ಜಮ್ಮು ಮತ್ತು ಕಾಶ್ಮೀರ ಭೂಪಟ ವಿವಾದ: ಟ್ವಿಟ್ಟರ್ ಇಂಡಿಯಾ ಮುಖ್ಯಸ್ಥನ ವಿರುದ್ಧ ಎಫ್‌ಐಆರ್

ಭಾರತದ ಭೂಪಟದಿಂದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ಅನ್ನು ಪ್ರತ್ಯೇಕ ದೇಶಗಳೆಂದು ತೋರಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲಾಗಿದ್ದು, ಟ್ವಿಟ್ಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಭೂಪಟ ವಿವಾದ: ಟ್ವಿಟ್ಟರ್ ಇಂಡಿಯಾ ಮುಖ್ಯಸ್ಥನ ವಿರುದ್ಧ ಎಫ್‌ಐಆರ್
Linkup
ಹೊಸದಿಲ್ಲಿ: ಹಾಗೂ ಲಡಾಖ್‌ಗಳನ್ನು ಪ್ರತ್ಯೇಕ ದೇಶ ಎಂಬಂತೆ ಭೂಪಟ ತೋರಿಸುವ ಮೂಲಕ ವಿವಾದ ಸೃಷ್ಟಿಸಿರುವ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿ ಇಂಡಿಯಾ ಮುಖ್ಯಸ್ಥ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಕೇಂದ್ರ ಸರಕಾರದ ಜತೆಗಿನ ಟ್ವಿಟ್ಟರ್ ಸಂಘರ್ಷದ ಮಧ್ಯೆ ಉತ್ತರ ಪ್ರದೇಶದಲ್ಲಿ ಈ ತಿಂಗಳು ಸಾಮಾಜಿಕ ಮಾಧ್ಯಮದ ವಿರುದ್ಧ ದಾಖಲಾದ ಎರಡನೆಯ ಎಫ್‌ಐಆರ್ ಇದಾಗಿದೆ. ಬಜರಂಗ ದಳ ಮುಖಂಡ ಪ್ರವೀಣ್ ಭಾಟಿ ಎಂಬುವವರು ದೂರು ನೀಡಿದ್ದು, 'ಈ ವಿಶ್ವಾಸಘಾತದ ಕೃತ್ಯವು ಉದ್ದೇಶಪೂರ್ವಕವಾಗಿದ್ದು, ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ 505 (2)ರ ಅಡಿ (ವರ್ಗಗಳ ನಡುವೆ ವೈರತ್ವ ಅಥವಾ ದ್ವೇಷ ಅಥವಾ ಕೆಡುಕು ಸೃಷ್ಟಿಸುವ ಅಥವಾ ಪ್ರಚಾರ ಮಾಡುವ) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008ರ ಸೆಕ್ಷನ್ 74ರ ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಟ್ವಿಟ್ಟರ್ ಇಂಡಿಯಾದಲ್ಲಿ ಕೆಲಸ ಮಾಡುವ ಅಮೃತಾ ತ್ರಿಪಾಠಿ ಅವರನ್ನೂ ಹೆಸರಿಸಲಾಗಿದೆ. ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಅರ್ಜಿಉತ್ತರ ಪ್ರದೇಶದಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ನಡೆದ ಹಲ್ಲೆಯ ಕುರಿತಾದ ವಿಡಿಯೋದ ಮೂಲಕ ಸುಳ್ಳು ಸುದ್ದಿಗಳನ್ನು ಹರಡಿಸಲಾಗಿದೆ ಎಂದು ಆರೋಪಿಸಿ ಟ್ವಿಟ್ಟರ್ ವಿರುದ್ಧ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ, ಟ್ವಿಟ್ಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ಅವರಿಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆ ಒದಗಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಉತ್ತರ ಪ್ರದೇಶ ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಟ್ವಿಟ್ಟರ್‌ನಲ್ಲಿ ಸುಳ್ಳು ವಿಡಿಯೋವನ್ನು ಹರಡುತ್ತಿದ್ದರೂ ಅದನ್ನು ತೆರವುಗೊಳಿಸುವ ಅಥವಾ ಫ್ಲ್ಯಾಗ್ ಮಾಡದ ಟ್ವಿಟ್ಟರ್ ವಿರುದ್ಧ ಉತ್ತರ ಪ್ರದೇಶದಲ್ಲಿ ಗಲಭೆಯ ಉದ್ದೇಶ, ದ್ವೇಷ ಪ್ರಚಾರ ಮತ್ತು ಅಪರಾಧ ಸಂಚಿನ ಪ್ರಕರಣಗಳನ್ನು ದಾಖಲಿಸಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉತ್ತರ ಪ್ರದೇಶ ಪೊಲೀಸರು ಮನೀಶ್ ಅವರಿಗೆ ಸಮನ್ಸ್ ನೀಡಿತ್ತು. ಅವರ ವಿರುದ್ಧ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳುವಂತಿಲ್ಲ ಎಂದು ಕಳೆದ ವಾರ ಕರ್ನಾಟಕ ಹೈಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಸೂಚನೆ ನೀಡಿತ್ತು. ಬೆಂಗಳೂರಿನ ನಿವಾಸಿಯಾಗಿರುವ ಮನೀಶ್, ಈಗ ಉತ್ತರ ಪ್ರದೇಶಕ್ಕೆ ಪ್ರಯಾಣಿಸುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಜಿ. ನರೇಂದರ್ ಅವರ ಏಕಸದಸ್ಯ ನ್ಯಾಯಪೀಠ ಹೇಳಿತ್ತು.