ನಟ ಅಲ್ಲು ಅರ್ಜುನ್‌ ಬೇಗ ಚೇತರಿಸಿಕೊಳ್ಳಲೆಂದು ದೇವಸ್ಥಾನದಲ್ಲಿ ಅಭಿಮಾನಿಗಳ ಪೂಜೆ! ವಿಡಿಯೋ ವೈರಲ್!

'ಸ್ಟೈಲಿಶ್ ಸ್ಟಾರ್' ಅಲ್ಲು ಅರ್ಜುನ್ ಅವರು ಕೊರೊನಾ ವೈರಸ್‌ ಸೋಂಕಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಬೇಗ ಹುಷಾರಾಗಲಿ ಎಂದು ಅಭಿಮಾನಿಗಳು ದೇವಸ್ಥಾನದಲ್ಲಿ ಪೂಜೆ ಮಾಡಿಸುತ್ತಿದ್ದಾರೆ.

ನಟ ಅಲ್ಲು ಅರ್ಜುನ್‌ ಬೇಗ ಚೇತರಿಸಿಕೊಳ್ಳಲೆಂದು ದೇವಸ್ಥಾನದಲ್ಲಿ ಅಭಿಮಾನಿಗಳ ಪೂಜೆ! ವಿಡಿಯೋ ವೈರಲ್!
Linkup
ವಿಶ್ವದಾದ್ಯಂತ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ, ಅದರಲ್ಲೂ ಹೆಚ್ಚು ಮಹಿಳಾ ಫ್ಯಾನ್ಸ್ ಹೊಂದಿರುವ 'ಸ್ಟೈಲಿಶ್ ಸ್ಟಾರ್' ಅವರಿಗೆ ಸೋಂಕು ದೃಢಪಟ್ಟಿದೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಅರ್ಜುನ್ ತಿಳಿಸಿದ್ದರು. ಈಗ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ದೇವಸ್ಥಾನದಲ್ಲಿ ಪೂಜೆ ಮಾಡಿಸುತ್ತಿದ್ದಾರೆ. ಅಲ್ಲು ಅರ್ಜುನ್‌ಗೆ ಕೊರೊನಾ "ಎಲ್ಲರಿಗೂ ನಮಸ್ಕಾರ, ನನಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಮನೆಯಲ್ಲಿಯೇ ಐಸೋಲೇಟ್ ಆಗಿದ್ದೇನೆ. ಎಲ್ಲ ನಿಯಮ ಅನುಸರಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಳ್ಳುವೆ. ಮನೆಯಲ್ಲಿಯೇ ಸುರಕ್ಷಿತವಾಗಿ ಇರಿ, ವ್ಯಾಕ್ಸಿನ್ ತೆಗೆದುಕೊಳ್ಳಿ. ನನ್ನ ಬಗ್ಗೆ ಯಾರೂ ಚಿಂತಿಸಬೇಡಿ, ನಾನು ಚೆನ್ನಾಗಿದ್ದೇನೆ ಎಂದು ಮನವಿ ಮಾಡಿಕೊಳ್ಳುತ್ತೇನೆ" ಎಂದು ಅಲ್ಲು ಅರ್ಜುನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದರು. ಪ್ರತಿಕ್ರಿಯೆ ಅಲ್ಲು ಅರ್ಜುನ್ ಅಭಿಮಾನಿಗಳು 'ಅಣ್ಣಾ, ಬೇಗ ಹುಷಾರಾಗಿ' ಎಂಬ ಸಂದೇಶದೊಂದಿಗೆ ದೇವಸ್ಥಾನದಲ್ಲಿ ಪೂಜೆ ಮಾಡಿಸುತ್ತಿರುವ ವಿಡಿಯೋ, ಪೋಸ್ಟರ್‌ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. '' ಸಿನಿಮಾದ ನಟಿ ಪೂಜಾ ಹೆಗಡೆಗೆ ಕೂಡ ಕೊರೊನಾ ಪಾಸಿಟಿವ್ ಬಂದಿದೆ. ಪ್ರಸ್ತುತ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲು ಅರ್ಜುನ್‌ಗೂ ಕೂಡ ಕೊರೊನಾ ಬಂದಿರೋದು ನೋಡಿ "ಅಮೂಲ್ಯಾಗೆ ಬಂಟು ಕಂಪನಿ ಕೊಡುತ್ತಿರುವ ಹಾಗೆ ಅನಿಸ್ತಿದೆ. ಬೇಗ ಹುಷಾರಾಗಿ. ನಿಮಗೆ ಶಕ್ತಿ ಬರಲಿ" ಎಂದು ಪೂಜಾ ಹೆಗಡೆ ಅವರು ಅಲ್ಲು ಅರ್ಜುನ್ ಟ್ವೀಟ್‌ಗೆ ರಿಟ್ವೀಟ್ ಮಾಡಿದ್ದಾರೆ. ಅಭಿಮಾನಿಗಳ ಹಾರೈಕೆ 'ಅಲಾ ವೈಕುಂಠಪುರಂಲೋ' ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರು ಬಂಟಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರೆ, ಪೂಜಾ ಹೆಗಡೆ ಅವರು ಅಮೂಲ್ಯ ಪಾತ್ರ ಮಾಡಿದ್ದರು. ಇನ್ನು ಪೂಜಾ ಕೂಡ ಮನೆಯಲ್ಲಿಯೇ ಐಸೋಲೇಟ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಫಿಟ್‌ನೆಸ್ ತಜ್ಞರ ಜೊತೆ ಇನ್‌ಸ್ಟಾಗ್ರಾಮ್‌ನಲ್ಲಿ ಲೈವ್ ಬಂದಿದ್ದು ಮಾತುಕತೆ ನಡೆಸಿದ್ದರು. ಒಟ್ಟಿನಲ್ಲಿ ಅಭಿಮಾನಿಗಳು ಪೂಜಾ ಹಾಗೂ ಅಲ್ಲು ಅರ್ಜುನ್‌ಗೆ ಬೇಗ ಹುಷಾರಾಗಿ ಎಂದು ಹಾರೈಸುತ್ತಿದ್ದಾರೆ.