‘ನಾನು ಆರೋಗ್ಯವಾಗಿದ್ದೀನಿ’: ವದಂತಿಗಳಿಗೆ ಸ್ಪಷ್ಟನೆ ನೀಡಿದ ಹಂಸಲೇಖ

ಹಂಸಲೇಖ ಅವರ ಆರೋಗ್ಯದ ಬಗ್ಗೆ ವದಂತಿ ಹಬ್ಬಿತು. ಇದೀಗ ವದಂತಿಗಳಿಗೆಲ್ಲಾ ಹಂಸಲೇಖ ಸ್ಪಷ್ಟನೆ ಕೊಟ್ಟಿದ್ದಾರೆ. ‘’ನಾನು ಆರೋಗ್ಯವಾಗಿದ್ದೀನಿ’’ ಅಂತ ಹಂಸಲೇಖ ಪತ್ರದ ಮುಖೇನ ಸ್ಪಷ್ಟ ಪಡಿಸಿದ್ದಾರೆ.

‘ನಾನು ಆರೋಗ್ಯವಾಗಿದ್ದೀನಿ’: ವದಂತಿಗಳಿಗೆ ಸ್ಪಷ್ಟನೆ ನೀಡಿದ ಹಂಸಲೇಖ
Linkup
ಕನ್ನಡ ಚಿತ್ರರಂಗದ ಖ್ಯಾತ ‘ನಾದಬ್ರಹ್ಮ’ ಇತ್ತೀಚೆಗಷ್ಟೇ ವಿವಾದಕ್ಕೆ ಸಿಲುಕಿದ್ದರು. ದಲಿತರು, ಅಸ್ಪೃಶ್ಯತೆ ಕುರಿತಂತೆ ಹಂಸಲೇಖ ಮಾತನಾಡಿದ್ದರು. ಜೊತೆಗೆ ಪೇಜಾವರ ಶ್ರೀಗಳ ಹೆಸರನ್ನೂ ಪ್ರಸ್ತಾಪ ಮಾಡಿದ್ದರು. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ್ಮೇಲೆ ಹಂಸಲೇಖ ಪರ-ವಿರೋಧ ಚರ್ಚೆ ಆರಂಭವಾಯಿತು. ಬಳಿಕ ಹಂಸಲೇಖ ಕ್ಷಮೆ ಕೂಡ ಕೇಳಿದ್ದರು. ಹೀಗಿರುವಾಗಲೇ ಹಂಸಲೇಖ ಅವರ ಆರೋಗ್ಯದ ಬಗ್ಗೆ ವದಂತಿ ಹಬ್ಬಿತು. ಇದೀಗ ವದಂತಿಗಳಿಗೆಲ್ಲಾ ಹಂಸಲೇಖ ಸ್ಪಷ್ಟನೆ ಕೊಟ್ಟಿದ್ದಾರೆ. ‘’ನಾನು ಆರೋಗ್ಯವಾಗಿದ್ದೀನಿ’’ ಅಂತ ಹಂಸಲೇಖ ಪತ್ರದ ಮುಖೇನ ಸ್ಪಷ್ಟ ಪಡಿಸಿದ್ದಾರೆ. ಪತ್ರದ ಮೂಲಕ ಹಂಸಲೇಖ ಹೇಳಿರುವುದೇನು? ‘’ಪೂಜ್ಯ ಕರ್ನಾಟಕವೇ.. ನಮಸ್ಕಾರ, ನಾನು ಆರೋಗ್ಯವಾಗಿದ್ದೀನಿ. ನನಗೆ ತಪ್ಪಿದೆ ಅಂತ ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೆ ಸವೆದಿದ್ದೀನಿ.. ಸಹಿಸಿದ್ದೀನಿ. ಅದರ ಸುಖ ಇವತ್ತು ಅನುಭವಿಸುತ್ತಿದ್ದೀನಿ. ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ. ನಾನು ಕೇಳದೆ ಇಡೀ ಕರ್ನಾಟಕದಲ್ಲಿ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರ ಮಾತನಾಡುತ್ತಿದ್ದಾರೆ. ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ. ಅಭಿಮಾನ ಆವೇಶವಾಗಬಾರದು: ಆವೇಶ ಅವಗಢಗಳಿಗೆ ಕಾರಣವಾಗಬಾರದು. ಅಭಿಮಾನ ಹಾಡಿನಂತೆ ಇರಬೇಕು. ಹಾಡು ಕೇಳಿಸುತ್ತದೆ.. ಮುಟ್ಟಿಸುತ್ತದೆ. ನಿಮ್ಮ ಪ್ರೀತಿ ನನಗೆ ತಲುಪಿದೆ. ನಿಮ್ಮ ಪ್ರೀತಿಗೆ ನನ್ನ ಹೃದಯ ತುಂಬಿದ ನಮಸ್ಕಾರಗಳು’’ ಎಂದು ಪತ್ರದಲ್ಲಿ ಹಂಸಲೇಖ ಉಲ್ಲೇಖಿಸಿದ್ದಾರೆ. ಕ್ಷಮೆ ಕೇಳಿದ್ದ ಹಂಸಲೇಖ ದಲಿತರು, ಅಸ್ಪೃಶ್ಯತೆ ಕುರಿತಂತೆ ಹಂಸಲೇಖ ಮಾತನಾಡಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ಧಂತೆಯೇ ಅವರು ಕ್ಷಮೆ ಕೇಳಿದರು. 'ಮೊದಲಿಗೆ ಕ್ಷಮೆ ಇರಲಿ, ಎರಡನೇದಾಗಿಯೂ ಕ್ಷಮೆ ಇರಲಿ.. ಎಲ್ಲ ಮಾತುಗಳು ವೇದಿಕೆಗೆ ಅಲ್ಲ ಅನ್ನೋದು ನನಗೆ ಗೊತ್ತಿದೆ, ತಪ್ಪು. ಅದು ಒಂದು ಪ್ರಶಸ್ತಿ ಪುರಸ್ಕಾರ ಸಭೆ. ಅಲ್ಲಿ, ನುಡಿದರೆ ಮುತ್ತಿನ ಹಾರದಂತೆ ಇರಬೇಕು ಎನ್ನುವಂತೆ ಇರಬೇಕಿತ್ತು. ನಾನು ಹಾಗೇ ಅಲಂಕರಿಸಬೇಕಿತ್ತು, ತಪ್ಪು. ಅಸ್ಪೃಶ್ಯತೆ ನಮ್ಮ ದೇಶಕ್ಕೆ ಅಂಟಿದ ಶಾಪ. ಇದು ಜಿಡ್ಡು ಕೃಷ್ಣಮೂರ್ತಿಗಳ ಮಾತು, ನನ್ನ ಮಾತಲ್ಲ. ಅಸ್ಪೃಶ್ಯತೆಯ ಅನಿಷ್ಟವನ್ನು ತೊಡೆದು ಹಾಕೋದಕ್ಕೆ ಪೇಜಾವರ ಶ್ರೀಗಳು ಸೇರಿದಂತೆ ಎಲ್ಲ ಗುರು - ಹಿರಿಯರು ಪ್ರಯತ್ನ, ಸಂಧಾನಗಳನ್ನು ಮಾಡುತ್ತಲೇ ಇದ್ದಾರೆ. ಆ ಪ್ರಯತ್ನ, ಸಂಧಾನಗಳ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ದಶಕಗಳ ಹಿಂದೆ ನಮ್ಮ ಕಲಾರಂಗದಲ್ಲೂ ಅಸ್ಪೃಶ್ಯತೆ ದಟ್ಟವಾಗಿತ್ತು. ಮನುಷ್ಯವಶಾತ್ ಇಲ್ಲಿ ಅದು ಕರಗಿ ಮಾಯಾವಾಗಿದೆ. ಭಾರತದಲ್ಲೂ ಕೂಡ ಅದು ಕರಗಿ ಮಾಯಾವಾಗುವ ದಿನವಿದೆ. ನಾನು ಅಲ್ಲಿ ಆಡಿದ ಕೆಲ ಮಾತುಗಳು ನನ್ನ ಹೆಂಡತಿಗೂ ಇಷ್ಟವಾಗಲಿಲ್ಲ. ಆಕೆಯ ಕ್ಷಮೆಯನ್ನೂ ನಾನು ಕೇಳಿದ್ದೇನೆ. ನಾನು ಸಂಗೀತಗಾರ. ನನಗ್ಯಾಕೆ ಈ ಟ್ರೋಲ್? ಕಂಟ್ರೋಲ್ ಆಗಿರುವುದಷ್ಟೇ ನಮ್ಮ ಕೆಲಸ. ಯಾರ ಮನಸ್ಸನ್ನು ನೋಯಿಸಲು ಇಷ್ಟವಿಲ್ಲ. ನನ್ನ ಸಂಗೀತ ಹೇಗೆ ಎಲ್ಲರಿಗೂ ಸುಖ ಕೊಡುತ್ತದೆಯೋ, ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು' ಎಂದು ಹಂಸಲೇಖ ಹೇಳಿದ್ದರು.