ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಕಾರುಗಳಿಗೆ ಬೆಂಕಿ: ಮೂವರ ಬಂಧನ, ಆರೋಪಿಗಳು ಬಿಚ್ಚಿಟ್ಟ ಸತ್ಯವೇನು?

ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ. ಈ ಆರೋಪಿಗಳು ಇದೀಗ ವಿಚಾರಣೆ ವೇಳೆ ಕೆಲವೊಂದು ಸತ್ಯ ಬಿಚ್ಚಿಟ್ಟಿದ್ದಾರೆ. ತಾವು ಬೆಂಕಿ ಹಚ್ಚಲು ಕಾರಣವೇನು ಎಂಬುವುದನ್ನು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಕಾರುಗಳಿಗೆ ಬೆಂಕಿ: ಮೂವರ ಬಂಧನ, ಆರೋಪಿಗಳು ಬಿಚ್ಚಿಟ್ಟ ಸತ್ಯವೇನು?
Linkup
ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆಯ ಒಳಗೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಅರೆಸ್ಟ್‌ ಮಾಡಿದ್ದಾರೆ. ನೇಪಾಳ ಮೂಲದ ಸಾಗರ್ ಮತ್ತು ಸ್ಥಳೀಯರಾದ ಶ್ರೀಧರ್ ಗೌಡ ಮತ್ತು ನವೀನ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಹರಿದಾಡುತ್ತಿದ್ದ ಉಹಾಪೋಹಗಳಿಗೆ ಬ್ರೇಕ್‌ ಬಿದ್ದಂತೆ ಆಗಿದೆ. ಆದರೆ ಇದೀಗ ಬೆಂಕಿ ಹಚ್ಚಿದ ಪ್ರಕರಣ ಮೆಗಾ ಟ್ವಿಸ್ಟ್‌ ಸಿಕ್ಕಿದೆ. ಬಂಧಿತರು ಯಾಕೆ ತಾವು ಬೆಂಕಿ ಹಚ್ಚಿದ್ದು ಎನ್ನುವ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಲಾಕ್ ಡೌನ್ ನಂತರ ಈ ಮೂವರು ಕೆಲಸವಿಲ್ಲದೆ ತೀವ್ರ ಪರದಾಡಿದ್ದರು. ಆದರೆ ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ. ಇದೇ ಕಾರಣಕ್ಕೆ ಶಾಸಕ ಸತೀಶ್ ರೆಡ್ಡಿ ಬಳಿ ಸಹಾಯ ಕೇಳೋಕೆ ಅಂತಾ ಬಂದಿದ್ರು. ಮೂರು ಬಾರಿ ಶಾಸಕರನ್ನು ಭೇಟಿ ಮಾಡೋಕೆ ಪ್ರಯತ್ನಿಸಿದ್ದರು ಕೂಡ ಎಂಎಲ್‍ಎ ಮನೆ ಸೆಕ್ಯೂರಿಟಿ ಗಾರ್ಡ್ ಒಳಗೆ ಬಿಟ್ಟಿರಲಿಲ್ಲ. ಇಡೀ ದಿನ ಕಾದರು ಕೂಡ ಒಮ್ಮೆ ಭೇಟಿಗೂ ಅವಕಾಶ ಕೊಟ್ಟಿರಲಿಲ್ವಂತೆ. ಹೊಟ್ಟೆಗೆ ಊಟವಿಲ್ಲದೆ ಇಡೀ ದಿನ ಕಾದರೂ ಒಮ್ಮೆಯೂ ಭೇಟಿಗೆ ಅವಕಾಶ ಕೊಟ್ಟಿರಲಿಲ್ಲ. ಇದರಿಂದ ಬೇಸರಗೊಂಡ ಮೂವರು ಆರೋಪಿಗಳು, ಕಂಠಪೂರ್ತಿ ಕುಡಿದು ಶ್ರೀಮಂತರು ಶ್ರೀಮಂತರಾಗೇ ಇರ್ತಾರೆ ನಮ್ಮಂಥ ಬಡವರು ಬಡರಾಗೇ ಸಾಯಬೇಕು ಅಂತಾ ಹತಾಶೆಗೊಂಡಿದ್ರು. ಇದೇ ಮತ್ತಿನಲ್ಲಿ ಶಾಸಕರ ಮನೆ ಬಳಿ ಬಂದು ಬೈಕಿನಲ್ಲಿ ಪೆಟ್ರೋಲ್ ಕಳವು ಮಾಡಿ ಮನೆ ಬಳಿಯಿದ್ದ ಎರಡು ಕಾರುಗಳಿಗೆ ಬೆಂಕಿ ಹಾಕಿ ಎಸ್ಕೇಪ್ ಆಗಿದ್ದಾಗಿ ಪೊಲೀಸರ ಬಳಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಸದ್ಯ ಇವರ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು, ಇದಲ್ಲದೆ ಬೇರೆ ಏನಾದರೂ ಕಾರಣವಿದ್ಯಾ? ಎನ್ನುವ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ. ಸತೀಶ್‌ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಫಾರ್ಚೂನರ್ ಹಾಗೂ ಥಾರ್‌ ಎಂಬ ಐಶಾರಾಮಿ ಕಾರುಗಳು ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿದೆ.