ದಿಲ್ಲಿ ಮತ್ತೆ ಒಂದು ವಾರ ಲಾಕ್: ಪ್ರಕರಣ ಇಳಿಕೆಯಾದರೆ ಅನ್‌ಲಾಕ್ ಎಂದ ಕೇಜ್ರಿವಾಲ್

ಕಳೆದ ತಿಂಗಳಿನಿಂದ ದಿಲ್ಲಿಯಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ಅನ್ನು ಇನ್ನೂ ಒಂದು ವಾರದವರೆಗೆ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದಾರೆ. ದೈನಂದಿನ ಪ್ರಕರಣಗಳಲ್ಲಿ ಇಳಿಕೆಯಾದರೆ ಅನ್‌ಲಾಕ್ ಆರಂಭಿಸುವುದಾಗಿ ತಿಳಿಸಿದ್ದಾರೆ.

ದಿಲ್ಲಿ ಮತ್ತೆ ಒಂದು ವಾರ ಲಾಕ್: ಪ್ರಕರಣ ಇಳಿಕೆಯಾದರೆ ಅನ್‌ಲಾಕ್ ಎಂದ ಕೇಜ್ರಿವಾಲ್
Linkup
ಹೊಸದಿಲ್ಲಿ: ದಿಲ್ಲಿಯಲ್ಲಿನ ಕ್ರಮವನ್ನು ಮತ್ತೆ ಒಂದು ವಾರದವರೆಗೆ ವಿಸ್ತರಿಸಲಾಗಿದೆ. ಒಂದು ವೇಳೆ ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ಇಳಿಕೆಯಾದರೆ ಅನ್‌ಲಾಕ್ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಭಾನುವಾರ ತಿಳಿಸಿದ್ದಾರೆ. ಪ್ರಸ್ತುತ ರಾಜಧಾನಿಯಲ್ಲಿ ಮೇ 31ರವರ ಬೆಳಿಗ್ಗೆ 5 ಗಂಟೆಯವರೆಗೂ ಲಾಕ್‌ಡೌನ್ ಇರಲಿದೆ. ಕೋವಿಡ್ ಪ್ರಕರಣಗಳಲ್ಲಿ ಇಳಿಕೆಯಾದರೂ ತಕ್ಷಣವೇ ಅನ್‌ಲಾಕ್ ಪ್ರಕ್ರಿಯೆ ಜಾರಿಗೊಳಿಸುವುದಿಲ್ಲ. ಹಂತಹಂತವಾಗಿ ನಿಯಮಗಳನ್ನು ಸಡಿಲಗೊಳಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ. ನಗರದಲ್ಲಿ ಪಾಸಿಟಿವಿಟಿ ಪ್ರಮಾಣವನ್ನು ತಗ್ಗಿಸಲು ಸಾಕಷ್ಟು ಕಷ್ಟವಾಗುತ್ತಿರುವುದರಿಂದ ಜನರು ಇನ್ನೂ ಜಾಗ್ರತೆ ವಹಿಸುವುದು ಮುಖ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ. ಯಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ತಿಂಗಳಿನಿಂದಲೇ ಲಾಕ್‌ಡೌನ್ ಜಾರಿಯಾಗಿತ್ತು. ಆಕ್ಸಿಜನ್ ಕೊರತೆ, ಹಾಸಿಗೆಗಳ ಅಲಭ್ಯತೆ ಮತ್ತು ಔಷಧಗಳ ಅಭಾವದಿಂದಾಗಿ ಅನೇಕರು ನೂರಾರು ಮಂದಿ ಜೀವ ಕಳೆದುಕೊಂಡಿದ್ದಾರೆ. 'ಸಾಧ್ಯವಾದಷ್ಟು ಕಡಿಮೆ ಸಮಯದಲ್ಲಿ ಜನರಿಗೆ ಲಸಿಕೆಗಳನ್ನು ನೀಡುವಂತೆ ನೋಡಿಕೊಳ್ಳುವುದು ನಮ್ಮ ಈಗಿನ ಆದ್ಯತೆಯಾಗಿದೆ. ದೆಹಲಿಯಲ್ಲಿ ನಾವು ಎಲ್ಲ ವ್ಯವಸ್ಥೆಗಳನ್ನೂ ಕಲ್ಪಿಸಿದ್ದು, ಇನ್ನು ಮೂರು ತಿಂಗಳಲ್ಲಿ ಪ್ರತಿಯೊಬ್ಬರೂ ಲಸಿಕೆ ಪಡೆದುಕೊಳ್ಳುವಂತಾಗಬೇಕು. ಆದರೆ ಲಸಿಕೆಗಳ ಕೊರತೆಯಿದೆ. ಪ್ರತಿಯೊಬ್ಬರೂ ಸೂಕ್ತ ಸಮಯದಲ್ಲಿ ಲಸಿಕೆ ಪಡೆದುಕೊಂಡರೆ ನಾವು ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಬಹುದು' ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಹಾಗೂ ವಿದೇಶಿ ಕಂಪೆನಿಗಳಿಂದ ಕೂಡ ಗರಿಷ್ಠ ಪ್ರಮಾಣದಲ್ಲಿ ಲಸಿಕೆ ಡೋಸ್‌ಗಳನ್ನು ತರಿಸಿಕೊಳ್ಳಲು ಎಲ್ಲ ರೀತಿಯ ಪ್ರಯತ್ನಗಳನ್ನು ದೆಹಲಿ ಸರ್ಕಾರ ಮಾಡುತ್ತಿದೆ. ಯಾರಾದರೂ ಲಸಿಕೆ ಮಾರಾಟ ಮಾಡುವುದಿದ್ದರೆ, ದೆಹಲಿಯ ಜನತೆಗಾಗಿ ಯಾವ ಬೆಲೆಯನ್ನಾದರೂ ತೆತ್ತು ತರಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.