ಬೆಂಗಳೂರಿನ ಸ್ಯಾಂಕಿ ಕೆರೆ ಬಳಿ ಇರುವ ಶಿವಾಜಿ ಪ್ರತಿಮೆಗೆ ಮಸಿ: 7 ಮಂದಿ ಬಂಧನ

ವರುಣ್‌ ಹಾಗೂ ವಿನೋದ್‌ ಎಂಬುವವರು ಶಿವಾಜಿ ಪ್ರತಿಮೆ ಮೇಲೆ ಮಸಿ ನೀರು ಸುರಿದಿದ್ದಾರೆ. ಈ ದೃಶ್ಯಾವಳಿಯನ್ನು ನವೀನ್‌ ಗೌಡ ಎಂಬಾತ ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಬಳಿಕ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ

ಬೆಂಗಳೂರಿನ ಸ್ಯಾಂಕಿ ಕೆರೆ ಬಳಿ ಇರುವ ಶಿವಾಜಿ ಪ್ರತಿಮೆಗೆ ಮಸಿ: 7 ಮಂದಿ ಬಂಧನ
Linkup
: ನಗರದ ಭಾಷ್ಯಂ ವೃತ್ತದ ಬಳಿ ಇರುವ ಛತ್ರಪತಿ ಪ್ರತಿಮೆಗೆ ಮಸಿ ಬಳಿದು ಕರ್ನಾಟಕ, ಮಹಾರಾಷ್ಟ್ರ ನಡುವಣ ಉದ್ವಿಗ್ನ ಸ್ಥಿತಿಗೆ ಕಾರಣರಾಗಿದ್ದ ಏಳು ಮಂದಿಯನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಕರ್ನಾಟಕ ರಣಧೀರ ಪಡೆ ಅಧ್ಯಕ್ಷ ಚೇತನ್‌ ಗೌಡ, ಮಾಜಿ ಶಾಸಕ ಟಿ. ನಾರಾಯಣ್‌ ಕುಮಾರ್‌ ಅವರ ಪುತ್ರ ಹಾಗೂ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ರಾಜ್ಯಾಧ್ಯಕ್ಷ ಗುರುದೇವ ನಾರಾಯಣ್‌ ಕುಮಾರ್‌, ವರುಣ್‌, ನವೀನ್‌ ಗೌಡ, ವಿನೋದ್‌, ಚೇತನ್‌ ಕುಮಾರ್‌, ಯೋಗೇಶ್‌ ಬಂಧಿತರು. ಇವರೆಲ್ಲರೂ ಸದಾಶಿವ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸವಿದ್ದಾರೆ ಎಂದು ಕೇಂದ್ರ ವಿಭಾಗದ ಡಿಸಿಪಿ ಎಂ. ಎನ್‌. ಅನುಚೇತ್‌ ತಿಳಿಸಿದರು. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಭಾಗಿಯಾಗಿರುವುದು ತಿಳಿದು ಬಂದಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಮಾಹಿತಿ ಲಭ್ಯವಾಗಿದ್ದು, ಅವರನ್ನು ಶೀಘ್ರದಲ್ಲೇ ಪತ್ತೆ ಮಾಡಿ ಬಂಧಿಸಲಾಗುವುದು ಎಂದು ಹೇಳಿದರು. ಮಸಿ ಬಳಿದದ್ದು ಇಬ್ಬರು: ವರುಣ್‌ ಹಾಗೂ ವಿನೋದ್‌ ಎಂಬುವವರು ಶಿವಾಜಿ ಮೇಲೆ ಮಸಿ ನೀರು ಸುರಿದಿದ್ದಾರೆ. ಈ ದೃಶ್ಯಾವಳಿಯನ್ನು ನವೀನ್‌ ಗೌಡ ಎಂಬಾತ ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಬಳಿಕ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಎಂದು ಡಿಸಿಪಿ ಎಂ. ಎನ್‌. ಅನುಚೇತ್‌ ವಿವರಿಸಿದರು. ಕಾಂಗ್ರೆಸ್‌ ಷಡ್ಯಂತ್ರ ಎಂದ ಗಣೇಶ್‌ ಕಾರ್ಣಿಕ್‌ ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಶಿವಾಜಿ ಮಹಾರಾಜ್‌ ಪುತ್ಥಳಿಗೆ ಮಸಿ ಬಳಿದ ಘಟನೆ ಹಿಂದಿರುವ ಷಡ್ಯಂತ್ರವನ್ನು ಪತ್ತೆ ಹಚ್ಚಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ. 