ಬೆಂಗಳೂರಿನಲ್ಲಿ ಶಿಥಿಲ ಕಟ್ಟಡಗಳ ಮರು ಸಮೀಕ್ಷೆ; 15 ದಿನದಲ್ಲಿ ವರದಿ ನೀಡುವಂತೆ ಬಿಬಿಎಂಪಿ ಆದೇಶ!

ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮರು ಸಮೀಕ್ಷೆ ನಡೆಸಿ 15 ದಿನಗಳೊಳಗೆ ವರದಿ ನೀಡಬೇಕು ಎಂದು ಮುಖ್ಯ ಆಯುಕ್ತ ಗೌರವ್‌ ಗುಪ್ತ ಅವರು ಎಲ್ಲ ವಲಯಗಳ ಜಂಟಿ ಆಯುಕ್ತರು ಹಾಗೂ ಮುಖ್ಯ ಎಂಜಿನಿಯರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶಿಥಿಲ ಕಟ್ಟಡಗಳ ಮರು ಸಮೀಕ್ಷೆ; 15 ದಿನದಲ್ಲಿ ವರದಿ ನೀಡುವಂತೆ ಬಿಬಿಎಂಪಿ ಆದೇಶ!
Linkup
ಬೆಂಗಳೂರು: ಬೆಂಗಳೂರಿನಲ್ಲಿ ಬೆನ್ನು ಬೆನ್ನಿಗೇ ಎರಡು ಹಳೆ ಕಟ್ಟಡಗಳು ಕುಸಿದು ಬಿದ್ದ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮರು ಸಮೀಕ್ಷೆಗೆ ಮುಂದಾಗಿದೆ. ಈ ಬಾರಿ ಎರಡೂ ಕಟ್ಟಡಗಳ ಕುಸಿತದಿಂದ ಯಾವುದೇ ಜೀವ ಹಾನಿ ಆಗಿಲ್ಲವಾದರೂ ಎಲ್ಲ ಸಂದರ್ಭದಲ್ಲೂ ಹೀಗೇ ಆಗುತ್ತದೆ ಎಂದು ಹೇಳಲಾಗದು. ಹೀಗಾಗಿ ಶಿಥಿಲ ಕಟ್ಟಡಗಳ ಮೇಲೆ ನಿಗಾ ಇಡಬೇಕೆಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. 2019ರಲ್ಲಿ ಒಂದು ಹಂತದ ನಡೆಸಿ ಕೆಲವು ಕಟ್ಟಡಗಳನ್ನು ಗುರುತಿಸಲಾಗಿತ್ತು. ಹಾಗಾಗಿ, ಈಗ ಮತ್ತೆ ಸಮೀಕ್ಷೆಗೆ ಸೂಚಿಸಲಾಗಿದೆ. ಬಿಬಿಎಂಪಿಯ ಯೋಜನಾ ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಿಕೊಂಡು, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮರು ಸಮೀಕ್ಷೆ ನಡೆಸಿ 15 ದಿನಗಳೊಳಗೆ ವರದಿ ನೀಡಬೇಕು ಎಂದು ಮುಖ್ಯ ಆಯುಕ್ತ ಗೌರವ್‌ ಗುಪ್ತ ಅವರು ಎಲ್ಲ ವಲಯಗಳ ಜಂಟಿ ಆಯುಕ್ತರು ಹಾಗೂ ಮುಖ್ಯ ಎಂಜಿನಿಯರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಶಿಥಿಲ ಕಟ್ಟಡಗಳ ಮರು ಸಮೀಕ್ಷೆ ಸಂಬಂಧ ಬುಧವಾರ ವರ್ಚುವಲ್‌ ಸಭೆ ನಡೆಸಿದ ಅವರು, ''2019ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ 185 ಕಟ್ಟಡಗಳನ್ನು ಗುರುತಿಸಿ, ಇದರಲ್ಲಿ 10 ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ. ಬಾಕಿ ಉಳಿದಿರುವ 175 ಕಟ್ಟಡ ಮಾಲೀಕರಿಗೆ ಕೂಡಲೇ ನೋಟಿಸ್‌ ಜಾರಿ ಮಾಡಬೇಕು. ಆ ಕಟ್ಟಡಗಳನ್ನು ನೆಲಸಮ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು,'' ಎಂದು ತಾಕೀತು ಮಾಡಿದರು. ''ಆಯಾ ವಲಯಗಳಲ್ಲಿನ ಸಂಬಂಧಪಟ್ಟ ಎಂಜಿನಿಯರ್‌ಗಳು ಶಿಥಿಲ ಕಟ್ಟಡಗಳಿರುವ ಪ್ರದೇಶಕ್ಕೆ ಭೇಟಿ ನೀಡಿ, ಮರು ಪರಿಶೀಲನೆ ಮೂಲಕ ನಿಖರ ಮಾಹಿತಿ ಒದಗಿಸಬೇಕು. ಮರು ಸಮೀಕ್ಷೆಯಲ್ಲಿ ಗುರುತಿಸಿದ ಕಟ್ಟಡಗಳನ್ನು 15 ದಿನಗಳೊಳಗೆ ತೆರವುಗೊಳಿಸಲು ವಲಯವಾರು ಗುತ್ತಿಗೆದಾರರನ್ನು ನೇಮಕ ಮಾಡಬೇಕು,'' ಎಂದು ಸೂಚಿಸಿದರು. ಶಿಥಿಲ ಕಟ್ಟಡಗಳು-2019ರಲ್ಲಿ ವಲಯ -ಕಟ್ಟಡ -ನೆಲಸಮ
  • ದಕ್ಷಿಣ- 33- 08
  • ಪೂರ್ವ- 46- 00
  • ಪಶ್ಚಿಮ- 34- 00
  • ಮಹದೇವಪುರ -03- 00
  • ಯಲಹಂಕ- 60 -00
  • ದಾಸರಹಳ್ಳಿ- 8 -01
  • ಆರ್‌.ಆರ್‌.ನಗರ -01 -01
  • ಬೊಮ್ಮನಹಳ್ಳಿ 00- 00
  • ಒಟ್ಟು= 183- 10