಜೆಪಿಗರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸಿಂದಗಿಯಲ್ಲಿ ನಡೆದ ಎಡಗೈ ಸಮಾವೇಶದಲ್ಲಿ ನಾನು ಮಾತನಾಡಿದ್ದ ವೇಳೆ, ಗೋವಿಂದ ಕಾರಜೋಳ, ನಾರಾಯಣ ಸ್ವಾಮಿ, ರಮೇಶ್ ಜಿಗಜಿಗಣಿ ಇವರು ಸ್ವಾರ್ಥಕ್ಕಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಹೇಳಿದ್ದೇನೆ.‌ ದಲಿತರು ಎಂಬ ಪದ ಎಲ್ಲೂ ಬಳಕೆ ಮಾಡಿಲ್ಲ ಎಂದಿದ್ದಾರೆ. ಅಲ್ಲದೇ, ಬಿಜೆಪಿಗರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುತ್ತಾರೆ. ಆದರೆ ಸಂವಿಧಾನದಲ್ಲಿ ಸಮ ಸಮಾಜ ನಿರ್ಮಾಣ ಮಾಡುವ ಮಾತನ್ನಾಡುತ್ತದೆ. ಕೆಲವರು ಸ್ವಾರ್ಥಕ್ಕಾಗಿ ಬಿಜೆಪಿಗೆ ಹೋಗಿದ್ದಾರೆ ಎಂದಿದ್ದೇನೆ ಹೊರತು ದಲಿತರು ಎಂಬ ಪದ ಉಪಯೋಗ ಮಾಡಿಲ್ಲ ಎಂದಿದ್ದಾರೆ. ಅಲ್ಲದೇ ಸಂವಿಧಾನಕ್ಕೆ ಗೌರವ ಇಲ್ಲದ ಪಕ್ಷಕ್ಕೆ ಹೋಗಿದ್ದಾರೆ ಎಂದಿದ್ದೇನೆ. ದಲಿತರ ಸಮಾವೇಶದಲ್ಲಿ ಈ ಮಾತನ್ನು ಹೇಳಿದ್ದೇನೆ. ‌ದಲಿತರಿಗೆ ಅವಹೇಳನ ಆಗುವ ರೀತಿಯಲ್ಲಿ ಇದ್ದಿದ್ದರೆ ಅಲ್ಲೇ ಪ್ರತಿಭಟನೆ ಮಾಡಬಹುದಿತ್ತಲ್ವಾ? ಎಂದು ಪ್ರಶ್ನಿಸಿದ್ದಾರೆ. ದಲಿತರ ಬಗ್ಗೆ ಆಪಾರ ಗೌರವ ಇದೆ. ಅವರಿಗೆ ರಾಜಕೀಯ ಶಕ್ತಿ ಬರಬೇಕು ಎಂದು ಬಯಸುವವನು ನಾನು ಅಂಬೇಡ್ಕರ್ ಅವರನ್ನು ಕಾನೂನು ಹಾಗೂ ಕಾರ್ಮಿಕ ಸಚಿವ ಮಾಡಿದ್ದು ಕಾಂಗ್ರೆಸ್ . ಮೀಸಲಾತಿಯನ್ನು ಅಂಬೇಡ್ಕರ್ ತಂದರೂ ಮೀಸಲಾತಿ ಜಾರಿ ಮಾಡಿದವರು ಯಾರು? ಎಂದು ಪ್ರಶ್ನಿಸಿದ್ದಾರೆ.