ಬಿಪಿನ್ ರಾವತ್ ಸಾವು ಅನುಮಾನಗಳನ್ನು ಮೂಡಿಸಿದೆ: ಶಿವಸೇನಾ ಮುಖಂಡ ಸಂಜಯ್ ರಾವತ್

ಹೆಲಿಕಾಪ್ಟರ್ ಅಪಘಾತದಲ್ಲಿ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಸಾವು ಜನರ ಮನಸ್ಸಿನಲ್ಲಿ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಶಿವಸೇನಾ ರಾಜ್ಯಸಭೆ ಸಂಸದ ಸಂಜಯ್ ರಾವತ್ ಹೇಳಿಕೆ ನೀಡಿದ್ದಾರೆ.

ಬಿಪಿನ್ ರಾವತ್ ಸಾವು ಅನುಮಾನಗಳನ್ನು ಮೂಡಿಸಿದೆ: ಶಿವಸೇನಾ ಮುಖಂಡ ಸಂಜಯ್ ರಾವತ್
Linkup
ಹೊಸದಿಲ್ಲಿ: ಹೆಲಿಕಾಪ್ಟರ್ ಅಪಘಾತದಲ್ಲಿ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅವರ ಸಾವು ಜನರ ಮನಸ್ಸಿನಲ್ಲಿ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಶಿವಸೇನಾ ಸಂಸದ ಗುರುವಾರ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚೀನಾ ಮತ್ತು ಪಾಕಿಸ್ತಾನ ವಿರುದ್ಧ ದೇಶದ ಸೇನಾ ಪ್ರತಿರೋಧವನ್ನು ರೂಪಿಸುವಲ್ಲಿ ಜನರಲ್ ರಾವತ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಅಂತಹ ಅಪಘಾತ ಘಟನೆಗಳು ನಡೆದಾಗ, ಅದು ಜನರ ಮನಸ್ಸಿನಲ್ಲಿ ಅನುಮಾನಗಳನ್ನು ಮೂಡಿಸುತ್ತವೆ ಎಂದು ರಾಜ್ಯಸಭೆ ಸದಸ್ಯರಾಗಿರುವ ಸಂಜಯ್ ರಾವತ್ ಹೇಳಿದ್ದಾರೆ. ಜನರಲ್ ರಾವತ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅತ್ಯಾಧುನಿಕ ಯಂತ್ರವಾಗಿದ್ದು, ಅದಕ್ಕೆ ಎರಡು ಎಂಜಿನ್‌ಗಳು ಇದ್ದವು ಎಂದು ಅವರು ಉಲ್ಲೇಖಿಸಿದ್ದಾರೆ. 'ಸಶಸ್ತ್ರ ಪಡೆಗಳನ್ನು ಆಧುನೀಕರಣಗೊಳಿಸಿರುವುದಾಗಿ ನಾವು ಹೇಳಿಕೊಳ್ಳುತ್ತೇವೆ. ಹಾಗಿದ್ದರೆ ಈ ಘಟನೆ ನಡೆಯಲು ಹೇಗೆ ಸಾಧ್ಯವಾಯಿತು?' ಎಂದು ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಬಿಪಿನ್ ರಾವತ್ ಅವರು ಪುಲ್ವಾಮಾ ಭಯೋತ್ಪಾದನಾ ದಾಳಿ ಬಳಿಕ ಭಾರತ ನಡೆಸಿದ ವೈಮಾನಿಕ ದಾಳಿಗಳಲ್ಲಿ ಕೂಡ ಮುಖ್ಯ ಪಾತ್ರ ವಹಿಸಿದ್ದರು. ಈ ಅಪಘಾತದಿಂದ ಇಡೀ ದೇಶ ಮತ್ತು ನಾಯಕತ್ವ ಗೊಂದಲಕ್ಕೆ ಸಿಲುಕಿದೆ. ರಕ್ಷಣಾ ಸಚಿವರು ಅಥವಾ ಪ್ರಧಾನಿ ಈ ಎಲ್ಲ ಅನುಮಾನಗಳನ್ನು ಪರಿಹಾರ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ತಮಿಳುನಾಡಿನ ಕೂನೂರು ಸಮೀಪ ಬುಧವಾರ ಮಧ್ಯಾಹ್ನ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿತ್ತು. ಅದರಲ್ಲಿದ್ದ 14 ಜನರ ಪೈಕಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ತೀವ್ರ ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ಬುಧವಾರ ಕರೆತರಲಾಗಿದೆ. ಈ ಅಪಘಾತ ಘಟನೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಇದು ಸಹಜ ಅಪಘಾತವಲ್ಲ ಎಂದು ಅನೇಕರು ಅನುಮಾನಿಸಿದ್ದಾರೆ. ಇಂದು ಅಂತ್ಯಸಂಸ್ಕಾರರಾವತ್ ಅವರ ಅಂತ್ಯಸಂಸ್ಕಾರ ಶುಕ್ರವಾರ ದಿಲ್ಲಿ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್ ಚಿತಾಗಾರದಲ್ಲಿ ನಡೆಯಲಿದೆ. ಕಾಮರಾಜ ಮಾರ್ಗದಲ್ಲಿ ಇರುವ ರಾವತ್ ಅವರ ನಿವಾಸದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30ರವರೆಗೆ ಅಂತಿಮ ನಮನ ಸಲ್ಲಿಸಲು ನಾಗರಿಕರಿಗೆ ಅವಕಾಶ ಕಲ್ಪಿಸಲಾಗಿದೆ. 12.30ರಿಂದ 1.30ರವರೆಗೆ ಸೇನಾ ಪಡೆಗಳಲ್ಲಿ ಇರುವವರಿಂದ ಗೌರವ ವಂದನೆಗೆ ಅವಕಾಶ ನೀಡಲಾಗಿದೆ. ಬಿಪಿನ್ ರಾವತ್ ಹಾಗೂ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರಗಳನ್ನು ಮಧ್ಯಾಹ್ನ 2 ಗಂಟೆಗೆ ವಿವಿಧ ಮಾರ್ಗಗಳಲ್ಲಿ ಮೆರವಣಿಗೆ ಮೂಲಕ ಚಿತಾಗಾರಕ್ಕೆ ಸಾಗಿಸಲಾಗುತ್ತದೆ. ಈ ಅಪಘಾತದಲ್ಲಿ ಹುತಾತ್ಮರಾದ ಬ್ರಿಗೇಡಿಯರ್ ಲಖ್ವಿಂದರ್ ಸಿಂಗ್ ಲಿಡ್ಡೆರ್ ಹಾಗೂ ಮತ್ತೊಬ್ಬ ಯೋಧರ ಅಂತ್ಯಸಂಸ್ಕಾರ ದಿಲ್ಲಿ ಕಂಟೋನ್ಮೆಂಟ್‌ನಲ್ಲಿ ಬೆಳಿಗ್ಗೆ ನೆರವೇರಿದೆ.