ರವೀಂದ್ರ ಕಲಾಕ್ಷೇತ್ರದಲ್ಲಿ ನಟ ಸಂಚಾರಿ ವಿಜಯ್ ಅಂತಿಮ ದರ್ಶನ

ರವೀಂದ್ರ ಕಲಾಕ್ಷೇತ್ರದಲ್ಲಿ ಅಭಿಮಾನಿಗಳು, ಸ್ನೇಹಿತರು, ತಾರೆಯರು ನೆರೆದಿದ್ದು, ಸಂಚಾರಿ ವಿಜಯ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರವೀಂದ್ರ ಕಲಾಕ್ಷೇತ್ರದಲ್ಲಿ ನಟ ಸಂಚಾರಿ ವಿಜಯ್ ಅಂತಿಮ ದರ್ಶನ
Linkup
ರಸ್ತೆ ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ನಟ ಇಹಲೋಕ ತ್ಯಜಿಸಿದ್ದಾರೆ. ಬ್ರೇನ್ ಫೇಲ್ಯೂರ್ ಮತ್ತು ಬ್ರೇನ್ ಡೆಡ್ ಆದ ಪರಿಣಾಮ ಇಂದು ಬೆಳಗಿನ ಜಾವ 3.34ರ ಸುಮಾರಿಗೆ ನಟ ಸಂಚಾರಿ ವಿಜಯ್ ಕೊನೆಯುಸಿರೆಳೆದರು. ಅಂಗಾಂಗ ದಾನದ ಪ್ರಕ್ರಿಯೆ ಮುಗಿದ ಬಳಿಕ ನಟ ಸಂಚಾರಿ ವಿಜಯ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೀಡಲಾಯಿತು. ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ನಟ ಸಂಚಾರಿ ವಿಜಯ್ ಪಾರ್ಥೀವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ತರಲಾಗಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ನಟ ಸಂಚಾರಿ ವಿಜಯ್ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ರವೀಂದ್ರ ಕಲಾಕ್ಷೇತ್ರದಲ್ಲಿ ಅಭಿಮಾನಿಗಳು, ಸ್ನೇಹಿತರು, ತಾರೆಯರು ನೆರೆದಿದ್ದು, ಸಂಚಾರಿ ವಿಜಯ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಸಂಜೆಯೊಳಗೆ ಹುಟ್ಟೂರು ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಂಚಾರಿ ವಿಜಯ್ ಅಂತ್ಯ ಸಂಸ್ಕಾರ ನಡೆಯಲಿದೆ.