ರಾಜ್ಯದಲ್ಲಿ ಸೆಮಿ ಲಾಕ್‌ಡೌನ್‌ ಘೋಷಣೆ: ಊರಿನತ್ತ ಹೆಜ್ಜೆ ಇಟ್ಟ ಬೆಂಗಳೂರಿನ ವಲಸೆ ಕಾರ್ಮಿಕರು!

ರಾಜ್ಯದಲ್ಲಿ ಸೆಮಿ ಲಾಕ್‌ಡೌನ್‌ ಘೋಷಣೆಯಾಗಿರುವುದರಿಂದ ರಾಜ್ಯ ರಾಜಧಾನಿ ಬೆಂಗಳೂರಿನ ವಲಸೆ ಕಾರ್ಮಿಕರು ತಮ್ಮ ಊರಿನತ್ತ ತೆರಳುತ್ತಿದ್ದಾರೆ. ಗಂಟು-ಮೂಟೆ ಕಟ್ಟಿ ತಮ್ಮ ಕುಟುಂಬದ ಸದಸ್ಯರೊಂದಿಗೆ ವಲಸೆ ಕಾರ್ಮಿಕರು ಮೆಟ್ರೋ ಸ್ಟೇಷನ್‌, ಬಸ್ ನಿಲ್ಧಾಣಕ್ಕೆ ಬಂದು ತಲುಪಿದ್ದು, ಊರಿನತ್ತ ಪ್ರಯಾಣ ಬೆಳೆಸುತ್ತಿದ್ದಾರೆ.

ರಾಜ್ಯದಲ್ಲಿ ಸೆಮಿ ಲಾಕ್‌ಡೌನ್‌ ಘೋಷಣೆ: ಊರಿನತ್ತ ಹೆಜ್ಜೆ ಇಟ್ಟ ಬೆಂಗಳೂರಿನ ವಲಸೆ ಕಾರ್ಮಿಕರು!
Linkup
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ರಾಜ್ಯ ಸರಕಾರ ಕಠಿಣ ಕ್ರಮ ಕೈಗೊಂಡಿದೆ. ಈ ಸಂಬಂಧ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿರುವ ರಾಜ್ಯ ಸರಕಾರ ನೈಟ್‌ ಕರ್ಫ್ಯೂ, ವಾರಾಂತ್ಯದಲ್ಲಿ ಸಂಪೂರ್ಣ ಕರ್ಫ್ಯೂ ಹೇರಿದೆ. ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತಕ್ಕೆ ಆದೇಶ ಕೂಡ ನೀಡಿದೆ. ಇನ್ನು, ವಾರಾಂತ್ಯದ ಲಾಕ್‌ಡೌನ್‌ನಿಂದ ಬೆದರಿರುವ ತಮ್ಮ ಊರುಗಳತ್ತ ತೆರಳಲು ಆರಂಭಿಸಿದ್ದಾರೆ. ಕಳೆದ ವರ್ಷದಂತೆ ತಮ್ಮ ಜೀವನ ಸಂಕಷ್ಟಕ್ಕೆ ಈಡಾಗುವುದು ಬೇಡ ಎನ್ನುವ ಉದ್ದೇಶದಿಂದ ರಾಜ್ಯ ರಾಜಧಾನಿಯ ವಲಸೆ ಕಾರ್ಮಿಕರು ಗಂಟು-ಮೂಟೆ ಕಟ್ಟಿ, ತಮ್ಮ ಕುಟುಂಬಗಳೊಂದಿಗೆ ತಮ್ಮ ಊರುಗಳನ್ನು ಸೇರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಸಂಪೂರ್ಣ ಲಾಕ್‌ಡೌನ್‌ ಆಗುವ ಸಾಧ್ಯತೆ ಇರಬಹುದು ಎಂದು ಅಂದುಕೊಂಡಿರುವ ವಲಸೆ ಕಾರ್ಮಿಕರು ತಮ್ಮ ಊರಿನತ್ತ ಈಗಲೇ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದಲೇ ಬೆಂಗಳೂರಿನ ಹಲವು ರೈಲ್ವೆ ಸ್ಟೇಷನ್‌ಗಳಲ್ಲಿ ಹಾಗೂ ಬಸ್‌ ಸ್ಟ್ಯಾಂಡ್‌ಗಳಲ್ಲಿ ವಲಸೆ ಕಾರ್ಮಿಕರು ತಮ್ಮ ವಸ್ತುಗಳೊಂದಿಗೆ ಊರಿಗೆ ತೆರಳಲು ನಿಂತಿದ್ದು ಕಂಡು ಬಂತು. ಇನ್ನು ಕೆಲವರು ನಿನ್ನೆ ರಾತ್ರಿಯೇ ತಮ್ಮ ಊರಿನತ್ತ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿರುವ ಕರ್ನಾಟಕದವರು ಸೇರಿ ಬೇರೆ ರಾಜ್ಯಗಳ ಜನರು ಕೂಡ ತಮ್ಮ ಗ್ರಾಮಗಳಿಗೆ ತೆರಳುತ್ತಿರುವ ದೃಶ್ಯ ಕಂಡು ಬಂತು. ಪರಿಣಾವೇನು?ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತೀ ಹೆಚ್ಚು ವಲಸೆ ಕಾರ್ಮಿಕರಿದ್ದಾರೆ. ವಿವಿಧ ಕೆಲಸಗಳನ್ನು ಮಾಡುತ್ತಿರುವ ವಲಸೆ ಕಾರ್ಮಿಕರಿಂದ ಬೆಂಗಳೂರಿನ ಉದ್ಯಮ ಬೆಳವಣಿಗೆ ಕಾಣುತ್ತಿದೆ. ಇದೀಗ ವಲಸೆ ಕಾರ್ಮಿಕರು ಊರಿನತ್ತವ ತೆರಳಿದ್ದು, ಅಭಿವೃದ್ದಿ ಕುಂಠಿತವಾಗಲಿದೆ. ಅಲ್ಲದೇ ಕೆಲಸಗಾರರ ಸಮಸ್ಯೆಯೂ ಎದುರಾಗಬಹುದು. ಕಳೆದ ವರ್ಷದಂತೆ ಈ ಬಾರಿಯು ಉದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ.