ಬೆಂಜ್‌ ಕಾರಿನ ಅತಿ ವೇಗದಿಂದ ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ; ಓರ್ವ ಸಾವು

ಬೆಂಗಳೂರಿನ ಇಂದಿರಾನಗರ ಬಳಿ ಭೀಕರ ಸರಣಿ ಅಪಘಾತ ನಡೆದಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಇಂದಿರಾನಗರದ 80 ಅಡಿ ರಸ್ತೆಯಲ್ಲಿ ಎರಡು ಕಾರು, ಎರಡು ಆಟೋ, ಮಿನಿ ಲಾರಿ ಹಾಗೂ ಎರಡು ಬೈಕ್‌ಗಳ ನಡುವೆ ಡಿಕ್ಕಿ ಉಂಟಾಗಿದ್ದು, ಬೆಂಜ್‌ ಕಾರು ಅತಿ ವೇಗದಿಂದ ಬಂದಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಬೆಂಜ್‌ ಕಾರಿನ ಅತಿ ವೇಗದಿಂದ ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ; ಓರ್ವ ಸಾವು
Linkup
ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಎರಡು ಕಾರು, ಎರಡು ಆಟೋ, ಮಿನಿ ಲಾರಿ ಹಾಗೂ ಎರಡು ಬೈಕ್‌ಗಳ ನಡುವೆ ಡಿಕ್ಕಿ ಉಂಟಾಗಿದ್ದು, ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಅತಿ ವೇಗದಿಂದ ಬಂದ ಬೆಂಜ್‌ ಕಾರು ಮುಂದೆ ಹೋಗುತ್ತಿದ್ದ ವಾಹನಗಳಿಗೆ ಡಿಕ್ಕಿಯಾಗಿ ಸರಣಿ ಅಪಘಾತವಾಗಿದೆ. ಮೃತನನ್ನು ಅಸ್ಸಾಂ ಮೂಲದ ಹರಿತಾಪ ಎಂದು ಗುರುತಿಸಲಾಗಿದ್ದು, ಕಳೆದ 10 ವರ್ಷದಿಂದ ಸ್ಥಳೀಯ ಪಬ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಇನ್ನು, ಬೆಂಜ್ ಕಾರಿನ ಚಾಲಕ ಸುವೀದ್ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಹಲಸೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಇಂದಿರಾನಗರದ 12 ಮತ್ತು 13ನೆ ಮುಖ್ಯರಸ್ತೆ ಮಧ್ಯೆ ಈ ಸಂಭವಿಸಿದೆ. ಅತಿ ವೇಗವಾಗಿ ಬಂದ ಬೆಂಜ್ ಕಾರು 7ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಸಂಭವಿಸಿದೆ. ಜನನಿಬಿಡ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದರಿಂದ ಸಾರ್ವಜನಿಕರು ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸುವಲ್ಲಿ ನೆರವಾಗಿದ್ದಾರೆ. ಬೆಂಜ್ ಕಾರು ವೇಗವಾಗಿ ಬಂದಿದ್ದೇ ಘಟನೆಗೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ನಂದಿತಾ ಚೌದ್ರಿ ಎಂಬುವವರಿಗೆ ಸೇರಿದ ಕಾರು ಎಂದು ಗೊತ್ತಾಗಿದೆ. ಹಲಸೂರು ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು, ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಂಜ್ ಕಾರು ಚಾಲಕ ವೇಗವಾಗಿ ಚಲಾಯಿಸಿರುವುದು ಕಂಡುಬಂದಿದೆ. ಈ ಬಗ್ಗೆ ಹಲಸೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರತ್ಯೇಕ ಅಪಘಾತದಲ್ಲಿ ಇಬ್ಬರ ಸಾವುಬೆಂಗಳೂರಿನ ಎರಡು ಕಡೆ ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಓಕಳಿಪುರಂನ ಲೂಲೂ ಮಾರ್ಟ್ ಬಳಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್‌ ಸವಾರ ವಿಶ್ವ(25) ಎಂಬುವವರು ಸಾವನ್ನಪ್ಪಿದ್ದು, ಹಿಂಬದಿ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು, ಎಚ್ಎಸ್ಆರ್ ಲೇಔಟ್ 27ನೇ ಮುಖ್ಯರಸ್ತೆಯಲ್ಲಿ ವಾಟರ್‌ ಟ್ಯಾಂಕ್‌ಗೆ ಸಿಲುಕಿ ಬೈಕ್‌ ಸವಾರ ಸಾವನ್ನಪ್ಪಿದ್ದಾನೆ. ಬೈಕ್‌ ಸವಾರ ವಾಟರ್ ಟ್ಯಾಂಕ್ ಪಕ್ಕದಲ್ಲೇ ತೆರಳುತ್ತಿದ್ದಾಗ ಟ್ಯಾಂಕರ್ ಚಾಲಕ ದಿಢೀರ್ ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆ ಟ್ಯಾಂಕರ್ ಟಚ್ ಆಗಿ ಫುಟ್ಪಾತ್ಗೆ ತಾಗಿ ಬಿದ್ದ ಸವಾರನ ತಲೆ ಮೇಲೆ ಟ್ಯಾಂಕರ್ ಚಕ್ರ ಹರಿದು ಸಾವನ್ನಪ್ಪಿದ್ದಾನೆ.