ಮೇಕೆದಾಟು ವಿವಾದ: ತಮಿಳುನಾಡು ಸರ್ಕಾರಕ್ಕೆ ಬೆಂಬಲ ಘೋಷಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ..!

'ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವೇ ಇದ್ದರೂ ಕೂಡಾ ತಮಿಳುನಾಡು ಬಿಜೆಪಿ ಘಟಕವು ಎಂದೆಂದಿಗೂ ತಮಿಳುನಾಡಿನ ಜನತೆ ಪರವಾಗಿಯೇ ಹೋರಾಡಲಿದೆ.ಮೇಕೆದಾಟು ಯೋಜನೆಯಿಂದಾಗಿ ತಮಿಳುನಾಡಿನ ರೈತರಿಗೆ ನೀರಿನ ಕೊರತೆ ಉಂಟಾಗಬಾರದು' - ಅಣ್ಣಾಮಲೈ

ಮೇಕೆದಾಟು ವಿವಾದ: ತಮಿಳುನಾಡು ಸರ್ಕಾರಕ್ಕೆ ಬೆಂಬಲ ಘೋಷಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ..!
Linkup
ತಿರುಚ್ಚಿ (): ವಿಚಾರದಲ್ಲಿ ತಮಿಳುನಾಡು ಘಟಕವು ತಮಿಳುನಾಡು ಸರ್ಕಾರದ ಪರ ಇರೋದಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸ್ಪಷ್ಟಪಡಿಸಿದ್ದಾರೆ. ತಮಿಳುನಾಡಿನ ರೈತರು ಹಾಗೂ ಜನತೆಯ ಪರವಾಗಿ ತಮಿಳುನಾಡು ಬಿಜೆಪಿ ನಿಲ್ಲುತ್ತದೆ. ಇದರಲ್ಲಿ ಯಾವುದೇ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶುಕ್ರವಾರ ಪರ ಗ್ರಹಣ ಮಾಡಲಿರುವ ಅಣ್ಣಾಮಲೈ, ತಮ್ಮ ಪಕ್ಷದ ತಮಿಳುನಾಡು ಘಟಕವು ಮೇಕೆದಾಟು ಯೋಜನೆ ವಿಚಾರದಲ್ಲಿ ಸ್ಪಷ್ಟ ನಿಲುವು ಹೊಂದಿರುವುದಾಗಿ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವೇ ಇದ್ದರೂ ಕೂಡಾ ತಮಿಳುನಾಡು ಬಿಜೆಪಿ ಘಟಕವು ಎಂದೆಂದಿಗೂ ತಮಿಳುನಾಡಿನ ಜನತೆ ಪರವಾಗಿಯೇ ಹೋರಾಡಲಿದೆ ಎಂದು ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ಮೇಕೆದಾಟು ಯೋಜನೆಯಿಂದಾಗಿ ತಮಿಳುನಾಡಿನ ರೈತರಿಗೆ ನೀರಿನ ಕೊರತೆ ಉಂಟಾಗಬಾರದು. ಸುಪ್ರೀಂ ಕೋರ್ಟ್ ಹಂಚಿಕೆ ಮಾಡಿರುವ ಪ್ರಮಾಣದ ನೀರು ತಮಿಳುನಾಡಿಗೆ ಸಿಗಬೇಕು ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಮೇಕೆದಾಟು ಯೋಜನೆ ವಿವಾದ ಬಗೆಹರಿಸಲು ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆಗೆ ಮಾತನಾಡ್ತೀರಾ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅಣ್ಣಾಮಲೈ, ಈ ವಿವಾದ ಬಗೆಹರಿಸಲು ಎಲ್ಲ ಪಕ್ಷಗಳ ಸಾಂಘಿಕ ಪ್ರಯತ್ನ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಕರೆದಿದ್ದ ಸರ್ವ ಪಕ್ಷ ಸಭೆಯಲ್ಲಿ ತಮಿಳುನಾಡು ಬಿಜೆಪಿ ಪರವಾಗಿಯೂ ಇಬ್ಬರು ನಾಯಕರು ಭಾಗಿಯಾಗಿದ್ದರು ಎಂದು ಮಾಹಿತಿ ನೀಡಿದ ಅಣ್ಣಾಮಲೈ, ಮೇಕೆದಾಟು ವಿಚಾರದಲ್ಲಿ ತಮಿಳುನಾಡು ರಾಜ್ಯ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ಬೆಂಬಲ ನೀಡೋದಾಗಿ ಘೋಷಿಸಿದ್ದೇವೆ ಎಂದರು. ಇದೇ ವಿಚಾರವಾಗಿ ತಮಿಳುನಾಡಿನ ಸರ್ವ ಪಕ್ಷ ನಾಯಕರು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದರೂ ಕೂಡಾ ತಮಿಳುನಾಡಿನ ಬಿಜೆಪಿ ಘಟಕ ಈ ತಂಡದಲ್ಲಿ ಭಾಗಿಯಾಗಲಿದೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ. ಮೇಕೆದಾಟು ಯೋಜನೆಯಡಿ ಬೆಂಗಳೂರಿಗೆ 4.75 ಟಿಎಂಸಿ ಕುಡಿಯುವ ನೀರು ಒದಗಿಸಲು ಕರ್ನಾಟಕ ಸರ್ಕಾರ ಕ್ರಮ ಕೈಗೊಂಡಿದೆ. ಈ ಅಣೆಕಟ್ಟಿನಲ್ಲಿ 67.16 ಟಿಎಂಸಿ ನೀರು ಸಂಗ್ರಹವಾಗಲಿದೆ. ಕರ್ನಾಟಕದ ಬಳಕೆಯ ಬಳಿಕ ಹಿಡಿದಿಟ್ಟುಕೊಂಡ ನೀರು ತಮಿಳುನಾಡಿಗೇ ಹರಿದುಹೋಗಲಿದೆ ಎಂದು ಕರ್ನಾಟಕ ಸರಕಾರ ಸ್ಪಷ್ಟಪಡಿಸಿದೆ. ಆದ್ರೆ, ಇದಕ್ಕೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದೆ. ಕಾವೇರಿ ನದಿ ನೀರು ಕೆಆರ್‌ಎಸ್‌ ದಾಟಿದ ನಂತರ ಅನಿಯಂತ್ರಿತವಾಗಿ ತಮಿಳುನಾಡಿನತ್ತ ಸಾಗುತ್ತದೆ. ಒಂದು ವೇಳೆ ಮೇಕೆದಾಟು ಯೋಜನೆ ಜಾರಿಯಾದರೆ, ಅನಿಯಂತ್ರಿತ ನೀರಿನ ಹರಿವಿಗೆ ತಡೆ ಒಡ್ಡಿದಂತಾಗುತ್ತದೆ. ತಮಿಳುನಾಡಿನ ರೈತರಿಗೆ ನೀರಿನ ಅಭಾವ ಎದುರಾಗುತ್ತೆ ಅನ್ನೋದು ತಮಿಳುನಾಡಿನ ವಾದ..