ಡಿಕೆಶಿ ವಿರುದ್ಧದ ಟೀಕೆಗೆ ಆಕ್ರೋಶ: ನಳಿನ್ ಕುಮಾರ್ ಕಟೀಲ್, ರವಿಕುಮಾರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ರವಿಕುಮಾರ್ ಅನವಶ್ಯಕವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೆಸರನ್ನು ಪ್ರಸ್ತಾಪಿಸಿ ತಮ್ಮ ಬಿಜೆಪಿ ಪಕ್ಷದ ಭ್ರಷ್ಟಾಚಾರ ಸರ್ಕಾರದ ದುರಾಡಳಿತವನ್ನು ಮರೆಮಾಚಲು ಆಧಾರರಹಿತ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಡಿಕೆಶಿ ವಿರುದ್ಧದ ಟೀಕೆಗೆ ಆಕ್ರೋಶ: ನಳಿನ್ ಕುಮಾರ್ ಕಟೀಲ್, ರವಿಕುಮಾರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Linkup
ಬೆಂಗಳೂರು:ಬಿಜೆಪಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅನವಶ್ಯಕವಾಗಿ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಪ್ರಸ್ತಾಪಿಸಿ ತಮ್ಮ ಬಿಜೆಪಿ ಪಕ್ಷದ ಭ್ರಷ್ಟಾಚಾರ ಸರ್ಕಾರದ ದುರಾಡಳಿತವನ್ನು ಮರೆಮಾಚಲು ಆಧಾರರಹಿತ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪ್ರಚಾರ ಸಮಿತಿಯಿಂದ ಪ್ರತಿಭಟನೆ ನಡೆಯಿತು. ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಕಿಡಿಕಾರಿದರು. ಬಿಜೆಪಿ ಪಕ್ಷದಲ್ಲಿ ಇತ್ತೀಚೆಗೆ ಅತ್ಯಾಚಾರಿಗಳು ಭ್ರಷ್ಟಾಚಾರಿಗಳು ಅನಾಚಾರಿಗಳು ಹೆಚ್ಚುತ್ತಿದ್ದಾರೆ ಅದನ್ನು ತಡೆಯುವ ಪ್ರಯತ್ನವನ್ನು ಮೊದಲು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಡಬೇಕು ಅದನ್ನು ಹೊರತುಪಡಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಟೀಕೆ ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ, ಗೂಂಡಾಗಳು ಯಾರು ಎಂಬುದು ನಳಿನ್ ಕುಮಾರ್ ಕಟೀಲ್ ಗೆ ಮಾಹಿತಿಯಿದೆ ಗೂಂಡಾಗಳ ಬಗ್ಗೆ ಭ್ರಷ್ಟಾಚಾರಿಗಳ ಬಗ್ಗೆ ಮಾಹಿತಿ ಬೇಕಾದರೆ ಬಿಜೆಪಿಯ ನಾಯಕರಾದ ಎಚ್.ವಿಶ್ವನಾಥ್, ಬಸನಗೌಡ ಪಾಟೀಲ್ ಯತ್ನಾಳ್, ಈಶ್ವರಪ್ಪನವರನ್ನು ಕೇಳಿದರೆ ಬಿಜೆಪಿಯ ಭ್ರಷ್ಟರ ಬಗ್ಗೆ ಪಟ್ಟಿಯನ್ನು ನೀಡುತ್ತಾರೆ ಅದನ್ನು ಪಡೆದು ಕ್ರಮ ಕೈಗೊಳ್ಳುವ ಕೆಲಸವನ್ನು ನಳಿನ್ ಕುಮಾರ್ ಕಟೀಲ್ ಮಾಡಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಬಿಜೆಪಿಯ ವಕ್ತಾರ ರವಿಕುಮಾರ್ ನಿರುದ್ಯೋಗಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಅವರ ಪಕ್ಷದ ಭ್ರಷ್ಟಾಚಾರವನ್ನು ಹಾಗೂ ಅನಾಚಾರವನ್ನು ಮರೆಮಾಚಲು ಒಂದಂಶದ ಕಾರ್ಯಕ್ರಮವನ್ನು ರೂಪಿಸಿ ಆಧಾರ ರಹಿತವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಮೊದಲು ತಮ್ಮ ಪಕ್ಷದಲ್ಲಿರುವ ಭ್ರಷ್ಟರು ಹಾಗೂ ಅನಾಚಾರಗಳ ವಿರುದ್ಧ ಗಮನ ಹರಿಸಿ ಅದನ್ನು ತಡೆಯುವ ಕೆಲಸವನ್ನು ಮೊದಲು ಮಾಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ಬಿಜೆಪಿಯವರಿಗೆ ಬಸವಣ್ಣನವರ ಹೆಸರನ್ನು ಹೇಳುವ ಯೋಗ್ಯತೆ ಅರ್ಹತೆ ಹೊಂದಿಲ್ಲ ಏಕೆಂದರೆ ಬಸವಣ್ಣ ಜನಿಸಿದ ನಾಡಿನಲ್ಲಿ ಜೈಲಿಗೆ ಹೋಗಿ ಬಂದವರು ಜೈಲಿಗೆ ಹೋಗುವವರು ಸರದಿ ಸಾಲಿನಲ್ಲಿ ನಿಂತಿದ್ದಾರೆ ಅವರೇ ರಾಜ್ಯದಲ್ಲಿ ಚುಕ್ಕಾಣಿ ಹಿಡಿದು ಅಧಿಕಾರ ನಡೆಸುತ್ತಿದ್ದರೆ ಇಂಥವರಿಂದ ಕರ್ನಾಟಕಕ್ಕೆ ಅಪಕೀರ್ತಿ ಬಂದಿದೆ ಮೊದಲು ರಾಜೀನಾಮೆ ಕೊಟ್ಟು ರಾಜ್ಯದಿಂದ ತೊಲಗುವ ಕೆಲಸವನ್ನು ಬಿಜೆಪಿಯವರು ಮಾಡಿದರೆ ರಾಜ್ಯಕ್ಕೆ ಹಾಗೂ ಜನತೆಗೆ ಒಳಿತಾಗುತ್ತದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು. ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ನಡೆದ ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್. ಮನೋಹರ್, ಜಿ.ಜನಾರ್ದನ್, ಎ. ಆನಂದ್, ಈ. ಶೇಖರ್, ಪ್ರಕಾಶ್,ಚಂದ್ರಶೇಖರ್, ಪುಟ್ಟರಾಜು,ಶಶಿಭೂಷಣ್, ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.