ಪ್ರೇಯಸಿ ಕಾಲ್‌ ರಿಸೀವ್‌ ಮಾಡಿಲ್ಲವೆಂದು ರೊಚ್ಚಿಗೆದ್ದ ಪ್ರೇಮಿಯಿಂದ ಎಂಟು ಕಾರುಗಳ ಜಖಂ!

ಸತೀಶ್‌ ಪೀಠೋಪಕರಣ ಕೆಲಸ ಮಾಡುತ್ತಿದ್ದ. ಕೆಲ ವರ್ಷಗಳಿಂದ ತಮಿಳುನಾಡಿನ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ, ಕೆಲ ದಿನಗಳ ಹಿಂದೆ ಆಕೆಯ ಜತೆ ಗಲಾಟೆ ಮಾಡಿಕೊಂಡಿದ್ದ. ಇದಾದ ಕೆಲ ದಿನಗಳ ಬಳಿಕ ಯುವತಿಗೆ ಕರೆ ಮಾಡಿದರೂ ಆಕೆ ಕರೆ ಸ್ವೀಕರಿಸಿರಲಿಲ್ಲ. ಎಸ್‌ಎಂಎಸ್‌ ಸಂದೇಶಕ್ಕೂ ಪ್ರತಿಕ್ರಿಯೆ ನೀಡಿರಲಿಲ್ಲ.

ಪ್ರೇಯಸಿ ಕಾಲ್‌ ರಿಸೀವ್‌ ಮಾಡಿಲ್ಲವೆಂದು ರೊಚ್ಚಿಗೆದ್ದ ಪ್ರೇಮಿಯಿಂದ ಎಂಟು ಕಾರುಗಳ ಜಖಂ!
Linkup
ಬೆಂಗಳೂರು: ತನ್ನ ಪ್ರೀತಿಗೆ ಪ್ರಿಯತಮೆ ಸ್ಪಂದಿಸುತ್ತಿಲ್ಲವೆಂದು ಬೇಸರಗೊಂಡ ಪ್ರೇಮಿಯೊಬ್ಬ ಪಾನಮತ್ತನಾಗಿ ಕುರುಬರಹಳ್ಳಿಯ ಪೈಪ್‌ಲೈನ್‌ ರಸ್ತೆ ಬದಿ ನಿಲ್ಲಿಸಿದ್ದ ಎಂಟು ಕಾರುಗಳನ್ನು ಕಲ್ಲು ಹಾಗೂ ದೊಣ್ಣೆಯಿಂದ ಹೊಡೆದು ಜಖಂಗೊಳಿಸಿರುವ ಘಟನೆ ಬಸವೇಶ್ವರ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾರು ಜಖಂಗೊಳಿಸಿರುವ ಆರೋಪದಡಿ ಮಹಾಲಕ್ಷ್ಮಿ ಲೇಔಟ್‌ ನಿವಾಸಿ ಸತೀಶ್‌(26)ನನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸತೀಶ್‌ ಪೀಠೋಪಕರಣ ಕೆಲಸ ಮಾಡುತ್ತಿದ್ದ. ಕೆಲ ವರ್ಷಗಳಿಂದ ತಮಿಳುನಾಡಿನ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ, ಕೆಲ ದಿನಗಳ ಹಿಂದೆ ಆಕೆಯ ಜತೆ ಗಲಾಟೆ ಮಾಡಿಕೊಂಡಿದ್ದ. ಇದಾದ ಕೆಲ ದಿನಗಳ ಬಳಿಕ ಯುವತಿಗೆ ಕರೆ ಮಾಡಿದರೂ ಆಕೆ ಕರೆ ಸ್ವೀಕರಿಸಿರಲಿಲ್ಲ. ಎಸ್‌ಎಂಎಸ್‌ ಸಂದೇಶಕ್ಕೂ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ರೋಸಿಹೋದ ಯುವಕ ಕಂಠಪೂರ್ತಿ ಕುಡಿದು ಗುರುವಾರ ರಾತ್ರಿ 1.30ರ ವೇಳೆಯಲ್ಲಿ ಕುರುಬರಹಳ್ಳಿಯ ಪೈಪ್‌ಲೈನ್‌ ರಸ್ತೆಯ ಎರಡು ಬದಿಯಲ್ಲೂ ನಿಲ್ಲಿಸಿರುವ ಎಂಟು ಕಾರುಗಳನ್ನು ಜಖಂಗೊಳಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು. ಕಾರು ಮಾಲೀಕರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ, ಆತನ ವಿರುದ್ಧ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.