ಬೆಂಗಳೂರಿನ ಕೋರಮಂಗಲದಲ್ಲಿ ಐಷಾರಾಮಿ ಕಾರು ಭೀಕರ ಅಪಘಾತ: 7 ಮಂದಿ ಸ್ನೇಹಿತರ ದುರ್ಮರಣ

ಬೆಂಗಳೂರಿನ ಕೋರಮಂಗಲದ ಬಳಿ ಭೀಕರ ಅಪಘಾತ ಸಂಭವಿಸಿದೆ. ಐಷಾರಾಮಿ ಆಡಿ ಕ್ಯೂ3 ಕಾರು ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದಾರೆ. ಇವರೆಲ್ಲರೂ ಸ್ನೇಹಿತರಾಗಿದ್ದದು ಬೇರೆ ರಾಜ್ಯಗಳಿಂದ ಬಂದು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರಿನ ಕೋರಮಂಗಲದಲ್ಲಿ ಐಷಾರಾಮಿ ಕಾರು ಭೀಕರ ಅಪಘಾತ: 7 ಮಂದಿ ಸ್ನೇಹಿತರ ದುರ್ಮರಣ
Linkup
ಬೆಂಗಳೂರು: ಐಷಾರಾಮಿ ಕಾರೊಂದು ಫುಟ್ಪಾತ್ ಮೇಲಿನ ಕಂಬಕ್ಕೆ ಡಿಕ್ಕಿಯಾಗಿ 7 ಜನರ ದುರ್ಮರಣಕ್ಕೀಡಾಗಿರುವ ಭೀಕರ ಅಪಘಾತ ಬೆಂಗಳೂರಿನ ಕೋರಮಂಗಲದಲ್ಲಿ ತಡರಾತ್ರಿ ನಡೆದಿದೆ.ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ಈ ಭೀಕರ ದುರಂತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಐಷಾರಾಮಿ ಕಾರು ಡಿಕ್ಕಿ ಹೊಡೆದಿದೆ. ಘಟನೆ ವೇಳೆ ಕಾರಿನಲ್ಲಿದ್ದ ಮೂವರು ಮಹಿಳೆಯರು ನಾಲ್ಕು ಪುರುಷರು ಸೇರಿ ಒಟ್ಟು ಏಳು ಮಂದಿ ಸಾವಿಗೀಡಾಗಿದ್ದಾರೆ. KA 03 MY 6666 ಈ ನಂಬರಿನ ಐಷಾರಾಮಿ ಕಾರು ಅಪಘಾತದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಮುಂದಿನ ಸೀಟ್‌ ತುಂಬಾ ರಕ್ತದ ಕಲೆಗಳಿದ್ದು ಕಾರಿನ ಎಡಭಾಗದ 2 ಟೈರ್‌ ಸಂಪೂರ್ಣ ಪೀಸ್‌ಪೀಸ್‌ ಆಗಿದೆ ಘಟನೆ ವಿವರ! ಈ ಘಟನೆ ತಡರಾತ್ರಿ ರಾತ್ರಿ ಸುಮಾರು 1:30ರ ವೇಳೆ ನಡೆದಿದೆ ಎನ್ನಲಾಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕೋರಮಂಗಲದ ಮಂಗಳ ಕಲ್ಯಾಣಮಂಟಪದ ಬಳಿ ಫುಟ್ಪಾತ್ ಮೇಲಿನ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಸಂಚಾರ ವಿಭಾಗದ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಗೆ ದಾಖಲಿಸಿದ ವೇಳೆ ಮೃತಪಟ್ಟಿದ್ದಾರೆ. ಅಪಘಾತಕ್ಕೆ ಅತಿ ವೇಗವೇ ಕಾರಣ. ನಿರ್ಲಕ್ಷ್ಯ, ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ. ಫುಟ್‌ಪಾತ್‌ ಹತ್ತಿ 2 ಬೊಲ್ಲಾರ್ಡ್ಸ್‌ಗೆ ಕಾರು ಡಿಕ್ಕಿಯಾಗಿದೆ. ಬಳಿಕ ಪಕ್ಕದ ಕಟ್ಟಡದ ಗೋಡೆಗೂ ಗುದ್ದಿದೆ. ನಂತರ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇನ್ನು ರಾತ್ರಿ ವೇಳೆಯಾದ ಕಾರಣ ಮದ್ಯ ಸೇವಿಸಿರುವ ಶಂಕೆ ಕೂಡ ವ್ಯಕ್ತವಾಗಿದೆ. ಮೃತರೆಲ್ಲರೂ 25ರಿಂದ 30 ವರ್ಷ ವಯಸ್ಸಿನವರು. ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಕಾಂತೇಗೌಡ ಹೇಳಿದ್ದೇನು? ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ 7 ಜನರೂ ಮೃತಪಟ್ಟಿದ್ದಾರೆ. 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಗೆ ದಾಖಲಿಸಿದ ವೇಳೆ ಮೃತಪಟ್ಟಿದ್ದಾರೆ ಎಂದು ರವಿಕಾಂತೇಗೌಡ ಹೇಳಿದ್ದಾರೆ. ಅಪಘಾತಕ್ಕೆ ಅತಿ ವೇಗವೇ ಕಾರಣ. ನಿರ್ಲಕ್ಷ್ಯ, ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ. ಫುಟ್‌ಪಾತ್‌ ಹತ್ತಿ 2 ಬೊಲ್ಲಾರ್ಡ್ಸ್‌ಗೆ ಕಾರು ಡಿಕ್ಕಿಯಾಗಿದೆ. ಬಳಿಕ ಪಕ್ಕದ ಕಟ್ಟಡದ ಗೋಡೆಗೂ ಗುದ್ದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕಾರಿನಲ್ಲಿದ್ದವರು ಎಲ್ಲಿಂದ ಬರುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಮದ್ಯ ಸೇವಿಸಿದ್ದರಾ ಎಂಬ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ. ಎಲ್ಲಾ ಬೀದಿಗಳಲ್ಲಿ ನಿರ್ಜನವಾಗಿದ್ದಾಗ ಚಾಲಕ ವೇಗವಾಗಿ ಓಡಿಸಿದ್ದಾನೆ. ಎಲ್ಲಿಗೆ ಹೋಗ್ತಿದ್ರು, ಎಲ್ಲಿಂದ ಬರ್ತಾ ಇದ್ರು ಎಂಬ ಬಗ್ಗೆ ತನಿಖೆಯಾಗುತ್ತಿದೆ ಎಂದಿದ್ದಾರೆ. ಕಾರಿನ ಮುಂದಿನ ಸೀಟ್‌ನಲ್ಲಿ ಮೂವರು ಕುಳಿತಿದ್ದರು ಹಾಗೂ ಹಿಂಬದಿ ಸೀಟ್‌ನಲ್ಲಿ ನಾಲ್ವರು ಕುಳಿತಿದ್ದರು. ಕಾರಿನಲ್ಲಿದ್ದ 7 ಜನರಲ್ಲಿ ಯಾರೂ ಸೀಟ್ ಬೆಲ್ಟ್ ಹಾಕಿರಲಿಲ್ಲ. ಇದರಿಂದ ಕಾರಿನಲ್ಲಿದ್ದ ಏರ್‌ಬ್ಯಾಗ್ ಸಹ ಓಪನ್ ಆಗಿಲ್ಲ ಎಂದು ರವಿಕಾಂತೇಗೌಡ ತಿಳಿಸಿದ್ದಾರೆ. ಮೃತರೆಲ್ಲ ಸ್ನೇಹಿತರು! ಕಾರು ಅಪಘಾತದಲ್ಲಿ ಮೃತಪಟ್ಟವರೆಲ್ಲ ಸ್ನೇಹಿತರಾಗಿದ್ದು, 20ರಿಂದ 30 ವರ್ಷದವರಾಗಿದ್ದಾರೆ. ಹೊಸೂರು ಮೂಲದ ಕರುಣಾಸಾಗರ್, ಪತ್ನಿ ಬಿಂದು(28), ಕೇರಳ ಮೂಲದ ಅಕ್ಷಯ್ ಗೋಯಲ್, ಇಶಿತಾ(21), ಧನುಷಾ(21), ಹುಬ್ಬಳ್ಳಿಯ ರೋಹಿತ್, ಹರಿಯಾಣ ಮೂಲದ ಉತ್ಸವ್ ಮೃತ ದುರ್ದೈವಿಗಳು. ಇವರೆಲ್ಲ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಬಂದು ಬೇರೆ ಬೇರೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದರು. ಪಿಜಿ ಹಾಗೂ ಮನೆಗಳನ್ನು ಬಾಡಿಗೆ ಪಡೆದು ವಾಸ್ತವ್ಯ ಹೂಡಿದ್ದರು. ವಿಕೇಂಡ್‌ ಹಿನ್ನೆಲೆ ಸುತ್ತಾಟಕ್ಕೆ ಹೋಗಿರುವ ಸಾಧ್ಯತೆ ಇದೆ.