‘ಬಾಡಿಗಾರ್ಡ್’ ಚಿತ್ರದಲ್ಲಿ ಪುನೀತ್ ಗಾನ: ಪವರ್ ಸ್ಟಾರ್ ಕಂಠಸಿರಿಯಲ್ಲಿ ಮೂಡಿಬಂದಿದೆ ಪವರ್‌ಫುಲ್ ಹಾಡು!

ವಿಧಿವಶರಾಗುವ ಮುನ್ನ ಅಪ್ಪು ಹಾಡಿದ್ದ ‘ಬಾಡಿಗಾರ್ಡ್’ ಚಿತ್ರದ ‘ಆರೇಸ ಡನ್ಕನಕ’ ಹಾಡು ಇದೀಗ ಬಿಡುಗಡೆಯಾಗಿದೆ. ಎಸ್‌ಕೆಎಸ್‌ ಬರೆದಿರುವ ‘ಬಾಡಿಗಾರ್ಡ್’ ಚಿತ್ರದ ಹಾಡನ್ನು ರಾಘವೇಂದ್ರ ರಾಜ್‌ಕುಮಾರ್ ಬಿಡುಗಡೆ ಮಾಡಿದ್ದಾರೆ.

‘ಬಾಡಿಗಾರ್ಡ್’ ಚಿತ್ರದಲ್ಲಿ ಪುನೀತ್ ಗಾನ: ಪವರ್ ಸ್ಟಾರ್ ಕಂಠಸಿರಿಯಲ್ಲಿ ಮೂಡಿಬಂದಿದೆ ಪವರ್‌ಫುಲ್ ಹಾಡು!
Linkup
ಪವರ್ ಸ್ಟಾರ್ ಪುನೀತ್ ರಾಜಕುಮಾರ್ () ನಟನೆಯಲ್ಲಿ ಮಾತ್ರವಲ್ಲ, ಗಾಯನದಲ್ಲೂ ಜನಪ್ರಿಯತೆ ಗಳಿಸಿದ್ದರು. ಕಂಠಸಿರಿಯಲ್ಲಿ ಮೂಡಿಬಂದ ಅನೇಕ ಹಾಡುಗಳು ಸೂಪರ್ ಹಿಟ್ ಆಗಿದ್ದವು. ವಿಧಿವಶರಾಗುವ ಮುನ್ನ ಅಪ್ಪು ಹಾಡಿದ್ದ ‘’ () ಚಿತ್ರದ ‘ಆರೇಸ ಡನ್ಕನಕ’ ಹಾಡು ಇದೀಗ ಬಿಡುಗಡೆಯಾಗಿದೆ. ಎಸ್‌ಕೆಎಸ್‌ ಬರೆದಿರುವ ‘ಬಾಡಿಗಾರ್ಡ್’ ಚಿತ್ರದ ಹಾಡನ್ನು () ಬಿಡುಗಡೆ ಮಾಡಿದ್ದಾರೆ. ರಾಘವೇಂದ್ರ ರಾಜ್‌ಕುಮಾರ್ ಹೇಳಿದ್ದೇನು? ‘’ಇಷ್ಟು ದಿನ ನನ್ನ ತಮ್ಮನಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೆ. ಇಂದು ಗೀತಾಂಜಲಿ ಸಲ್ಲಿಸಿದ್ದೇನೆ. ಅವನು ಇಲ್ಲ ಎಂದು ಕೊರಗುವುದು ಬೇಡ. ಅವನು ಹಾಡಿರುವ ಹಾಡಿನಲ್ಲಿ, ಮಾಡಿರುವ ಕೆಲಸದಲ್ಲಿ ಅವನಿದ್ದಾನೆ. ನಿರ್ದೇಶಕ ಪ್ರಭು ಶ್ರೀನಿವಾಸ್ ನನಗೆ ಮೊದಲಿನಿಂದಲೂ ಪರಿಚಯ. ಅವರ ಈ ಪ್ರಯತ್ನಕ್ಕೆ ಶುಭವಾಗಲಿ’’ ಎಂದು ರಾಘವೇಂದ್ರ ರಾಜ್‌ಕುಮಾರ್ ಹಾರೈಸಿದರು. ನಿರ್ದೇಶಕ ಪ್ರಭು ಶ್ರೀನಿವಾಸ್ ಏನಂತಾರೆ? ‘’ಪುನೀತ್ ರಾಜ್‌ಕುಮಾರ್ ಸರ್ ಅವರನ್ನು ಭೇಟಿಯಾಗಿ ಈ ಹಾಡನ್ನು ಹಾಡಲು ಕೇಳಿದಾಗ, ಇದು ತುಂಬಾ ಹೈಪಿಚ್‌ನಲ್ಲಿ ಹಾಡಬೇಕು. ನೋಡಿ ನನ್ನ ಧ್ವನಿ ಸರಿ ಹೊಂದುತ್ತದೆಯಾ? ಎಂದು ಕೇಳಿದರು. ಸರಿ ಹೊಂದದಿದ್ದಲ್ಲಿ ಬೇರೆ ಅವರ ಬಳಿ ಹಾಡಿಸಿ ಎಂದರು. ಇಲ್ಲ ಈ ಹಾಡನ್ನು ನೀವೇ ಹಾಡಬೇಕು ಎಂದು ಕೇಳಿದಾಗ, ಅವರ ಸ್ಟುಡಿಯೋದಲ್ಲೇ ಈ ಹಾಡು ಹಾಡಿದರು. ನನಗೆ ತಿಳಿದ ಹಾಗೆ ಇದೇ ಅವರು ಹಾಡಿರುವ ಕೊನೆಯ ಗೀತೆ ಅನಿಸುತ್ತದೆ.‌ ಈ ಹಾಡಿನಲ್ಲಿ‌ ಬರುವ ಕೆಲವು ಸಾಲುಗಳು ಪುನೀತ್ ಅವರಿಗೆ ಹತ್ತಿರವಾಗಿದೆ ಎಂದು ಅವರ ಮರಣದ ನಂತರ ತಿಳಿಯುತ್ತಿದೆ’’ ಎಂದು ನಿರ್ದೇಶಕ, ನಿರ್ಮಾಪಕ ಪ್ರಭು ಶ್ರೀನಿವಾಸ್ (Prabhu Srinivas) ಹೇಳಿದರು. ನಾಯಕ ಮನೋಜ್ ಹೇಳಿದಿಷ್ಟು - ‘’ನನಗೆ ಪುನೀತ್ ರಾಜ್‌ಕುಮಾರ್ ಅವರು ಹಾಡುವ ಹಾಡಿಗೆ ಡ್ಯಾನ್ಸ್ ಮಾಡಬೇಕೆಂದು ಆಸೆಯಿತ್ತು. ಈ ಹಾಡಿನ ಬಗ್ಗೆ ಮಾತನಾಡಲು ನಿರ್ದೇಶಕರೊಂದಿಗೆ ಅಪ್ಪು ಸರ್ ಮನೆಗೆ ಹೋದಾಗ, ಅವರ ಸ್ವಾಗತ ನೋಡಿ ನನಗೆ ಆಶ್ಚರ್ಯವಾಯಿತು‘’ ಎಂದರು ನಾಯಕ ಮನೋಜ್ (Manoj). ನಾಯಕಿ ದೀಪಿಕಾ ಮಾತು ‘’ನಾನು ಮೊದಲ ಬಾರಿಗೆ ನಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದೇನೆ. ಉತ್ತಮ ಪಾತ್ರ ನೀಡಿದ ನಿರ್ದೇಶಕರಿಗೆ ವಂದನೆಗಳು’’ ಎಂದರು ನಾಯಕಿ‌ ದೀಪಿಕಾ (Deepika). ಅಂದ್ಹಾಗೆ, ಪ್ರಭು ಶ್ರೀನಿವಾಸ್ ನಿರ್ದೇಶಿಸಿರುವ ಈ ಚಿತ್ರದ ನಾಯಕನಾಗಿ ಮನೋಜ್ ನಟಿಸಿದ್ದಾರೆ. ದೀಪಿಕಾ ನಾಯಕಿ.‌ ‘ಮಠ’ ಖ್ಯಾತಿಯ ಗುರುಪ್ರಸಾದ್ (Guruprasad) ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪದ್ಮಜಾ ರಾವ್, ನಿರಂಜನ್, ಅಶ್ವಿನ್ ಹಾಸನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಕರಣ್.ಬಿ.ಕೃಪ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಪುನೀತ್ ರಾಜ್‌ಕುಮಾರ್ ಹಾಡಿರುವ ಹಾಡುಗಳು ತಮ್ಮ ಸಿನಿಮಾಗಳನ್ನು ಹೊರತು ಪಡಿಸಿ ‘ಮೈಲಾರಿ’, ‘ಶೈಲೂ’, ‘ಸಿದ್ಲಿಂಗು’, ‘ಟೋನಿ’, ‘ಅಧ್ಯಕ್ಷ’, ‘ಕೃಷ್ಣ ಲೀಲಾ’, ‘ಜಾನಿ ಜಾನಿ ಯೆಸ್ ಪಪ್ಪಾ’ ಮುಂತಾದ ಸಿನಿಮಾಗಳ ಹಾಡುಗಳಿಗೆ ಪುನೀತ್ ರಾಜ್‌ಕುಮಾರ್ ಧ್ವನಿ ನೀಡಿದ್ದರು.