ಬೆಂಬಿಡದ ಕೊರೊನಾ ಭೂತ: ವಾರಾಂತ್ಯದ ಕರ್ಫ್ಯೂ ಮೊರೆ ಹೋದ ದೆಹಲಿ ಸರ್ಕಾರ!

ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಪ್ರಮಾಣ ಹೆಚ್ಚಾಗುತ್ತಿದ್ದು, ಕೋವಿಡ್ ಅಲೆ ಹತ್ತಿಕ್ಕಲು ಆಪ್‌ ಸರ್ಕಾರ ವಾರಾಂತ್ಯದ ಕರ್ಫ್ಯೂ ಘೋಷಿಸಿದೆ.

ಬೆಂಬಿಡದ ಕೊರೊನಾ ಭೂತ: ವಾರಾಂತ್ಯದ ಕರ್ಫ್ಯೂ ಮೊರೆ ಹೋದ ದೆಹಲಿ ಸರ್ಕಾರ!
Linkup
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಮಾಣ ಹೆಚ್ಚಾಗುತ್ತಿದ್ದು, ಕೋವಿಡ್ ಅಲೆ ಹತ್ತಿಕ್ಕಲು ಆಪ್‌ ಸರ್ಕಾರ ಘೋಷಿಸಿದೆ. ಈ ಕುರಿತು ಖುದ್ದು ಮಾಹಿತಿ ನೀಡಿರುವ ದೆಹಲಿ ಮುಖ್ಯಮಂತ್ರಿ , ಕೋವಿಡ್ ಅಲೆ ತಡೆಯುವ ಉದ್ದೇಶದಿಂದ ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ ಹೇರಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಅಗತ್ಯ ಸೇವೆಗಳನ್ನು ಹೊರರತುಪಡಿಸಿ ಉಳಿದೆಲ್ಲಾ ಸೇವೆಗಳಿಗೆ ವಾರಾಂತ್ಯದ ಕರ್ಫ್ಯೂ ಮೂಲಕ ನಿರ್ಬಂಧ ಹೇರಲಾಗಿದೆ. ಆದರೆ ಮದುವೆ ಮತ್ತಿತರ ಸಮಾರಂಭಗಳಿಗೆ ಹಾಜರಾಗಲು ವಿಶೇಷ ಪಾಸ್ ವ್ಯವಸ್ಥೆ ಮಾಡಲಾಗಿದೆ ಎಂದು ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ. ವಾರಾಂತ್ಯದ ಕರ್ಫ್ಯೂವಿನಲ್ಲಿ ಮಾಲ್‌ಗಳು, ಜಿಮ್‌ ಕೇಂದ್ರಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ತಿಳಿಸಿರುವ ಕೇಜ್ರಿವಾಲ್, ಹೋಟೆಲ್‌ನವರು ಹೋಮ್ ಡಿಲೆವರಿ ಆರ್ಡರ್‌ಗಳನ್ನು ಮಾತ್ರ ಸ್ವೀಕರಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ವಾರದ ಸಂತೆಗಳನ್ನು ಬಂದ್ ಮಾಡದಿರುವ ನಿರ್ಧಾರ ಕೈಗೊಂಡಿರುವ ಕೇಜ್ರಿವಾಲ್ ಸರ್ಕಾರ, ಸಂತೆಗಳಲ್ಲಿ ಕೊರೊನಾ ಮಾರ್ಗಸೂಚಿ ಪಾಲನೆ ಕಡ್ಡಾಯಗೊಳಿಸಿದೆ. ದೆಹಲಿ ಲೆ.ಗವರ್ನರ್ ಅನಿಲ್ ಬೈಜಲ್ ಅವರೊಂದಿಗಿನ ವಿಡಿಯೋ ಕಾನ್ಫರೆನ್ಸ್ ಸಭೆ ಬಳಿಕ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಗರದಲ್ಲಿ ವಾರಾಂತ್ಯದ ಕರ್ಫ್ಯೂ ಹೇರುವ ನಿರ್ಧಾರವನ್ನು ಪ್ರಕಟಿಸಿದರು. ದೆಹಲಿಯಲ್ಲಿ ನಿನ್ನೆ(ಏ.14-ಬುಧವಾರ) ಒಟ್ಟು 17,282 ಕೊರೊನಾ ಸೋಂಕು ಪ್ರಕರಣ ದಾಖಲಾಗಿದ್ದು, ಮಾರಕ ವೈರಾಣುವಿಗೆ ಒಂದೇ ದಿನ 100 ಜನ ಸಾವಿಗೀಡಾಗಿದ್ದಾರೆ.