ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಟೀಕೆ

ಇಂದಿರಾಗಾಂಧಿ ಅವರು ಪ್ರಧಾನಿಯಾಗಿದ್ದಾಗ ತುರ್ತು ಪರಿಸ್ಥಿತಿಗೆ ಜಾರಿಗೆ ಬಂದು 46 ವರ್ಷಗಳಾದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಟೀಕೆ
Linkup
ಹೊಸದಿಲ್ಲಿ: ಮಾಜಿ ಪ್ರಧಾನಿ ಅವರು ತಮ್ಮ ಆಳ್ವಿಕೆ ಕಾಲದಲ್ಲಿ ತುರ್ತು ಪರಿಸ್ಥಿತಿಯನ್ನು ಜಾರಿಗೆ ತಂದು 46 ವರ್ಷಗಳು ತುಂಬಿದ ಸಂದರ್ಭದಲ್ಲಿ ವಿರುದ್ಧ ಪ್ರಧಾನಿ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. 21 ತಿಂಗಳ ಅವಧಿಯು ಸಂಸ್ಥೆಗಳ ವ್ಯವಸ್ಥಿತ ನಾಶಕ್ಕೆ ಸಾಕ್ಷಿಯಾಯಿತು. ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. 'ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ಎಂದೂ ಮರೆಯಲಾಗದು. 1975 ರಿಂದ 1977ರ ಅವಧಿಯು ಸಂಸ್ಥೆಗಳ ವ್ಯವಸ್ಥಿತ ನಾಶಕ್ಕೆ ಸಾಕ್ಷಿಯಾದವು. ಭಾರತದ ಪ್ರಜಾಪ್ರಭುತ್ವದ ಚೈತನ್ಯವನ್ನು ಬಲಪಡಿಸಲು ಸಾಧ್ಯವಾದ ಎಲ್ಲವನ್ನೂ ಮಾಡುವುದಾಗಿ ಶಪಥ ಮಾಡೋಣ ಮತ್ತು ನಮ್ಮ ಸಂವಿಧಾನದಲ್ಲಿ ನೀಡಿರುವ ಮೌಲ್ಯಗಳಿಗೆ ಅನುಗುಣವಾಗಿ ಬದುಕೋಣ' ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. 'ನಮ್ಮ ಪ್ರಜಾಪ್ರಭುತ್ವದ ತತ್ವಗಳನ್ನು ಕಾಂಗ್ರೆಸ್ ತುಳಿದುಹಾಕಿದ್ದು ಹೀಗೆ. ತುರ್ತು ಪರಿಸ್ಥಿತಿಗೆ ವಿರೋಧ ವ್ಯಕ್ತಪಡಿಸಿದ ಮತ್ತು ಭಾರತೀಯ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಆ ಎಲ್ಲಾ ಮಹನೀಯರನ್ನು ನಾವು ನೆನಪಿಸಿಕೊಳ್ಳುತ್ತೇವೆ' ಎಂದು ಮತ್ತೊಂದು ಟ್ವೀಟ್ ಮಾಡಿರುವ ಮೋದಿ, ಸಂದರ್ಭದಲ್ಲಿ ಸಂಪೂರ್ಣವಾಗಿ ನಿಷೇಧಕ್ಕೆ ಒಳಗಾಗಿದ್ದ ವಿವಿಧ ಸಂಗತಿಗಳ ಬಗ್ಗೆ ಪಟ್ಟಿ ಮಾಡಿರುವ ಇನ್‌ಸ್ಟಾಗ್ರಾಂ ಪೋಸ್ಟ್‌ನ ಕೊಂಡಿಯನ್ನು ಹಂಚಿಕೊಂಡಿದ್ದಾರೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕಾಂಗ್ರೆಸ್, ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರ ಕುರಿತಾದ ಸಿನಿಮಾಗಳನ್ನು ನಿಷೇಧಿಸಿತ್ತು. ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ್ ಟ್ಯಾಗೋರ್ ಅವರ ನುಡಿಗಳು, ಕಿಶೋರ್ ಕುಮಾರ್ ಅವರ ಹಾಡುಗಳನ್ನು ಮತ್ತು ಅಸಮ್ಮತಿ ವ್ಯಕ್ತಪಡಿಸಿವ ಭಾರತದ ಹಕ್ಕುಗಳ ಮೇಲೆ ಕಾಂಗ್ರೆಸ್ ನಿಷೇಧ ಹೇರಿತ್ತು ಎಂದು ಬಿಜೆಪಿ ಆರೋಪಿಸಿದೆ. ಇಂತಹ ಕ್ರಮವನ್ನು ಮತ್ತೆ ತೆಗೆದುಕೊಳ್ಳಲು ಕಾಂಗ್ರೆಸ್‌ಗೆ ಎಂದಿಗೂ ಅವಕಾಶ ನೀಡಬಾರದು ಎಂದು ಪ್ರತಿಜ್ಞೆ ಮಾಡುವಂತೆ ಬಿಜೆಪಿ ಜನರಿಗೆ ಮನವಿ ಮಾಡಿದೆ. 'ತುರ್ತುಪರಿಸ್ಥಿತಿಯು ಒಂದು ಕುಟುಂಬದ ವಿರುದ್ಧದ ಧ್ವನಿಗಳನ್ನು ಹತ್ತಿಕ್ಕಲು ನಡೆದ ಕ್ರೂರ ಹಿಂಸೆ ಮತ್ತು 21 ತಿಂಗಳ ಅಮಾನವೀಯ ಆಡಳಿತದ ಅಧ್ಯಾಯ. 1975ರ ಈ ದಿನದಂದು ಪ್ರಜಾಪ್ರಭುತ್ವವನ್ನು ಕಾಂಗ್ರೆಸ್ ಕೊಲೆ ಮಾಡಿತ್ತು' ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, 'ಕೋವಿಡ್ 19 ವಿರುದ್ಧದ ಹೋರಾಟಕ್ಕೆ ರಾಷ್ಟ್ರವ್ಯಾಪಿ ವೈದ್ಯರ ಕೊರತೆಯಿಂದ ನಾವು ಸಂಕಷ್ಟ ಅನುಭವಿಸುತ್ತಿದ್ದೇವೆ. ಆದರೆ ಸಂಪೂರ್ಣ ಅರ್ಹತೆ ಪಡೆದ ವಿದೇಶಿ ವೈದ್ಯಕೀಯ ಪದವೀಧರರನ್ನು ಧಿಕ್ಕರಿಸುತ್ತಿದ್ದೇವೆ. ಈ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಸನ್ನಿವೇಶದಲ್ಲಿಯಾದರೂ ನಾವು ಏಕೆ ವಿದೇಶಿ ವೈದ್ಯಕೀಯ ಪದವಿಗಳನ್ನು ಗುರುತಿಸಬಾರದು?' ಎಂದು ಪ್ರಶ್ನಿಸಿದ್ದಾರೆ.