'ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ' ಆರೋಗ್ಯ ಸಮೀಕ್ಷೆ ಕಾರ್ಯಕ್ರಮಕ್ಕೆ ಆರ್‌. ಅಶೋಕ್ ಚಾಲನೆ

“ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ” ಆರೋಗ್ಯ ಸಮೀಕ್ಷೆ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಆರ್‌. ಅಶೋಕ್ ಚಾಲನೆ ನೀಡಿದರು. ಕೋವಿಡ್ ಹಿನ್ನೆಲೆಯಲ್ಲಿ ವೈದ್ಯರ ತಂಡ ಈ ಸಮೀಕ್ಷೆ ನಡೆಸಲಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

'ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ' ಆರೋಗ್ಯ ಸಮೀಕ್ಷೆ ಕಾರ್ಯಕ್ರಮಕ್ಕೆ ಆರ್‌. ಅಶೋಕ್ ಚಾಲನೆ
Linkup
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ “ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ” ಎಂಬ ಧ್ಯೇಯ ವಾಖ್ಯದೊಂದಿಗೆ ಪಾಲಿಕೆ ವೈದ್ಯರ ತಂಡವು ಮನೆ-ಮನೆಗೆ ಭೇಟಿ ನೀಡಿ ಕೋವಿಡ್ ಸಂಬಂಧಿಸಿದಂತೆ ಆರೋಗ್ಯ ಸಮೀಕ್ಷೆ ನಡೆಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಚಿವ ಆರ್‌. ಅಶೋಕ್ ಸೋಮವಾರ ಚಾಲನೆ ನೀಡಿದರು. ನಿಮ್ಮ ಆರೋಗ್ಯವೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಖ್ಯದೊಂದಿಗೆ ಪಾಲಿಕೆ ವೈದ್ಯರ ತಂಡವು ಮನೆ-ಮನೆಗೆ ಭೇಟಿ ನೀಡಿ ಕೋವಿಡ್ ಸಂಬಂಧಿಸಿದಂತೆ ಆರೋಗ್ಯ ಸಮೀಕ್ಷೆ ನಡೆಸಲಿದೆ. ಸದರಿ ಸಮೀಕ್ಷೆಯಲ್ಲಿ ಒಬ್ಬ ವೈದ್ಯರು ಮತ್ತು ಒಬ್ಬ ಅರೆ ವೈದ್ಯಕೀಯ ಸಿಬ್ಬಂದಿಗಳ ತಂಡದೊಂದಿಗೆ ಪ್ರತೀ ಮನೆಗೆ ಭೇಟಿ ನೀಡಿ, ಕೋವಿಡ್ ಗುಣಲಕ್ಷಣಗಳ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸುವ ಮತ್ತು ಕೋಮಾರ್ಬಿಡ್ ಖಾಯಿಲೆಗಳಿರುವ ಕುರಿತು ವಿಚಾರಿಸಿ, ಆರೋಗ್ಯ ಸಲಹೆ ನೀಡಲಾಗುತ್ತದೆ. ಈ ಸಂಬಂಧ ಮೊದಲ ಹಂತವಾಗಿ ಪಾಲಿಕೆಯ ವಿಧಾನಸಭಾ ಕ್ಷೇತ್ರವಾರು 2 ವಾರ್ಡ್ ಗಳಂತೆ 54 ವಾರ್ಡ್ ಗಳನ್ನು ಆಯ್ಕೆ ಮಾಡಲಾಗಿದ್ದು, ಆಗಸ್ಟ್ 16 ರಿಂದ ಸಮೀಕ್ಷಾ ಕಾರ್ಯ ಪ್ರಾರಂಭವಾಗಲಿದೆ. ಸಮೀಕ್ಷಾ ಕಾರ್ಯದಲ್ಲಿ ಫಿಸಿಕಲ್ ಟ್ರಯಾಜಿಂಗ್ ಮತ್ತು ಲಸಿಕಾ ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಿಯಾ ಯೋಜನೆ ರೂಪಿಸಲಾಗಿರುತ್ತದೆ. ಮನೆ-ಮನೆ ಸಮೀಕ್ಷಾ ಕಾರ್ಯದ ಪ್ರಮುಖ ಅಂಶಗಳು *ಪ್ರತೀ ತಂಡವು ಪ್ರತಿನಿತ್ಯ ಕನಿಷ್ಠ 50 ಮನೆಗಳ ಸಮೀಕ್ಷೆ ನಡೆಸುವುದು. *ಪ್ರತೀ ವಾರ್ಡ್‍ಗೆ 5 ವೈದ್ಯರ ತಂಡವಿರಲಿದ್ದು, ಅಗತ್ಯಕ್ಕನುಗುಣವಾಗಿ ಹೆಚ್ಚಿನ ತಂಡಗಳನ್ನು ನಿಯೋಜಿಸಿಕೊಳ್ಳಲಾಗುವುದು. *ಪ್ರತೀ ತಂಡದಲ್ಲಿ ಒಬ್ಬ ವೈದ್ಯಾಧಿಕಾರಿ(ಎಂ.ಬಿ.ಬಿ.ಎಸ್/ಬಿ.ಡಿ.ಎಸ್/ಆಯುμï) ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನೊಳಗೊಂಡ ತಂಡವಿರಲಿದೆ. *ಪ್ರತೀ ತಂಡದ ವೈದ್ಯಾಧಿಕಾರಿಗಳು ‘ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ, ನಿಮ್ಮ ಆರೋಗ್ಯವೇ ನಮ್ಮ ಧ್ಯೇಯ’ ಎಂಬ ಘೋಷಣೆಯನ್ನು ಮುದ್ರಿಸಿರುವ ಬಿಳಿ ಬಣ ್ಣದ ಏಪ್ರಾನ್‍ನ್ನು ಧರಿಸಲಿದ್ದಾರೆ. *ಮನೆ-ಮನೆಗೆ ತಂಡಗಳು ಭೇಟಿ ನಿಡುವ ಸಲುವಾಗಿ ವಾಹನಗಳ ನಿಯೋಜನೆ ಮಾಡಲಾಗಿರುತ್ತದೆ. *ಮನೆ ಭೇಟಿಯ ಸಮಯದಲ್ಲಿ ಕೋವಿಡ್-19 ಸೋಂಕಿತರು ಪತ್ತೆಯಾದಲ್ಲಿ, ಸದರಿ ಸೋಂಕಿತರಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವ ಹೋಂ ಐಸೋಲೇಷನ್ ಕಿಟ್ ಅನ್ನು ನೀಡಲಾಗುವುದು. *ಸಮೀಕ್ಷಾ ಕಾರ್ಯದಲ್ಲಿ ಪಡೆದ ಮಾಹಿತಿಯನ್ನು ಪ್ರತೀ ದಿನ ನಿಗಧಿತ ಬಿಬಿಎಂಪಿ ತಂತ್ರಾಂಶದಲ್ಲಿ ನಮೂದಿಸಲು ವೈದ್ಯರ ತಂಡಕ್ಕೆ ಸೂಚಿಸಲಾಗಿದೆ.