ಲಾಸ್ಟ್‌ ಬೆಂಚ್‌ ಹುಡುಗನಾಗಿ ನಟ ಪ್ರಮೋದ್‌ ಮಿಂಚಿಂಗ್; 'ಅಲಂಕಾರ್ ವಿದ್ಯಾರ್ಥಿ'ಗೆ ಧನಂಜಯ್ ಸಾಥ್‌

'ಗೀತಾ ಬ್ಯಾಂಗಲ್ ಸ್ಟೋರ್', 'ಪ್ರೀಮಿಯರ್ ಪದ್ಮಿನಿ', 'ಮತ್ತೆ ಉದ್ಭವ' ಸಿನಿಮಾಗಳಲ್ಲಿ ನಟಿಸಿ, ಗಮನಸೆಳೆದಿದ್ದ ನಟ ಪ್ರಮೋದ್, 'ರತ್ನನ್ ಪ್ರಪಂಚ' ಚಿತ್ರದಿಂದ ಮತ್ತಷ್ಟು ಜನಪ್ರಿಯತೆಯನ್ನು ಪಡೆದುಕೊಂಡರು. ಇದೀಗ ಅವರು 'ಅಲಂಕಾರ್ ವಿದ್ಯಾರ್ಥಿ' ಎಂಬ ಡಿಫರೆಂಟ್ ಸಿನಿಮಾಗೆ ಹೀರೋ ಆಗಿದ್ದಾರೆ.

ಲಾಸ್ಟ್‌ ಬೆಂಚ್‌ ಹುಡುಗನಾಗಿ ನಟ ಪ್ರಮೋದ್‌ ಮಿಂಚಿಂಗ್; 'ಅಲಂಕಾರ್ ವಿದ್ಯಾರ್ಥಿ'ಗೆ ಧನಂಜಯ್ ಸಾಥ್‌
Linkup
ಕನ್ನಡ ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿ, ನಂತರ 'ಗೀತಾ ಬ್ಯಾಂಗಲ್ ಸ್ಟೋರ್' ಸಿನಿಮಾದ ಮೂಲಕ ಹೀರೋ ಆಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟವರು . ಆ ಬಳಿಕ 'ಪ್ರೀಮಿಯರ್ ಪದ್ಮಿನಿ', 'ಮತ್ತೆ ಉದ್ಭವ', 'ರತ್ನನ್ ಪ್ರಪಂಚ' ಮುಂತಾದ ಸಿನಿಮಾಗಳಲ್ಲಿ ನಟಿಸಿ, ಗಮನಸೆಳೆದಿದ್ದಾರೆ. ಒಂದಷ್ಟು ಹೊಸ ಸಿನಿಮಾಗಳ ಕೆಲಸಗಳು ಚಾಲ್ತಿಯಲ್ಲಿವೆ. ಇದೀಗ ಅವರ ನಟನೆಯ ಹೊಸ ಚಿತ್ರವೊಂದು ಶುರುವಾಗಿದೆ. ಚಿತ್ರಕ್ಕೆ '' ಎಂಬ ಡಿಫರೆಂಟ್ ಟೈಟಲ್ ಇಡಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ವಿನಾಯಕ-ವೆಂಕಟೇಶ್ವರ ದೇವಾಲಯದಲ್ಲಿ ನಡೆದ ಈ ಚಿತ್ರದ ಮುಹೂರ್ತ ಸಮಾರಂಭಕ್ಕೆ ನಟ 'ಡಾಲಿ' ಧನಂಜಯ ಮುಖ್ಯ ಅತಿಥಿಯಾಗಿ ಆಗಮಿಸಿ, ಇಡೀ ತಂಡಕ್ಕೆ ಶುಭ ಹಾರೈಸಿದರು. 