ಪುನೀತ್ ರಾಜ್‌ಕುಮಾರ್‌ಗೆ ‘ಕರ್ನಾಟಕ ರತ್ನ’ ಗೌರವ: ಈ ಹಿಂದೆ ಇದೇ ಪ್ರಶಸ್ತಿ ಪಡೆದ 9 ಸಾಧಕರು ‘ಇವರೇ’!

ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಕರ್ನಾಟಕ ರಾಜ್ಯ ಸರ್ಕಾರ ತೀರ್ಮಾನಿಸಿದೆ. ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನ ಈವರೆಗೆ ಒಂಬತ್ತು ಸಾಧಕರಿಗೆ ನೀಡಲಾಗಿದೆ.

ಪುನೀತ್ ರಾಜ್‌ಕುಮಾರ್‌ಗೆ ‘ಕರ್ನಾಟಕ ರತ್ನ’ ಗೌರವ: ಈ ಹಿಂದೆ ಇದೇ ಪ್ರಶಸ್ತಿ ಪಡೆದ 9 ಸಾಧಕರು ‘ಇವರೇ’!
Linkup
ದಿವಂಗತ ನಟ ಪವರ್ ಸ್ಟಾರ್ ಅವರಿಗೆ ಮರಣೋತ್ತರ ‘’ ನೀಡಲು ಕರ್ನಾಟಕ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ನವೆಂಬರ್ 16 ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ್ದ ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧಿಕೃತವಾಗಿ ಘೋಷಿಸಿದರು. ‘’ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ’’ ಎಂದು ‘ಪುನೀತ್ ನಮನ’ ಕಾರ್ಯಕ್ರಮದ ವೇದಿಕೆ ಮೇಲೆ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಪುನೀತ್ ರಾಜ್‌ಕುಮಾರ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ತೀರ್ಮಾನ ಅಭಿಮಾನಿಗಳಿಗೆ ಖುಷಿ ನೀಡಿದೆ. ಕನ್ನಡ ಚಿತ್ರರಂಗದ ಮಂದಿ ಕೂಡ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ‘ಕರ್ನಾಟಕ ರತ್ನ’ ಪ್ರಶಸ್ತಿ ರಾಷ್ಟ್ರ ಮಟ್ಟದಲ್ಲಿ ‘ಭಾರತ ರತ್ನ’ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದ್ದರೆ, ರಾಜ್ಯ ಮಟ್ಟದಲ್ಲಿ ‘ಕರ್ನಾಟಕ ರತ್ನ’ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಕರ್ನಾಟಕ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಕರ್ನಾಟಕ ರತ್ನ’. 1992ರಲ್ಲಿ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಸ್ಥಾಪಿಸಲಾಯಿತು. ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿರುವ ಅಪ್ರತಿಮ ಸಾಧಕರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ನೀಡಲಾಗುತ್ತದೆ. ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಪಡೆಯುವವರಿಗೆ 50 ಗ್ರಾಂ ತೂಕದ ಚಿನ್ನದ ಪದಕ, ನೆನಪಿನ ಕಾಣಿಕೆ ನೀಡಿ, ಶಾಲನ್ನು ಹೊದಿಸಿ ಗೌರವಿಸಲಾಗುತ್ತದೆ. ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನ ಈವರೆಗೆ ಒಂಬತ್ತು ಸಾಧಕರಿಗೆ ನೀಡಲಾಗಿದೆ. ‘ಕರ್ನಾಟಕ ರತ್ನ’ ಪ್ರಶಸ್ತಿ ಪಡೆದ ಸಾಧಕರು ಯಾರ್ಯಾರು? 1992ರಲ್ಲಿ ಸ್ಥಾಪಿಸಲಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅದೇ ವರ್ಷ ಮೊದಲು ಸ್ವೀಕರಿಸಿದವರು ರಾಷ್ಟ್ರಕವಿ ಕುವೆಂಪು ಮತ್ತು ಡಾ.ರಾಜ್‌ಕುಮಾರ್. ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದ ಕುವೆಂಪು ಮತ್ತು ಸಿನಿಮಾರಂಗಕ್ಕೆ ಅಪಾರ ಕೊಡುಗೆ ನೀಡಿದ್ದ ಡಾ.ರಾಜ್‌ಕುಮಾರ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
  • 1999ರಲ್ಲಿ ರಾಜಕಾರಣಿ ಎಸ್.ನಿಜಲಿಂಗಪ್ಪ
  • 2000ರಲ್ಲಿ ವಿಜ್ಞಾನಿ ಸಿ.ಎನ್‌.ಆರ್.ರಾವ್
  • 2001ರಲ್ಲಿ ವೈದ್ಯ ಡಾ.ದೇವಿ ಶೆಟ್ಟಿ
  • 2005ರಲ್ಲಿ ಭೀಮ್‌ಸೇನ್ ಜೋಷಿ
  • 2007ರಲ್ಲಿ ಶಿವಕುಮಾರ ಸ್ವಾಮೀಜಿ
  • 2008ರಲ್ಲಿ ಜವರೇ ಗೌಡ
  • 2009ರಲ್ಲಿ ವೀರೇಂದ್ರ ಹೆಗ್ಗಡೆ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
  • ಇದೀಗ ‘ಕರ್ನಾಟಕ ರತ್ನ’ ಪ್ರಶಸ್ತಿಯ ಗೌರವ ಪುನೀತ್ ರಾಜ್‌ಕುಮಾರ್ ಅವರಿಗೂ ಸಲ್ಲಿಕೆಯಾಗಲಿದೆ.
ಪುನೀತ್ ರಾಜ್‌ಕುಮಾರ್ ಆರು ತಿಂಗಳ ಮಗುವಾಗಿದ್ದಾಗಿನಿಂದಲೇ ಬೆಳ್ಳಿಪರದೆ ಮೇಲೆ ಮಿನುಗಲು ಪ್ರಾರಂಭಿಸಿದವರು ಪುನೀತ್ ರಾಜ್‌ಕುಮಾರ್. ಚಿಕ್ಕವಯಸ್ಸಿನಲ್ಲೇ ಒಂದೇ ಟೇಕ್‌ನಲ್ಲಿ ಅಭಿನಯಿಸುತ್ತಿದ್ದ ಪುನೀತ್ ರಾಜ್‌ಕುಮಾರ್ ಎರಡು ಬಾರಿ ಅತ್ಯುತ್ತಮ ಬಾಲನಟ ರಾಜ್ಯ ಪ್ರಶಸ್ತಿ ಹಾಗೂ ಒಂದು ಬಾರಿ ಅತ್ಯುತ್ತಮ ಬಾಲನಟ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಪೂರ್ಣ ಪ್ರಮಾಣದ ನಾಯಕನಾದ್ಮೇಲೂ ಅತ್ಯುತ್ತಮ ನಟನೆಗೆ ರಾಜ್ಯ ಪ್ರಶಸ್ತಿ, ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಪುನೀತ್ ರಾಜ್‌ಕುಮಾರ್ ಪಡೆದಿದ್ದರು.