ಬಿಎಸ್‌ವೈ ಸರಕಾರಕ್ಕೆ 2 ವರ್ಷ: 'ಸಂದೇಶ'ದ ಸಸ್ಪೆನ್ಸ್‌ ನಡುವೆ ಸಾಧನಾ ಸಮಾವೇಶ

ಸರಕಾರ ಸಾರ್ಥಕ ಸೇವೆಯ 2 ವರ್ಷಗಳ ಎಂಬ ಘೋಷಣೆಯೊಂದಿಗೆ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ರಾಜ್ಯ ಸರಕಾರ ಮಾಡಿರುವ ಸಾಧನೆಗಳು ಪ್ರಕಟಿಸಿರುವ ಯೋಜನೆಗಳ ಕುರಿತಾಗಿ ಮುಖ್ಯಮಂತ್ರಿಗಳು ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

ಬಿಎಸ್‌ವೈ ಸರಕಾರಕ್ಕೆ 2 ವರ್ಷ: 'ಸಂದೇಶ'ದ ಸಸ್ಪೆನ್ಸ್‌ ನಡುವೆ ಸಾಧನಾ ಸಮಾವೇಶ
Linkup
ಬೆಂಗಳೂರು: ಮುಖ್ಯಮಂತ್ರಿ ಸರ್ಕಾರಕ್ಕೆ ಜುಲೈ 26ಕ್ಕೆ ಎರಡು ವರ್ಷ ತುಂಬಿದೆ. ಜತೆಗೆ ಬಿಎಸ್‌ವೈ ರಾಜೀನಾಮೆಗೆ ಹೈಕಮಾಂಡ್‌ ಸಂದೇಶ ಬರುತ್ತದೆ ಎಂಬ ಸಸ್ಪೆನ್ಸ್‌ ನಡುವೆಯೇ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಾಧನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಬಿಎಸ್‌ವೈ ಪದತ್ಯಾಗದ ವದಂತಿಯ ಹಿನ್ನೆಲೆಯಲ್ಲಿ ಈ ಸಮಾವೇಶ ಮಹತ್ವ ಪಡೆದುಕೊಂಡಿದೆ. ಸರಕಾರ ಸಾರ್ಥಕ ಸೇವೆಯ 2 ವರ್ಷಗಳ ಎಂಬ ಘೋಷಣೆಯೊಂದಿಗೆ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ರಾಜ್ಯ ಸರಕಾರ ಮಾಡಿರುವ ಸಾಧನೆಗಳು ಪ್ರಕಟಿಸಿರುವ ಯೋಜನೆಗಳ ಕುರಿತಾಗಿ ಮುಖ್ಯಮಂತ್ರಿಗಳು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಈ ನಡುವೆ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಸಾಧನಾ ಸಮಾವೇಶದ ಬಳಿಕ ರಾಜೀನಾಮೆ ಸಲ್ಲಿಸುತ್ತಾರಾ? ಎಂಬ ಪ್ರಶ್ನೆಯೂ ಕಾಡಿದೆ. ಜುಲೈ 25 ಕ್ಕೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ ಅದರಂತೆ ನಡೆದುಕೊಳ್ಳುತ್ತೇನೆ ಎಂದಿದ್ದರು. ಆದರೆ ಈವರೆಗೂ ಹೈಕಮಾಂಡ್‌ನಿಂದ ಯಾವುದೇ ಸಂದೇಶ ಬಂದಿಲ್ಲ. ಆದರೆ ಸೋಮವಾರ ಸಂದೇಶ ಬರುತ್ತಾ ಎಂಬುವುದು ಕುತೂಹಲ ಕೆರಳಿಸಿದೆ. ಈ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಎಸ್‌ ಯಡಿಯೂರಪ್ಪ ಅವರ ಆಡಳಿತ ವೈಖರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೆ ಯಾವುದೇ ರಾಜಕೀಯ ಗೊಂದಲ ಕರ್ನಾಟಕದಲ್ಲಿ ಇಲ್ಲ ಎಂದು ಹೇಳಿದ್ದಾರೆ. ರಾಜೀನಾಮೆ ಚರ್ಚೆಯ ಹಿನ್ನೆಲೆಯಲ್ಲಿ ಜೆಪಿ ನಡ್ಡಾ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಒಟ್ಟಿನಲ್ಲಿ ಸೋಮವಾರದ ಸಾಧನಾ ಸಮಾವೇಶದ ಬಳಿಕ ಸಿಎಂ ಯಡಿಯೂರಪ್ಪ ಯಾವ ನಿಲುವು ತೆಗೆದುಕೊಳ್ಳುತ್ತಾರೆ ಎಂಬುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹೈಕಮಾಂಡ್ ರಾಜೀನಾಮೆ ಕೊಡಿ ಎಂದು ಕೊಡುತ್ತೇನೆ ಇರಿ ಎಂದರೆ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.