'ಅಲಂಕಾರ್ ವಿದ್ಯಾರ್ಥಿ – ಇದು ಎಪ್ಪತ್ತು ಎಂಭತ್ತರ ದಶಕದಲ್ಲಿ ಲಾಸ್ಟ್ ಬೆಂಚ್ ವಿದ್ಯಾರ್ಥಿಗಳನ್ನು ಕರೆಯುತ್ತಿದ್ದ ರೀತಿ. ನಮ್ಮ ಸಿನಿಮಾದಲ್ಲಿ ಹೀರೋ ಕೂಡ ಹಾಗೇ. ಓದು ತಲೆಗೆ ಹತ್ತದಿದ್ದರೂ ಅಲಂಕಾರಕ್ಕಾಗಿ ಕಾಲೇಜಿಗೆ ಬರುತ್ತಿರುತ್ತಾನೆ. ಆದರೂ ಕಾಲೇಜಿನಲ್ಲಿ ಪಾಠ ಮಾಡುವ ಗುರುಗಳಿಂದ ಹಿಡಿದು ಎಲ್ಲರಿಗೂ ಇವನೆಂದರೆ ಒಂಥರಾ ಮುದ್ದು. ಲಾಸ್ಟ್ ಬೆಂಚಲ್ಲೇ ಓದಿಕೊಂಡಿದ್ದವನು ಕಾಲೇಜಿಗೆ ಸೇರುವ ಪ್ರೋಸೆಸ್ ಹೇಗಿರುತ್ತದೆ? ಪ್ರಿನ್ಸಿಪಾಲ್ ಜೊತೆ ಆತನ ಕಮ್ಯುನಿಕೇಷನ್ ಯಾವ ರೀತಿ ಇರುತ್ತದೆ? ಅವನ ತಂದೆ ತಾಯಿ, ಅವನಿಗೆ ಸಿಗುವ ಸ್ನೇಹಿತರು, ಜೊತೆಯಾಗುವ ಹುಡುಗಿಯ ಸುತ್ತ ಕತೆ ತೆರೆದುಕೊಳ್ಳುತ್ತದೆ. ಪಾಸಾಗಿರುವ ಹುಡುಗನಿಗೆ ಬೇಸಿಗೆ ಕಾಲದಲ್ಲಿ ಮಾತ್ರ ರಜೆ ಸಿಗುತ್ತದೆ. ಅದೇ ಫೇಲಾಗಿ ಎರಡು ವರ್ಷ ಕಾಲ ಕಳೆದವನು ಬೇಸಿಗೆ, ಮಳೆ, ಚಳಿ ಮೂರೂ ಸೀಸನ್‌ನಲ್ಲಿಯೂ ಮನೆಯಲ್ಲೇ ಇರುತ್ತಾನೆ. ಇಂಥಾ ಹುಡುಗ ಮ್ಯಾನೇಜ್ ಮೆಂಟ್ ಸೀಟ್ ತಗೊಂಡು ಕಾಲೇಜಿಗೆ ಬರ್ತಾನೆ. ಈತನ ಬದುಕು ಹೇಗಿರುತ್ತದೆ ಅನ್ನೋದೇ ಅಲಂಕಾರ್ ವಿದ್ಯಾರ್ಥಿ ಚಿತ್ರದ ತಿರುಳು. ಡಿಫರೆಂಟ್ ಜಾನರ್ ಸಿನಿಮಾ 'ನಮ್ಮ ನಿರ್ದೇಶಕರು ಬಹಳ ಹಿಂದೆಯೇ ಕಥೆ ಹೇಳಿದ್ದರು. ಇಡೀ ಸಿನಿಮಾವನ್ನು ಡೈಲಾಗ್ ಸಮೇತ ಎರಡು ಗಂಟೆ ಹಾಗೇ ನರೇಷನ್ ಮಾಡುತ್ತಾರೆ. ಸಾಕಷ್ಟು ವರ್ಕ್ ಮಾಡಿಕೊಂಡಿದ್ದಾರೆ. ಸಿನಿಮಾಗೆ ಏನು ಕೊಡಬೇಕು ಎನ್ನುವುದರ ಸ್ಪಷ್ಟತೆ ಇದೆ. 'ರತ್ನನ್ ಪ್ರಪಂಚ' ಚಿತ್ರದ ನಂತರ ನನಗೆ ಬಹುತೇಕ ಮಾಸ್ ಮತ್ತು ಆಕ್ಷನ್ ಕಥೆಗಳೇ ಬರುತ್ತಿವೆ. ಈ ನಡುವೆ ಇಂಥದ್ದೊಂದು ಜಾನರ್‌ನ ಸಿನಿಮಾ ಇರಲಿ ಅಂತಾ ತುಂಬಾ ಇಷ್ಟಪಟ್ಟು ಒಪ್ಪಿಕೊಂಡಿದ್ದೀನಿ' ಎನ್ನುತ್ತಾರೆ ಪ್ರಮೋದ್. 'ಅಲಂಕಾರ್ ವಿದ್ಯಾರ್ಥಿ' ಅಂದರೇನು? 'ಅಲಂಕಾರ್ ವಿದ್ಯಾರ್ಥಿ ಅಂದರೆ ಏನು ಅನ್ನೋದು ಹಲವರ ಪ್ರಶ್ನೆಯಾಗಿತ್ತು. ಇದಕ್ಕೆ ಉತ್ತರ ನೀಡಲೆಂದೇ ವಿಶೇಷ ಪೋಸ್ಟರ್ ಅನಾವರಣ ಮಾಡಿದ್ದೇವೆ. 