'ನನ್ನ ಮುಂದಿರುವುದು ಕೋವಿಡ್ ನಿರ್ವಹಣೆ ಮಾತ್ರ': ನಾಯಕತ್ವ ಬದಲಾವಣೆ ಬಗ್ಗೆ ಯಡಿಯೂರಪ್ಪ ತೀಕ್ಷ್ಣ ಪ್ರತಿಕ್ರಿಯೆ

'ನನ್ನ ಮುಂದೆ ಇರುವುದು ಕೋವಿಡ್ ನಿರ್ವಹಣೆ ಮಾತ್ರ. ಅದರ ನಿಯಂತ್ರಣ ಹಾಗೂ ನಿರ್ವಹಣೆ ಕೆಲಸಕ್ಕೆ ಮಾತ್ರ ಆದ್ಯತೆ' ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ನಾಯಕತ್ವ ಬದಲಾವಣೆ ಕುರಿತಾದ ಚರ್ಚೆಗೆ ಸಂಬಂಧಿಸಿದಂತೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

'ನನ್ನ ಮುಂದಿರುವುದು ಕೋವಿಡ್ ನಿರ್ವಹಣೆ ಮಾತ್ರ': ನಾಯಕತ್ವ ಬದಲಾವಣೆ ಬಗ್ಗೆ ಯಡಿಯೂರಪ್ಪ ತೀಕ್ಷ್ಣ ಪ್ರತಿಕ್ರಿಯೆ
Linkup
ಬೆಂಗಳೂರು: ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹರಡುತ್ತಿರುವ ಸುದ್ದಿಗಳ ಬಗ್ಗೆ ಮುಖ್ಯಮಂತ್ರಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 'ನನ್ನ ಮುಂದೆ ಇರುವುದು ನಿರ್ವಹಣೆ ಮಾತ್ರ. ಅದರ ನಿಯಂತ್ರಣ ಹಾಗೂ ನಿರ್ವಹಣೆ ಕೆಲಸಕ್ಕೆ ಮಾತ್ರ ಆದ್ಯತೆ' ಎಂದು ಯಡಿಯೂರಪ್ಪ ಹೇಳಿದರು. ನಾಯಕತ್ವ ಬದಲಾವಣೆ ಚರ್ಚೆಯ ಕುರಿತಾಗಿ ವಿಧಾನಸೌಧದಲ್ಲಿ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ಕೊರೊನಾ ನಿಯಂತ್ರಿಸುವುದು, ಜನಹಿತ ಕಾಪಾಡೋದು ನನ್ನ ಆದ್ಯತೆ ಎಂದರು.‌ ಯಾರೋ ಒಬ್ಬರು ಎಲ್ಲಿಗೋ ಹೋಗಿ ಬಂದರು ಅಂದರೆ, ಅವರಿಗೆ ಉತ್ತರ ಕೊಟ್ಟು ಕಳಿಸಿದಾರಲ್ಲ ಎಂದು ಪರೋಕ್ಷವಾಗಿ ಸಚಿವ ಸಿ.ಪಿ ಯೋಗೀಶ್ವರ್ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕೋವಿಡ್ ನಿಂದಾಗಿ ಜನರ ಸಾವು ನೋವು ಹೆಚ್ಚಾಗಿರುತ್ತಿದೆ. ಅದನ್ನು ತಡೆಯುವ ಬಗ್ಗೆ ಶಾಸಕರು, ಸಚಿವರು ಒಟ್ಟಾಗಿ ಕೆಲಸ ಮಾಡಬೇಕು ಎಂದರು.‌ ಇನ್ನು ಶಾಸಕಾಂಗ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಗರಂ ಆದ ಯಡಿಯೂರಪ್ಪ, ಶಾಸಕಾಂಗ ಸಭೆಯ ಬಗ್ಗೆ ನಿಮ್ಮ ಜೊತೆಗೆ ಚರ್ಚೆ ನಡೆಸುವ ಅಗತ್ಯ ಇಲ್ಲ ಎಂದು ಹೇಳಿದರು. ಬಿಎಸ್ ವೈಗೆ ಸಿದ್ದು ಸವದಿ ಬೆಂಬಲ 'ಇದೆಲ್ಲಾ ಮಾಧ್ಯಮ ಸುದ್ದಿ ಅಷ್ಟೇ, ಅಧಿಕೃತವಾಗಿ ಯಾವುದೂ ನಡೆದಿಲ್ಲ. ದೆಹಲಿಗೆ ಯಾರು ಹೋಗಿದ್ದಾರೆ ಎಂಬುದು ಗೊತ್ತಿಲ್ಲ. ನಮ್ಮ ನಾಯಕರು ಯಡಿಯೂರಪ್ಪನವರೇ' ಎಂದು ಕುರಿತಾಗಿ ದಲ್ಲಿ ಬಿಜೆಪಿ ಶಾಸಕ ಸಿದ್ದು ಸವದಿ ತಿಳಿಸಿದರು. ಮೇಕೆ ದಾಟು ವಿಚಾರಕ್ಕೆ ಸಂಬಂಧಿಸಿದಂತೆ ಚೆನ್ನೈ ಹಸಿರು ಪೀಠ ಸಮಿತಿ ರಚನೆ ಮಾಡಿರುವ ವಿಚಾರದಲ್ಲಿ ಮಾತನಾಡಿ, ಈ ಕುರಿತಾಗಿ ಚರ್ಚೆ ಮಾಡುತ್ತೇವೆ. ಅದನ್ನು ತಡೆಯೋಕೆ ಏನು ಮಾಡಬೇಕೋ ಮಾಡುತ್ತೇವೆ. ಹೈಕೋರ್ಟ್ ಮೊರೆ ಹೋಗ್ತಿವಿ, ಸುಪ್ರೀಂ ಕೋರ್ಟ್‌ಗೆ ಕೂಡ ಹೋಗುತ್ತೇವೆ ಎಂದರು. ಸಿಎಂ ಯಾವುದೇ ಕಾರಣಕ್ಕೂ ಬದಲಾಗಲ್ಲ - ನಾರಾಯಣ ಗೌಡ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಬಿಎಸ್ ಯಡಿಯೂರಪ್ಪ ಅವರೇ ಎರಡು ವರ್ಷ ಇರ್ತಾರೆ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಯುವಜನ ಸೇವೆ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಹೇಳಿದರು. ದೆಹಲಿಗೆ ಹೋಗ್ತಾ ಇದ್ದಾರೆ. ಅದೆಲ್ಲ ತಪ್ಪು ಈ ಸಮಯದಲ್ಲಿ ಯಾರೂ ಹೋಗಬಾರದು ಎಂದು ಪರೋಕ್ಷವಾಗಿ ಸಿ.ಪಿ ಯೋಗೇಶ್ವರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.