'ನಾಗರಹಾವು' ಚಿತ್ರದ ವರದಣ್ಣ ಇನ್ನು ನೆನಪು ಮಾತ್ರ; ಶಿವರಾಂ ನಿಧನಕ್ಕೆ ರಾಜಕೀಯ, ಸಿನಿಮಾ ಮಂದಿ ಸಂತಾಪ

ಕನ್ನಡದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶಿವರಾಂ ಅವರ ನಿಧನಕ್ಕೆ ರಾಜಕೀಯ ಗಣ್ಯರು, ಕನ್ನಡ ಚಿತ್ರರಂಗದವರು ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆ ನೀಡಿರುವ ಶಿವರಾಂ ನಿಧನ ದುಃಖ ತಂದಿದೆ ಎಂದಿದ್ದಾರೆ ಗಣ್ಯರು.

'ನಾಗರಹಾವು' ಚಿತ್ರದ ವರದಣ್ಣ ಇನ್ನು ನೆನಪು ಮಾತ್ರ; ಶಿವರಾಂ ನಿಧನಕ್ಕೆ ರಾಜಕೀಯ, ಸಿನಿಮಾ ಮಂದಿ ಸಂತಾಪ
Linkup
ಕನ್ನಡದ ಹಿರಿಯ ನಟ ಅವರು ಡಿಸೆಂಬರ್ 4 ರಂದು ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ , ರಾಜಕೀಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ. ನಿಖಿಲ್ ಕುಮಾರಸ್ವಾಮಿ ಹಿರಿಯ ನಟ ಶಿವರಾಂ ಅವರು 6 ದಶಕಗಳ ಕಾಲ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಎಂ ಪಿ ರೇಣುಕಾಚಾರ್ಯ ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಶಿವರಾಂ ಅವರ ಅಗಲಿಕೆಯ ವಿಷಯ ಕೇಳಿ ದುಃಖವಾಯಿತು. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಿ ಅವರ ಕುಟುಂಬಕ್ಕೆ ಮತ್ತು ಅಭಿಮಾನಿ ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಸುನೀಲ್ ಕುಮಾರ್ ಕಾರ್ಕಳ ಕನ್ನಡ ಚಿತ್ರರಂಗದ ಹಿರಿಯ ನಟರಾದ ಶಿವರಾಂ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಅವರ ಅಗಲಿಕೆಯಿಂದ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರಿಗೆ ಸದ್ಗತಿ ಸಿಗಲೆಂದು ಹಾಗೂ ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ಪ್ರಾರ್ಥಿಸುತ್ತೇನೆ. ಶಶಿಕಲಾ ಜೊಲ್ಲೆ ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕರಾದ ಶಿವರಾಂ ಅವರು ವಿಧಿವಶರಾಗಿರುವುದು ದುಃಖದ ಸಂಗತಿ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬಸ್ಥರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಲಕ್ಷ್ಮಣ ಸವದಿ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಎಸ್. ಶಿವರಾಂ ಅವರು ದೈವಾಧೀನರಾದ ಸುದ್ದಿ ಕೇಳಿ ಆಘಾತವಾಯಿತು. ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ, ಕುಟುಂಬಕ್ಕೆ, ಅಭಿಮಾನಿಗಳಿಗೆ ದುಃಖಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಹೊಂಬಾಳೆ ಫಿಲ್ಮ್ಸ್ ಚಿತ್ರರಂಗದಲ್ಲಿ ಶಿವರಾಮಣ್ಣ ಎಂದೇ ಖ್ಯಾತರಾದ ಹಿರಿಯ ಕಲಾವಿದರಾದ ಶಿವರಾಂ ಅವರ ನಿಧನ ಇಡೀ ಚಿತ್ರರಂಗಕ್ಕೆ ದುಃಖದ ಸುದ್ದಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಮ್ಮ ಪ್ರಾರ್ಥನೆ. ಅವರ ಕಲಾಪ್ರತಿಭೆ ಎಲ್ಲರಿಗೂ ಪ್ರೇರಣೆಯಾಗಲಿ. ಓಂ ಶಾಂತಿ ಎಚ್‌ಡಿ ಕುಮಾರಸ್ವಾಮಿ ಕನ್ನಡ ಚಿತ್ರರಂಗದ ಶ್ರೇಷ್ಠ ನಟರಲ್ಲಿ ಒಬ್ಬರು, ಚಿತ್ರರಂಗದ ಆಸ್ತಿಯಾಗಿದ್ದ ಹಿರಿಯ ನಟ ಶಿವರಾಂ ಅವರು ನಿಧನರಾದ ಸುದ್ದಿ ತಿಳಿದು ದಿಗ್ಭ್ರಮೆ ಆಯಿತು. ನಮ್ಮ ಚಿತ್ರರಂಗದ ಎಲ್ಲ ಆಗುಹೋಗುಗಳಿಗೆ ಸದಾ ಮಿಡಿಯುತ್ತಿದ್ದ ಅವರ ಅಗಲಿಕೆ ನನಗೆ ಬಹಳ ದುಃಖವುಂಟು ಮಾಡಿದೆ. ಮುರುಗೇಶ್ ನಿರುಗಾಣಿ ಮನೋಜ್ಞ ಅಭಿನಯದ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ಹಿರಿಯ ಪೋಷಕ ನಟ ಶಿವರಾಂ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಆಘಾತವಾಯಿತು. ಭಗವಂತನು ನಿಮ್ಮ ಆತ್ಮಕ್ಕೆ ಶಾಂತಿ ನೀಡಲಿ. ನಿಮ್ಮ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಕೊಡಲಿ ಮೊಹಮ್ಮದ್ ಹ್ಯಾರೀಸ್ ನಲ್ಪಾಡ್ ಹಿರಿಯ ನಟ ಶ್ರೀ ಶಿವರಾಂ ಅವರು ಇನ್ನಿಲ್ಲವೆಂಬ ಸುದ್ದಿ ತಿಳಿದು ಆಘಾತವಾಯಿತು. ನಟನೆ, ಚಲನಚಿತ್ರ ನಿರ್ಮಾಣ ಹೀಗೆ ಕನ್ನಡ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದ ಶ್ರೀಯುತರ ನಿಧನವು ಕಲಾಲೋಕಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ‌ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ ಶಿವರಾಮ್ ಹೆಬ್ಬಾರ್ ನಿರ್ದೇಶಕರು, ನಿರ್ಮಾಪಕರು ಹಾಗೂ ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟರಾದ ಶ್ರೀ ಎಸ್.ಶಿವರಾಂ ಅವರ ಅಗಲಿಕೆಯ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ನೀಡಿ, ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೆನೆ ಪಿಸಿ ಮೋಹನ್ ಕನ್ನಡ ಚಿತ್ರರಂಗದಲ್ಲಿ ದಶಕಗಳ ಕಾಲ ನಟರಾಗಿ, ನಿರ್ಮಾಪಕರಾಗಿ, ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಪ್ರಖ್ಯಾತ ಹಿರಿಯ ಕಲಾವಿದ ಶಿವರಾಂ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಭಗವಂತ ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ರೂಪೇಶ್ ರಾಜಣ್ಣ ಶಿವರಾಂ ಸಾರ್ ನೆನೆಪು ಮಾತ್ರ. ನಾಗರಹಾವು ಸಿನಿಮಾದ ''ವರದಣ್ಣ'' ಇನ್ನು ನೆನಪು ಮಾತ್ರ. ಮತ್ತೆ ಹುಟ್ಟಿ ಬನ್ನಿ..ನಿಮ್ಮ ಕಲೆ ಸದಾಕಾಲಕ್ಕೂ ನಮ್ಮ ಹೃದಯದಲ್ಲಿ ಬದುಕಿನ ಪಯಣ ಮುಗಿಸಿದ ಚಂದನವನದ ದಂತಕಥೆ, ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸರ್. ಎಚ್‌ ಡಿ ದೇವೇಗೌಡ ಹಿರಿಯ ಕಲಾವಿದ ಎಸ್. ಶಿವರಾಂ ಅವರು ಅಪಘಾತಕ್ಕೆ ಈಡಾಗಿ ಜೀವನ್ಮರಣದ ಹೋರಾಟದಲ್ಲಿ ಸೋತಿರುವುದು ಮನಸ್ಸಿಗೆ ಅತೀವ ದುಃಖವನ್ನುಂಟು ಮಾಡಿದೆ. ಸತತ ಆರು ದಶಕಗಳ ಕಾಲ ಪೋಷಕ ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಕನ್ನಡಿಗರನ್ನು ಮನರಂಜಿಸಿದ ಅವರ ಅಕಾಲಿಕ ಮರಣ ಕನ್ನಡ ಚಿತ್ರರಂಗಕ್ಕೆ ಭರಿಸಲಾಗದ ನಷ್ಟ ಉಂಟುಮಾಡಿದೆ. ಅರಗ ಜ್ಞಾನೇಂದ್ರ ಕನ್ನಡದ ಹಿರಿಯ ಕಲಾವಿದ, ಚಿತ್ರ ನಿರ್ಮಾಪಕ ಶ್ರೀ ಶಿವರಾಂ ಅವರ ನಿಧನ ಬಹಳ ನೋವು ತಂದಿದೆ. ಆರು ದಶಕಗಳಿಂದ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಅವರು ಸಾಮಾಜಿಕ ಸಂದೇಶಗಳನ್ನು ಸಾರುವ ಚಿತ್ರಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಜಗ್ಗೇಶ್ ಶಿವರಾಂ ರವರು ಕಂಠೀರವ ಸ್ಟುಡಿಯೋದಲ್ಲಿ ಈ ಪಾತ್ರ ಮಾಡುವಾಗ ಈ ಸನ್ನಿವೇಶಕ್ಕೆ ಹುಡುಗರು ಬೇಕು ಎಂದಾಗ ಅಲ್ಲಿ ನಿಂತಿದ್ದ ನನ್ನನ್ನು ಕರೆದು ನಿಲ್ಲಿಸಿದರು ಆಗ ನನಗೆ 16ವರ್ಷ. ಅಷ್ಟಕ್ಕೆ ನಾನು ಪುಳಕಿತನಾಗಿದ್ದೆ. ನಾನು ನಾಯಕನಟ ಆದಮೇಲೆ ನನ್ನ ಅನೇಕ ಚಿತ್ರದಲ್ಲಿ ನಟಿಸಿದ್ದರು. ಮುನಿಸಿನ ಸ್ವಭಾವದ ವ್ಯಕ್ತಿ, ಬಹಳ ತಿಳಿದಿದ್ದವರು! ಇಂದಿನ ತಲೆಮಾರಿಂದ