'ಈ ಕೆಳಗೆ ನಮೂದಿಸಿರುವ ವ್ಯಕ್ತಿಯು ತನ್ನ ತಾಯಿಯ ಸಹಾಯದಿಂದ ಪಾಸಾದ' ಎಂದು ಪೋಸ್ಟರಿನಲ್ಲಿ ಹೇಳಲಾಗಿದೆ. ತಾಯಿ ಯಾವ ರೀತಿ ಸಹಾಯ ಮಾಡುತ್ತಾಳೆ ಅನ್ನೋದು ಚಿತ್ರದಲ್ಲಿದೆ. ಇಡೀ ಸಿನಿಮಾದಲ್ಲಿ ಸಂಭಾಷಣೆ ಪ್ರಾಮುಖ್ಯತೆ ಪಡೆಯುತ್ತದೆ' ಎನ್ನುತ್ತಾರೆ ನಿರ್ದೇಶಕ ಕೇಶವ್ ಎಸ್ ಇಂಡಲವಾಡಿ. ಶಾಲಾ ಕಾಲೇಜು ದಿನಗಳಿಂದಲೂ ಸ್ಕಿಟ್, ಕಿರುಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದ ಕೇಶವ್ 2015ರಲ್ಲಿ ಹಿರಿಯ ನಿರ್ದೇಶಕ ಭಗವಾನ್ ಅವರ ಬಳಿ ನಿರ್ದೇಶನದ ಕೋರ್ಸು ಮುಗಿಸಿದರು. ನಂತರ ಸಿಂಪಲ್ ಸುನಿ ಅವರೊಂದಿಗೆ 'ಆಪರೇಷನ್ ಅಲಮೇಲಮ್ಮ' ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಕಳೆದ ಒಂದು ವರ್ಷದಿಂದ ಕೂತು ಕಥೆ ಸಿದ್ದಪಡಿಸಿ, ಈಗ ಚೊಚ್ಚಲ ನಿರ್ದೇಶನ ಆರಂಭಿಸಿದ್ದಾರೆ. ಬೆಂಗಳೂರಿನಲ್ಲಿ ಶೂಟಿಂಗ್‌ 'ನಾನು ನಿಜ ಜೀವನದಲ್ಲಂತೂ rank ಸ್ಟೂಡೆಂಟ್ ಆಗಿರಲಿಲ್ಲ. ಆದರೆ ಅಲಂಕಾರ್ ವಿದ್ಯಾರ್ಥಿಯ ಪಾತ್ರದ ಮೂಲಕ ಆ ಬಯಕೆಯನ್ನು ಈಡೇರಿಸಿಕೊಳ್ಳುತ್ತಿದ್ದೇನೆ' ಎಂಬುದು ಚಿತ್ರದ ನಾಯಕಿ ಅರ್ಚನಾ ಕೊಟ್ಟಿಗೆ ಮಾತು. ರೋಹಿತ್ ಗೌಡ, ಯೋಗೇಶ್ ಶ್ರೀನಿವಾಸ್ ಮತ್ತು ಮಧು ಆರಾಧ್ಯ ಈ ಸಿನಿಮಾಗೆ ಹಣ ಹಾಕುತ್ತಿದ್ದಾರೆ. ಬೆಂಗಳೂರಿನಲ್ಲಿ 45 ದಿನಗಳ ಚಿತ್ರೀಕರಣ ನಡೆಸಿ, ಹಾಡುಗಳಿಗೆ ಮಾತ್ರ ಚಿಕ್ಕಮಗಳೂರು ಸೇರಿದಂತೆ ಇತರೆ ಕಡೆಗೆ ಹೋಗಲಿದೆ ಚಿತ್ರತಂಡ. ಪ್ರಮೋದ್ ಅವರ ಪೋಷಕರ ಪಾತ್ರದಲ್ಲಿ ಅಚ್ಯುತ್ ಕುಮಾರ್ ಮತ್ತು ಸುಧಾ ಬೆಳವಾಡಿ ಕಾಣಿಸಿಕೊಳ್ಳಲಿದ್ದಾರೆ. ಸ್ನೇಹಿತರಾಗಿ ರಜನಿಕಾಂತ್ ಮತ್ತು ನಿತಿನ್ ಅದ್ವಿ ಪಾತ್ರ ನಿರ್ವಹಿಸಲಿದ್ದಾರೆ. ಚಿತ್ರಕ್ಕೆ ರಘು ದೀಕ್ಷಿತ್ ಸಂಗೀತ ನೀಡುತ್ತಿರುವುದು ವಿಶೇಷ. ನಾಲ್ಕು ಹಾಡುಗಳಿದ್ದು, ಅದರಲ್ಲಿ ಎರಡು ಹಾಡುಗಳಿಗೆ ನಿರ್ದೇಶಕ ಕೇಶವ್ ಅವರೇ ಸಾಹಿತ್ಯ ಬರೆಯುತ್ತಿದ್ದಾರೆ.