'ಬಂಧಿತ ಆರೋಪಿ ನವೀನ್‌ ಗೌಡ ಅವರು ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷ ಡಿ. ಕೆ. ಶಿವಕುಮಾರ್‌ ಮತ್ತು ಶಾಸಕ ಜಮೀರ್‌ ಅಹಮದ್‌ ಅವರ ನಿಕಟವರ್ತಿಯಾಗಿದ್ದು, ಕಾಂಗ್ರೆಸ್‌ ಕಾರ್ಯಕರ್ತನಾಗಿದ್ದಾನೆ. ನವೀನ್‌ ಗೌಡನ ಕಾಂಗ್ರೆಸ್‌ ಜೊತೆಗಿನ ನಂಟು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕೋಮು ಗಲಭೆಯ ಟ್ವೀಟ್‌ಗಳನ್ನು ಗಮನಿಸಬೇಕು. ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ಕಾಂಗ್ರೆಸ್‌ ಷಡ್ಯಂತ್ರದ ಭಾಗವಾಗಿ, ಮಸಿ ಘಟನೆಯು ಕಂಡು ಬರುತ್ತಿದೆ. ಇದಕ್ಕೆ ಪೂರಕವೆನ್ನುವಂತೆ ಕಾಂಗ್ರೆಸ್‌, ಎನ್‌‍ಸಿಪಿ ಮತ್ತು ಶಿವಸೇನೆಯ ಆಡಳಿತವಿರುವ ಮಹಾರಾಷ್ಟ್ರದಲ್ಲಿ ದುಷ್ಟ ಶಕ್ತಿಗಳು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಉದ್ವಿಗ್ನಗೊಳಿಸುವ ಷಡ್ಯಂತ್ರದ ಮುಂದುವರಿದ ಭಾಗವಾಗಿದೆ' ಎಂದು ಕಾರ್ಣಿಕ್‌ ದೂರಿದ್ದಾರೆ. ಸಹಸ್ರಾರು ಜನ ಬೆಳಗಾವಿಗೆ ಲಗ್ಗೆ ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಎಂಇಎಸ್‌, ಶಿವಸೇನೆ ಕಾರ್ಯಕರ್ತರ ವಿರುದ್ಧ ನಿರ್ಣಾಯಕ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸಜ್ಜಾಗಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಅವರು ಹೋರಾಟಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಹಸ್ರಾರು ಕರವೇ ಕಾರ್ಯಕರ್ತರು ಕಾರು, ಬಸ್ಸು, ರೈಲುಗಳ ಮೂಲಕ ಬೆಳಗಾವಿಯತ್ತ ಧಾವಿಸುತ್ತಿದ್ದಾರೆ. ಹೋಟೆಲ್‌ ಸಂಘದ ಖಂಡನೆ ಭಾಷೆಯನ್ನು ಮುಂದಿಟ್ಟುಕೊಂಡು ಅನಗತ್ಯವಾಗಿ ಮಹಾರಾಷ್ಟ್ರದ ಗಡಿ ಪ್ರದೇಶದಲ್ಲಿರುವ ಕನ್ನಡಿಗರ ಹೋಟೆಲುಗಳನ್ನು ಗುರಿಯಾಗಿಟ್ಟುಕೊಂಡು ಕೆಲವರು ಪುಂಡಾಟಿಕೆ ಮಾಡಿದ್ದಾರೆ. ನಮ್ಮ ಉದ್ಯಮಕ್ಕೆ ಕಿರುಕುಳ ಕೊಡುವ ದುಷ್ಟ ಶಕ್ತಿಗಳ ವಿರುದ್ಧ ಅಲ್ಲಿನ ಸರಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಬೃಹತ್‌ ಮಹಾನಗರ ಹೋಟೆಲುಗಳ ಸಂಘದ ಅಧ್ಯಕ್ಷ ಪಿ. ಸಿ. ರಾವ್‌ ಒತ್ತಾಯಿಸಿದ್ದಾರೆ.