ಧ್ವಂಸ ಮಾಡೋದೇ ಪ್ರತಾಪ ಸಿಂಹ ಜಾಯಮಾನ: ಪ್ರಿಯಾಂಕ ಖರ್ಗೆ

ಮೈಸೂರು ಹಾಗೂ ಊಟಿ ಮಾರ್ಗದಲ್ಲಿ ನಿರ್ಮಿಸಲಾಗಿರುವ ಕೆಲವು ಬಸ್ ನಿಲ್ದಾಣಗಳ ಮೇಲೆ ಗುಂಬಜ್ ಮಾದರಿಯ ನಿರ್ಮಾಣಗಳನ್ನು ಮಾಡಿರುವುದನ್ನು ಆಕ್ಷೇಪಿಸಿರುವ ಮೈಸೂರು ಸಂಸದ ಪ್ರತಾಪ್ ಸಿಂಹ, ಅವುಗಳನ್ನು ಶೀಘ್ರವೇ ತೆರವುಗೊಳಿಸಬೇಕು. ಇಲ್ಲವಾದರೆ, ತಾವೇ ಬುಲ್ಡೋಜರ್ ತಂದು ಅವುಗಳನ್ನು ಧ್ವಂಸ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಧ್ವಂಸ ಮಾಡೋದೇ ಪ್ರತಾಪ್ ಸಿಂಹ ಅವರ ಜಾಯಮಾನ. ಹಾಗಾಗಿ, ಅವರಿಂದ ಇಂಥ ಹೇಳಿಕೆಗಳು ಬಂದರೆ ಅದಕ್ಕೆ ಅಚ್ಚರಿ ಪಡಬೇಕಿಲ್ಲ ಎಂದು ಹೇಳಿದ್ದಾರೆ.

ಧ್ವಂಸ ಮಾಡೋದೇ ಪ್ರತಾಪ ಸಿಂಹ ಜಾಯಮಾನ: ಪ್ರಿಯಾಂಕ ಖರ್ಗೆ
Linkup
ಮೈಸೂರು ಹಾಗೂ ಊಟಿ ಮಾರ್ಗದಲ್ಲಿ ನಿರ್ಮಿಸಲಾಗಿರುವ ಕೆಲವು ಬಸ್ ನಿಲ್ದಾಣಗಳ ಮೇಲೆ ಗುಂಬಜ್ ಮಾದರಿಯ ನಿರ್ಮಾಣಗಳನ್ನು ಮಾಡಿರುವುದನ್ನು ಆಕ್ಷೇಪಿಸಿರುವ ಮೈಸೂರು ಸಂಸದ ಪ್ರತಾಪ್ ಸಿಂಹ, ಅವುಗಳನ್ನು ಶೀಘ್ರವೇ ತೆರವುಗೊಳಿಸಬೇಕು. ಇಲ್ಲವಾದರೆ, ತಾವೇ ಬುಲ್ಡೋಜರ್ ತಂದು ಅವುಗಳನ್ನು ಧ್ವಂಸ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಧ್ವಂಸ ಮಾಡೋದೇ ಪ್ರತಾಪ್ ಸಿಂಹ ಅವರ ಜಾಯಮಾನ. ಹಾಗಾಗಿ, ಅವರಿಂದ ಇಂಥ ಹೇಳಿಕೆಗಳು ಬಂದರೆ ಅದಕ್ಕೆ ಅಚ್ಚರಿ ಪಡಬೇಕಿಲ್ಲ ಎಂದು ಹೇಳಿದ್ದಾರೆ.