ಭ್ರಷ್ಟಾಚಾರ ಆರೋಪ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ಗೆ ಸಿಬಿಐ ಸಮನ್ಸ್!

ಭ್ರಷ್ಟಾಚಾರ ಆರೋಪದ ಮೇಲೆ ಮಹಾರಾಷ್ಟ್ರ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅನಿಲ್ ದೇಶ್‌ಮುಖ್ ಅವರಿಗೆ, ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ಇದೇ ಏ.14ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ.

ಭ್ರಷ್ಟಾಚಾರ ಆರೋಪ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ಗೆ ಸಿಬಿಐ ಸಮನ್ಸ್!
Linkup
ಮುಂಬಯಿ: ಭ್ರಷ್ಟಾಚಾರ ಆರೋಪದ ಮೇಲೆ ಮಹಾರಾಷ್ಟ್ರ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರಿಗೆ, ವಿಚಾರಣೆಗೆ ಹಾಜರಾಗುವಂತೆ ಜಾರಿ ಮಾಡಿದೆ. ಇದೇ ಏ.14ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅನಿಲ್ ದೇಶ್‌ಮುಖ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಭ್ರಷ್ಟಾಚಾರ ಆರೋಪದ ಸತ್ಯಾಸತ್ಯತೆ ಕುರಿತು ಶೀಘ್ರದಲ್ಲೇ ಸತ್ಯಾಂಶ ಹೊರಬರುವ ನಿರೀಕ್ಷೆ ಇದೆ. ಅನಿಲ್‌ ದೇಶ್‌ಮುಖ್ ವಿರುದ್ಧ ಸುಲಿಗೆ ಆರೋಪ ಮಾಡಿದ್ದ ಮಾಜಿ ಮುಂಬಯಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್‌, ದೇಶ್‌ಮುಖ್ ತಮಗೆ ಬೇಕಾದ ಪೊಲೀಸ್ ಅಧಿಕಾರಿಗಳಿಂದ ಮುಂಬಯಿನ ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ ಒಂದು ತಿಂಗಳಿಗೆ 100 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಪರಂಬೀರ್ ಸಿಂಗ್ ಮಾಡಿದ್ದ ಅರೋಪಗಳು ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ತೀವ್ರ ರಾಜಕೀಯ ಒತ್ತಡದ ಪರಿಣಾಮವಾಗಿ ಅನಿಲ್ ದೇಶ್‌ಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅನಿಲ್ ದೇಶ್‌ಮುಖ್ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ಸಿಬಿಐ ತನಿಖೆ ಆರಂಭವಾಗಿದ್ದು, ಅದರ ಭಾಗವಾಗಿ ಇದೇ ಏ.14ಕ್ಕೆ ವಿಚಾರಣೆಗೆ ಬರುವಂತೆ ಸಿಬಿಐ ಸಮನ್ಸ್ ಜಾರಿ ಮಾಡಿದೆ.