ಡಿಜೆ ಹಳ್ಳಿ ಗಲಭೆ ಪ್ರಕರಣ; 115 ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್‌

ಡಿಜೆ-ಕೆ.ಜಿಹಳ್ಳಿ ಗಲಭೆ ಪ್ರಕರಣ ಸಂಬಂಧ ಅರ್ಜಿದಾರರನ್ನು 2020ರ ಆ.12ರಂದು ಬಂಧಿಸಲಾಗಿತ್ತು. ತನಿಖೆ ಪೂರ್ಣಗೊಳಿಸಬೇಕಾದ 90 ದಿನಗಳ ಅವಧಿ 2020ರ ನ.9ಕ್ಕೆ ಮುಗಿದಿತ್ತು. ಆನಂತರ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಎನ್‌ಐಎ, ತನಿಖಾ ಅವಧಿ ವಿಸ್ತರಿಸುವಂತೆ ಕೋರಿತ್ತು. ಅದೇ ದಿನ ತನಿಖಾ ಅವಧಿಯನ್ನು 90 ದಿನಗಳ ಕಾಲ ವಿಸ್ತರಿಸಿ ವಿಶೇಷ ನ್ಯಾಯಾಲಯವು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಅರ್ಜಿದಾರರು ಸಲ್ಲಿಸಿದ್ದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ಡಿಜೆ ಹಳ್ಳಿ ಗಲಭೆ ಪ್ರಕರಣ; 115 ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್‌
Linkup
ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 115 ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ತನಿಖೆ ಪೂರ್ಣಗೊಳಿಸಲು ಎನ್‌ಐಎಗೆ 90 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಮುಜಾಮಿಲ್‌ ಸೇರಿದಂತೆ 115 ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ. ಸುಪ್ರೀಂಕೋರ್ಟ್‌ ನಿರ್ದೇಶನ ಪ್ರಕಾರ ತನಿಖಾ ಅವಧಿ ವಿಸ್ತರಣೆ ಕೋರಿ ಅರ್ಜಿ ಸಲ್ಲಿಸಿದ ವಿಚಾರವನ್ನು ಆರೋಪಿಗಳ ಗಮನಕ್ಕೆ ತರಬೇಕು. ಆ ಕುರಿತು ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿ, ಅವರ ವಾದವನ್ನೂ ಆಲಿಸಬೇಕು ಎಂದು ನ್ಯಾಯಾಲಯ ಹೇಳಿತು. ಆದರೆ, ಪ್ರಕರಣದಲ್ಲಿ ಆರೋಪಿಗಳ ಗಮನಕ್ಕೆ ತರದೆ, ತನಿಖಾ ಅವಧಿ ವಿಸ್ತರಿಸಿ ವಿಶೇಷ ನ್ಯಾಯಾಲಯ (ಎನ್‌ಐಎ) ಹೊರಡಿಸಿರುವ ಆದೇಶವು ಕಾನೂನು ಬಾಹಿರವಾಗಿದೆ. ಹಾಗಾಗಿ, ಅರ್ಜಿದಾರರು ಜಾಮೀನು ಪಡೆಯಲು ಅರ್ಹರಾಗಿದ್ದಾರೆ ಎಂದು ಆದೇಶಿಸಿತು. ಅಲ್ಲದೆ, ಅರ್ಜಿದಾರ ಆರೋಪಿಗಳು ಎರಡು ತಲಾ ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್‌, ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಣಾ ನ್ಯಾಯಾಲಯ ಮತ್ತು ತನಿಖಾಧಿಕಾರಿ ಕರೆದಾಗ ತಪ್ಪದೇ ಹಾಜರಾಗಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ಹೈಕೋರ್ಟ್‌ ಆದೇಶಿಸಿದೆ. ಡಿಜೆ-ಕೆ.ಜಿಹಳ್ಳಿ ಗಲಭೆ ಪ್ರಕರಣ ಸಂಬಂಧ ಅರ್ಜಿದಾರರನ್ನು 2020ರ ಆ.12ರಂದು ಬಂಧಿಸಲಾಗಿತ್ತು. ತನಿಖೆ ಪೂರ್ಣಗೊಳಿಸಬೇಕಾದ 90 ದಿನಗಳ ಅವಧಿ 2020ರ ನ.9ಕ್ಕೆ ಮುಗಿದಿತ್ತು. ಆನಂತರ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಎನ್‌ಐಎ, ತನಿಖಾ ಅವಧಿ ವಿಸ್ತರಿಸುವಂತೆ ಕೋರಿತ್ತು. ಅದೇ ದಿನ ತನಿಖಾ ಅವಧಿಯನ್ನು 90 ದಿನಗಳ ಕಾಲ ವಿಸ್ತರಿಸಿ ವಿಶೇಷ ನ್ಯಾಯಾಲಯವು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಅರ್ಜಿದಾರರು ಸಲ್ಲಿಸಿದ್ದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.