ಮುಂಬಯಿನಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆ ವಿರುದ್ಧ ಮತ್ತೆ 17 ಎಫ್‌ಐಆರ್‌

ಜನಾಶೀರ್ವಾದ ಯಾತ್ರೆ ಹೆಸರಿನಲ್ಲಿ ಭಾರಿ ಸಂಖ್ಯೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಜನ ಜಮಾವಣೆಯಾಗಿ ಕೋವಿಡ್‌-19 ಮುನ್ನೆಚ್ಚರಿಕೆ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಮೇರೆಗೆ ಮುಂಬಯಿ ಪೊಲೀಸರು ಬಿಜೆಪಿ ವಿರುದ್ಧ ಶನಿವಾರ 17 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಮುಂಬಯಿನಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆ ವಿರುದ್ಧ ಮತ್ತೆ 17 ಎಫ್‌ಐಆರ್‌
Linkup
ಮುಂಬಯಿ: ಹೆಸರಿನಲ್ಲಿ ಬೆಂಬಲಿಗರು, ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಜಮಾವಣೆಯಾಗಿ ಕೋವಿಡ್‌-19 ಮುನ್ನೆಚ್ಚರಿಕೆ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಮೇರೆಗೆ ಪೊಲೀಸರು ಶನಿವಾರ 17 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಇದಕ್ಕೂ ಮುನ್ನ ಶನಿವಾರದಂದು ಮುಂಬಯಿನ ಮುಲುಂದ್‌, ವಿಕ್ರೊಲಿ, ಸಂತಾಕ್ರೂಜ್‌, ಗೊರೆಗಾಂವ್‌, ಬೊರಿವಲಿ ಸೇರಿದಂತೆ ಹಲವೆಡೆ ಬಿಜೆಪಿ ಕಾರ್ಯಕರ್ತರ ಜಮಾವಣೆ, ಕೊರೊನಾ ನಿಯಮ ಉಲ್ಲಂಘನೆ ಸಂಬಂಧ 19 ಎಫ್‌ಐಆರ್‌ಗಳು ದಾಖಲಾಗಿದ್ದವು. ಒಟ್ಟಾರೆ ಜನಾಶೀರ್ವಾದ ಯಾತ್ರೆ ಸಂಬಂಧ 36 ಎಫ್‌ಐಆರ್‌ಗಳು ದಾಖಲಾಗಿವೆ. ಕೋವಿಡ್‌ ಮೂರನೇ ಅಲೆಯ ಆತಂಕದಲ್ಲಿ ಜನರು ಇದ್ದಾರೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತಗಳು ಹರಸಾಹಸಪಡುತ್ತಿವೆ. ಜನರು ಗುಂಪು ಸೇರಿದರೆ, ಮಾಸ್ಕ್‌ ಧರಿಸದಿದ್ದರೆ ದಂಡ ವಿಧಿಸಲಾಗುತ್ತಿದೆ. ಆದರೆ, ಬಿಜೆಪಿ ಮಾತ್ರ ಜನಾಶೀರ್ವಾದ ಯಾತ್ರೆ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದು, ಭಾರಿ ಸಂಖ್ಯೆಯಲ್ಲಿಜನರನ್ನು ಸೇರಿಸಿ ಕೊರೊನಾ ಪ್ರಸರಣಕ್ಕೆ ನಾಂದಿ ಹಾಡುತ್ತಿದೆ ಎಂದು ಕಾಂಗ್ರೆಸ್‌, ಎನ್‌ಸಿಪಿ ಸೇರಿದಂತೆ ಅನೇಕ ಪ್ರತಿಪಕ್ಷಗಳ ನಾಯಕರು ಕಿಡಿಕಾರಿದ್ದಾರೆ. ಬಿಜೆಪಿಯನ್ನು ಟಾರ್ಗೆಟ್‌ ಮಾಡಲಾಗುತ್ತಿಲ್ಲ. ಬದಲಿಗೆ ಕೊರೊನಾ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ಬಿಜೆಪಿ ವರ್ತಿಸಲಿ ಎಂದು ಸೂಚಿಸುತ್ತಿದ್ದೇವೆ ಎಂದು ಶಿವಸೇನೆ ನಾಯಕ ಏಕನಾಥ್‌ ಖಡ್ಸೆ ಹೇಳಿದ್ದಾರೆ.